AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant Accident: ಕಾರು ಅಪಘಾತದ ಬಳಿಕ ರಕ್ತದ ಮಡುವಿನಲ್ಲಿ ನರಳಾಡಿದ ರಿಷಬ್ ಪಂತ್; ವಿಡಿಯೋ ವೈರಲ್

Rishabh Pant Accident: ರಿಷಬ್ ಪಂತ್ ಅವರ ಕಾರು ಮುಂಜಾನೆ 5:30 ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೂರ್ಕಿ ಬಳಿಯ ಮೊಹಮ್ಮದ್‌ಪುರ ಜಟ್‌ನಲ್ಲಿ ಈ ಘಟನೆ ನಡೆದಿದೆ.

Rishabh Pant Accident: ಕಾರು ಅಪಘಾತದ ಬಳಿಕ ರಕ್ತದ ಮಡುವಿನಲ್ಲಿ ನರಳಾಡಿದ ರಿಷಬ್ ಪಂತ್; ವಿಡಿಯೋ ವೈರಲ್
ರಿಷಬ್ ಪಂತ್
TV9 Web
| Edited By: |

Updated on:Dec 30, 2022 | 2:14 PM

Share

ಶುಕ್ರವಾರ ಬೆಳಗ್ಗೆ ಭೀಕರ ಕಾರು ಅಪಘಾತಕ್ಕೊಳಗಾದ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ (Rishabh Pant) ಅವರು ಪ್ರಸ್ತುತ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಿಂದ ಉತ್ತರಾಖಂಡಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಪಂತ್ ಎಚ್ಚರ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂಬುದು ತಿಳಿದುಬಂದಿದೆ. ಭೀಕರ ಅಪಘಾತದ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಕಾರಿನ ಗಾಜನ್ನು ಹೊಡೆದು ಪಂತ್, ಕಾರಿನೊಳಗಿನಿಂದ ಹೊರಬಂದಿದ್ದಾರೆ. ಇದೀಗ, ಅಪಘಾತಕ್ಕೀಡಾದ ಬಳಿಕ ರಸ್ತೆ ಬದಿಯಲ್ಲಿ, ರಕ್ತದ ಮಡುವಿನಲ್ಲಿ ನರಳಾಡುತ್ತಿರುವ ಪಂತ್ ಅವರ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ.

ನಿದ್ರೆಗೆ ಜಾರಿದ್ದೆ ಅಪಘಾತಕ್ಕೆ ಕಾರಣ

ರಿಷಬ್ ಪಂತ್ ಅವರ ಕಾರು ಮುಂಜಾನೆ 5:30 ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೂರ್ಕಿ ಬಳಿಯ ಮೊಹಮ್ಮದ್‌ಪುರ ಜಟ್‌ನಲ್ಲಿ ಈ ಘಟನೆ ನಡೆದಿದೆ. ‘‘ಕಾರನ್ನು ಡ್ರೈವ್ ಮಾಡುವಾಗ ನಿದ್ರೆಗೆ ಜಾರಿದೆ. ಇದರ ಪರಿಣಾಮವಾಗಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ’’ ಎಂದು ಸ್ವತಃ ಪಂತ್ ಅವರೇ ಹೇಳಿಕೆ ನೀಡಿದ್ದಾರೆ. ಕೂಡಲೇ ಪಂತ್ ಅವರನ್ನು ರೂರ್ಕಿ ಆಸ್ಪತ್ರೆಗೆ ಕರೆದುಯ್ಯಲಾಗಿದ್ದು, ಅಲ್ಲಿಂದ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಡಿವೈಡರ್ ಮುರಿದು, ಎದುರು ರಸ್ತೆಯಲ್ಲಿ ಪಲ್ಟಿಯಾದ ಕಾರು; ಪಂತ್ ಕಾರು ಅಪಘಾತದ ಸಿಸಿಟಿವಿ ದ್ಯಶ್ಯ ನೋಡಿ

ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಹೇಳಿಕೆ ಪ್ರಕಾರ, ಅಪಘಾತದ ಸಮಯದಲ್ಲಿ ಕಾರಿನಲ್ಲಿ ಕ್ರಿಕೆಟಿಗ ಒಬ್ಬರೇ ಇದ್ದರು. ಬೆಂಕಿ ಹೊತ್ತಿಕೊಂಡ ನಂತರ ಕಾರಿನಿಂದ ಹೊರಬರಲು ಪಂತ್, ವಿಂಡ್‌ಸ್ಕ್ರೀನ್ ಒಡೆದಿದ್ದಾರೆ ಎಂದು ಖಚಿತಪಡಿಸಿದ್ದಾರೆ.

(ಈ ವಿಡಿಯೋದಲ್ಲಿ ಕೆಲವು ಆಘಾತಕಾರಿ ಅಂಶಗಳಿರುವುದರಿಂದ ನಿಮ್ಮನ್ನು ವಿಚಲಿತರನ್ನಾಗಿಸಬಹದು, ಎಚ್ಚರ)

ಅಪಘಾತದ ಪರಿಣಾಮವಾಗಿ ಅವರ ತಲೆ, ಮೊಣಕಾಲು ಮತ್ತು ಮೊಣಕಾಲಿಗೆ ಗಾಯಗಳಾಗಿವೆ. ಅವರ ಕಾಲಿನಲ್ಲಿ ಮೂಳೆ ಮುರಿತ ಆಗಿರಬಹುದು. ಅವರು ಪ್ರಸ್ತುತ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೈದ್ಯರ ಹೇಳಿಕೆಯಲ್ಲಿ ಏನಿದೆ?

ಇಎಸ್‌ಪಿಎನ್‌ಕ್ರಿಕ್‌ಇನ್ಫೋ ವೆಬ್‌ಸೈಟ್ ಪ್ರಕಾರ, ಪಂತ್‌ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಿದ ಡಾ. ಸುಶೀಲ್ ನಗರ್ ಅವರ ಹೇಳಿಕೆಯ ಪ್ರಕಾರ, ಪಂತ್‌ಗೆ ತಲೆ ಮತ್ತು ಮೊಣಕಾಲು ಗಾಯಗಳಾಗಿವೆ. ಮೊದಲ ಎಕ್ಸ್-ರೇ ಪ್ರಕಾರ ಯಾವುದೇ ಮೂಳೆ ಮುರಿದಿಲ್ಲ. ಅಲ್ಲದೆ ಕಾರಿಗೆ ಬೆಂಕಿ ಹೊತ್ತಿಕೊಂಡರೂ ಸಹ ಪಂತ್​ಗೆ ಎಲ್ಲಿಯೂ ಸುಟ್ಟ ಗಾಯಗಳಾಗಿಲ್ಲ. ಹಣೆಯ ಮೇಲೆ, ಎಡಗಣ್ಣಿನ ಮೇಲೆ, ಮೊಣಕಾಲು ಮತ್ತು ಹಿಂಭಾಗದಲ್ಲಿ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:10 pm, Fri, 30 December 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ