AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಂಕು ಸಿಂಗ್​ಗೆ ದಾವೂದ್ ಇಬ್ರಾಹಿಂ ಗ್ಯಾಂಗ್​ನಿಂದ ಬೆದರಿಕೆ! ಕೇಳಿದ್ದು ಎಷ್ಟು ಕೋಟಿ ಗೊತ್ತಾ?

Rinku Singh Threatened: ಟೀಂ ಇಂಡಿಯಾ ಆಟಗಾರ ರಿಂಕು ಸಿಂಗ್‌ಗೆ ದಾವೂದ್ ಇಬ್ರಾಹಿಂ ಗ್ಯಾಂಗ್‌ನಿಂದ 5 ಕೋಟಿ ರೂಪಾಯಿ ಸುಲಿಗೆಗೆ ಬೆದರಿಕೆ ಕರೆಗಳು ಬಂದಿವೆ. ಫೆಬ್ರವರಿ-ಏಪ್ರಿಲ್ ನಡುವೆ ಮೂರು ಬೆದರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ವೆಸ್ಟ್ ಇಂಡೀಸ್‌ನಲ್ಲಿ ಬಂಧಿಸಿದ್ದಾರೆ. ರಿಂಕು ಸಿಂಗ್ ತನ್ನ ಐಪಿಎಲ್ ಯಶಸ್ಸಿನ ನಂತರ ಕ್ರಿಕೆಟ್ ಅಕಾಡೆಮಿ ತೆರೆದಿದ್ದರು. ಈ ಪ್ರಕರಣದಲ್ಲಿ ಹಣಕ್ಕಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ರಿಂಕು ಸಿಂಗ್​ಗೆ ದಾವೂದ್ ಇಬ್ರಾಹಿಂ ಗ್ಯಾಂಗ್​ನಿಂದ ಬೆದರಿಕೆ! ಕೇಳಿದ್ದು ಎಷ್ಟು ಕೋಟಿ ಗೊತ್ತಾ?
Rinku Singh
ಪೃಥ್ವಿಶಂಕರ
|

Updated on:Oct 09, 2025 | 4:35 PM

Share

ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಂಕು ಸಿಂಗ್‌ಗೆ (Rinku Singh) ಭೂಗತ ಲೋಕದಿಂದ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಯಾಗಿದೆ. ಮಾಹಿತಿಯ ಪ್ರಕಾರ, ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಗ್ಯಾಂಗ್ ಸದಸ್ಯರಿಂದ ರಿಂಕು ಸಿಂಗ್‌ಗೆ ಬೆದರಿಕೆ ಹಾಕಲಾಗಿದೆ. ಈ ವರ್ಷದ ಫೆಬ್ರವರಿ ಮತ್ತು ಏಪ್ರಿಲ್ ನಡುವೆ ದಾವೂದು ಸಹಚರರು, ರಿಂಕು ಸಿಂಗ್​ಗೆ ಮೂರು ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ. ಡಿ-ಕಂಪನಿಯಿಂದ ಬಂದ ಈ ಬೆದರಿಕೆಯ ಸಂದೇಶದಲ್ಲಿ ರಿಂಕು ಸಿಂಗ್ ಅವರಿಂದ 5 ಕೋಟಿ ರೂ. ಸುಲಿಗೆಗೆ ಬೇಡಿಕೆ ಇಟ್ಟಿವೆ ಎಂದು ವರದಿಯಾಗಿದೆ. ಆದಾಗ್ಯೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ದಾವೂದ್ ಸಹಚರರನ್ನು ಬಂಧಿಸಿದ್ದಾರೆ.

5 ಕೋಟಿ ರೂ.ಗೆ ಬೇಡಿಕೆ

ಐಪಿಎಲ್​ನಲ್ಲಿ ಬೆಳಕಿಗೆ ಬಂದ ರಿಂಕು ಸಿಂಗ್, ಒಂದೇ ಓವರ್​ನಲ್ಲಿ ಸತತ 5 ಸಿಕ್ಸರ್ ಸಿಡಿಸಿ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದರು. ಆ ಬಳಿಕ ಟೀಂ ಇಂಡಿಯಾಕ್ಕೂ ಆಯ್ಕೆಯಾದರು. ಇದರಿಂದ ಅವರ ಐಪಿಎಲ್ ಸಂಬಳವೂ ಹೆಚ್ಚಾಗಿತ್ತು. ಇದರಿಂದಾಗಿ ರಿಂಕು ಸಿಂಗ್ ತಮ್ಮ ತವರಿನಲ್ಲಿ ಬಡ ಕ್ರಿಕೆಟಿಗರಿಗಾಗಿ ಅಕಾಡೆಮಿಯನ್ನು ತೆರೆದಿದ್ದರು. ಇದೀಗ ರಿಂಕು ಸಿಂಗ್​ಗೆ ಹಣಕ್ಕಾಗಿ ಬೆದರಿಕೆ ಹಾಕಿದ್ದಕ್ಕಾಗಿ ಪೊಲೀಸರು ಬಂಧಿಸಿದ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರು ಬೆದರಿಕೆ ಹಾಕಿರುವುದಾಗಿ ಒಪ್ಪಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ನಂಟು

5 ಕೋಟಿ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಆರೋಪಿಗಳಾದ ಮೊಹಮ್ಮದ್ ದಿಲ್ಶಾದ್ ಮತ್ತು ಮೊಹಮ್ಮದ್ ನವೀದ್ ಅವರನ್ನು ವೆಸ್ಟ್ ಇಂಡೀಸ್‌ನಲ್ಲಿ ಬಂಧಿಸಲಾಗಿದೆ. ಅಲ್ಲದೆ ವೆಸ್ಟ್ ಇಂಡೀಸ್ ಸರ್ಕಾರ ಈ ಇಬ್ಬರನ್ನು ಆಗಸ್ಟ್ 1 ರಂದು ಭಾರತಕ್ಕೆ ಹಸ್ತಾಂತರಿಸಿದೆ ಎಂದು ವರದಿಯಾಗಿದೆ.

ಫೈನಲ್‌ನಲ್ಲಿ ಏನು ಮಾಡುತ್ತೇವೆ ಎಂಬುದನ್ನು 20 ದಿನ ಮುಂಚೆಯೇ ಬರೆದುಕೊಟ್ಟಿದ್ದ ರಿಂಕು- ತಿಲಕ್

ವಾಸ್ತವವಾಗಿ ಮಾಜಿ ಶಾಸಕ ಬಾಬಾ ಸಿದ್ದಿಕಿ ಅವರ ಹತ್ಯೆಯ ನಂತರ ಅವರ ಮಗ ಜೀಶನ್ ಸಿದ್ದಿಕಿ ಅವರಿಂದ 10 ಕೋಟಿ ರೂಪಾಯಿಗಳ ಸುಲಿಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಈ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಾದ ನಂತರ, ಆರೋಪಿಗಳಲ್ಲಿ ಒಬ್ಬನು ರಿಂಕು ಸಿಂಗ್ ಅವರಿಗೆ ಕರೆ ಮಾಡಿ ಅವರಿಂದ ಸುಲಿಗೆ ಬೇಡಿಕೆ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾನೆ.

ಏಪ್ರಿಲ್ 19 ಮತ್ತು 21 ರ ನಡುವೆ ಜೀಶನ್ ಸಿದ್ದಿಕಿಗೆ ಹಣ ನೀಡುವಂತೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿತ್ತು ಎಂದು ಮುಂಬೈ ಪೊಲೀಸ್ ಅಪರಾಧ ವಿಭಾಗ ವರದಿ ಮಾಡಿದೆ. ಹಾಗೆಯೇ ರಿಂಕು ಸಿಂಗ್​ಗೆ ಫೆಬ್ರವರಿ ಮತ್ತು ಏಪ್ರಿಲ್ ನಡುವೆ ಮೂರು ಬೆದರಿಕೆಯ ಮೇಲ್​ಗಳನ್ನು ಕಳುಹಿಸಲಾಗಿತ್ತು ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Thu, 9 October 25

Follow Us
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್