Rishabh Pant: ರಿಷಭ್ ಪಂತ್ ಚೇತರಿಕೆ ಕಂಡು ಶಾಕ್ ಆದ ಬಿಸಿಸಿಐ: ಏಕದಿನ ವಿಶ್ವಕಪ್​ನಲ್ಲಿ ಕಣಕ್ಕೆ?

ರಿಷಭ್ ಪಂತ್ ಬಗ್ಗೆ ವಿಶೇಷ ಕಾಳಜಿ ವಹಿಸಿರುವ ಬಿಸಿಸಿಐ 2023ರ ಏಕದಿನ ವಿಶ್ವಕಪ್‌ಗೆ ಫಿಟ್‌ಗೊಳಿಸುವ ಪ್ರಯತ್ನವಾಗಿ, ಎನ್‌ಸಿಎನಲ್ಲಿ ಅವರ ಪುನರ್ವಸತಿಯನ್ನು ವೇಗವಾಗಿ ಟ್ರ್ಯಾಕ್ ಮಾಡಲು ಯೋಜಿಸುತ್ತಿದೆ.

Rishabh Pant: ರಿಷಭ್ ಪಂತ್ ಚೇತರಿಕೆ ಕಂಡು ಶಾಕ್ ಆದ ಬಿಸಿಸಿಐ: ಏಕದಿನ ವಿಶ್ವಕಪ್​ನಲ್ಲಿ ಕಣಕ್ಕೆ?
Rishabh Pant and Jay Shah
Follow us
|

Updated on: Jun 16, 2023 | 10:39 AM

ಕಳೆದ ವರ್ಷ ಡಿಸೆಂಬರ್ 30ರಂದು ನಡೆದ ಭೀಕರ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಭಾರತ ತಂಡದ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ (Rishabh Pant) ಇದೀಗ ವೇಗವಾಗಿ ಪುನಶ್ಚೇತನಕ್ಕೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಸ್ವತಃ ಪಂತ್ ಮಾಹಿತಿ ನೀಡಿದ್ದು, ಯಾವುದೇ ಬೆಂಬಲವಿಲ್ಲದೆ ಮೆಟ್ಟಿಲುಗಳನ್ನು ಏರುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಟೀಮ್​ ಇಂಡಿಯಾ (Team India) ಆಯ್ಕೆಗಾರರಿಗೆ ಹಾಗೂ ಅಭಿಮಾನಿಗಳಿಗೆ ಖುಷಿಯ ಸುದ್ದಿಯನ್ನು ನೀಡಿದ್ದಾರೆ. ಪಂತ್ ಅವರ ಚೇತರಿಕೆ ಕಂಡು ಬಿಸಿಸಿಐ (BCCI), 2023ರ ಅಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡಕ್ಕೆ ಅವರನ್ನು ಆಯ್ಕೆ ಮಾಡುವ ಯೋಜನೆ ಹಾಕಿಕೊಂಡಿದೆ ಎಂಬುದಾಗಿ ವರದಿಯಾಗಿದೆ.

ಪಂತ್ ಬಗ್ಗೆ ವಿಶೇಷ ಕಾಳಜಿ ವಹಿಸಿರುವ ಬಿಸಿಸಿಐ 2023ರ ಏಕದಿನ ವಿಶ್ವಕಪ್‌ಗೆ ಫಿಟ್‌ಗೊಳಿಸುವ ಪ್ರಯತ್ನವಾಗಿ, ಎನ್‌ಸಿಎನಲ್ಲಿ ಅವರ ಪುನರ್ವಸತಿಯನ್ನು ವೇಗವಾಗಿ ಟ್ರ್ಯಾಕ್ ಮಾಡಲು ಯೋಜಿಸುತ್ತಿದೆ. ರಿಷಭ್ ಪಂತ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ನಡೆಸುತ್ತಿದ್ದಾರೆ. ಎನ್‌ಸಿಎಯಲ್ಲಿ ಪಂತ್ ಜೊತೆ ಸಹ ಆಟಗಾರರಾದ ಜಸ್​ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಮತ್ತು ಪ್ರಸಿದ್ಧ್ ಕೃಷ್ಣ ಕೂಡ ಇದ್ದಾರೆ.

ಇದನ್ನೂ ಓದಿ
Image
R Ashwin: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​​ನಲ್ಲಿ ಅವಕಾಶ ಸಿಗದ ಬಗ್ಗೆ ಮೌನ ಮುರಿದ ಆರ್. ಅಶ್ವಿನ್: ಏನಂದ್ರು ಗೊತ್ತೇ?
Image
The Ashes, 2023: ಇಂದಿನಿಂದ ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವೆ ಪ್ರತಿಷ್ಠಿತ ಆ್ಯಶಸ್ ಸರಣಿ ಆರಂಭ: ಭಾರತದಲ್ಲಿ ಹೇಗೆ ವೀಕ್ಷಿಸುವುದು?
Image
Asia Cup 2023: ಟೀಮ್ ಇಂಡಿಯಾಗೆ ಬಂಪರ್ ಸುದ್ದಿ: ಬುಮ್ರಾ, ಶ್ರೇಯಸ್ ಅಯ್ಯರ್ ಕಮ್​ಬ್ಯಾಕ್​ಗೆ ವೇದಿಕೆ ಸಜ್ಜು
Image
Duleep Trophy 2023: ದುಲೀಪ್ ಟ್ರೋಫಿ: 6 ತಂಡಗಳು ಪ್ರಕಟ

Ashes 2023 Schedule: ಆ್ಯಶಸ್ ಸರಣಿ ವೇಳಾಪಟ್ಟಿ: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ

ಎನ್‌ಸಿನಲ್ಲಿ ಕೋಲಿನ ಸಹಾಯದಿಂದ ಸ್ವಲ್ಪ ಸ್ಟ್ರೆಚಿಂಗ್ ಮಾಡುತ್ತಿರುವ ಸ್ಟೋರಿ ಮತ್ತು ಫೋಟೋಗಳನ್ನು ಪಂತ್ ಅವರು ತಮ್ಮ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ವಿಡಿಯೋಗೆ ಶೀರ್ಷಿಕೆಯೊಂದನ್ನು ಬರೆದಿರುವ ಪಂತ್ ಅವರು ಶೀಘ್ರವಾಗಿ ಚೇತರಿಸಿಕೊಂಡಿದ್ದಕ್ಕಾಗಿ ತನ್ನನ್ನು ಅನೇಕರು ಶ್ಲಾಘಿಸಿದ್ದಾರೆ ಮತ್ತು ಮೆಟ್ಟಿಲುಗಳನ್ನು ಹತ್ತುವಂತಹ ಸರಳ ಕೆಲಸಗಳನ್ನು ಮಾಡುವುದು ಸಹ ಈಗ ಕಷ್ಟಕರವಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 30, 2022 ರಂದು, ಮುಂಜಾನೆ 5:30 ರ ಸುಮಾರಿಗೆ, ಪಂತ್ ಅವರು ತಮ್ಮ ತವರು ರೂರ್ಕಿಗೆ ಹೋಗುತ್ತಿರುವಾಗ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅವರ ಮರ್ಸಿಡಿಸ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಾಗ ಅದೃಷ್ಟವಶಾತ್​ ಬದುಕುಳಿದಿದ್ದರು. ಕಾರು ಅಪಘಾತದ ವೇಳೆ ಯುವ ಬ್ಯಾಟರ್​ ಅನೇಕ ಗಾಯಗಳಿಗೆ ಒಳಗಾಗಿದ್ದರು. ಹೀಗಾಗಿ 2023ರಲ್ಲಿ ಸಂಪೂರ್ಣ ಕ್ರಿಕೆಟ್ ಆಟವನ್ನು ಕಳೆದುಕೊಳ್ಳುವ ನಿರೀಕ್ಷೆಯಿತ್ತು. ಆದರೆ, ಪಂತ್ ಚೇತರಿಕೆಯ ವೇಗ ಕಂಡು ಮುಂಬರುವ ಏಕದಿನ ವಿಶ್ವಕಪ್​​ಗೆ ಇವರು ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ