AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant accident: ಹೊರಬಿತ್ತು ರಿಷಬ್ ಪಂತ್ ಎಕ್ಸ್-ರೇ ರಿಪೋರ್ಟ್; ಬಿಸಿಸಿಐ ನೀಡಿದ ಹೇಳಿಕೆಯಲ್ಲೇನಿದೆ?

Rishabh Pant accident: ‘ಪಂತ್ ಅವರ ಹಣೆಗೆ ಪೆಟ್ಟು ಬಿದ್ದಿದ್ದು, ಬೆಂಕಿಯಿಂದ ಬೆನ್ನಿನಲ್ಲಿ ಸುಟ್ಟ ಗಾಯಗಳಾಗಿವೆ. ಅಲ್ಲದೆ ಬಲ ಮೊಣಕಾಲಿನ ಅಸ್ಥಿರಜ್ಜು ಪಲ್ಲಟಗೊಂಡಿರುವುದು ಎಕ್ಸ್-ರೇಗಳಿಂದ ತಿಳಿದುಬಂದಿದೆ.

Rishabh Pant accident: ಹೊರಬಿತ್ತು ರಿಷಬ್ ಪಂತ್ ಎಕ್ಸ್-ರೇ ರಿಪೋರ್ಟ್; ಬಿಸಿಸಿಐ ನೀಡಿದ ಹೇಳಿಕೆಯಲ್ಲೇನಿದೆ?
ರಿಷಬ್ ಪಂತ್ ಎಕ್ಸ್-ರೇ ರಿಪೋರ್ಟ್
TV9 Web
| Edited By: |

Updated on:Dec 30, 2022 | 5:56 PM

Share

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ (Rishabh Pant) ರಸ್ತೆ ಅಪಘಾತಕ್ಕೀಡಾಗಿರುವುದು ಗೊತ್ತೇ ಇದೆ. ಶುಕ್ರವಾರ ಬೆಳಗ್ಗೆ ದೆಹಲಿಯಿಂದ ರೂರ್ಕಿಗೆ ಪ್ರಯಾಣಿಸುತ್ತಿದ್ದಾಗ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಪಂತ್ ಅವರನ್ನು ಡೆಹ್ರಾಡೂನ್‌ನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೂಡ ನೀಡಲಾಗಿದೆ. ಇತ್ತೀಚೆಗಷ್ಟೇ ಪಂತ್ ಅವರ ಆರೋಗ್ಯ ಸ್ಥಿತಿ ಕುರಿತು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ. ಬಿಸಿಸಿಐ (BCCI) ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ‘ಪಂತ್ ಅವರ ಹಣೆಗೆ ಪೆಟ್ಟು ಬಿದ್ದಿದ್ದು, ಬೆಂಕಿಯಿಂದ ಬೆನ್ನಿನಲ್ಲಿ ಸುಟ್ಟ ಗಾಯಗಳಾಗಿವೆ. ಅಲ್ಲದೆ ಬಲ ಮೊಣಕಾಲಿನ ಅಸ್ಥಿರಜ್ಜು ಪಲ್ಲಟಗೊಂಡಿರುವುದು ಎಕ್ಸ್-ರೇಗಳಿಂದ (x-ray report) ತಿಳಿದುಬಂದಿದೆ. ಹಿಮ್ಮಡಿ ಮತ್ತು ಕಾಲ್ಬೆರಳುಗಳ ಮೇಲೂ ಗಾಯಗಳಾಗಿವೆ. ಆದರೆ, ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಜೀವಕ್ಕೆ ಯಾವುದೇ ಅಪಾಯವಿಲ್ಲ’ ಎಂಬುದು ಹೇಳಿಕೆಯಲ್ಲಿ ಉಲ್ಲೇಖವಾಗಿದೆ.

ಹೇಳಿಕೆ ನೀಡಿದ ಜೈಶಾ

ಪಂತ್ ಅವರ ಸ್ಥಿತಿ ಈಗ ಉತ್ತಮವಾಗಿದೆ, ಇತರ ಪರೀಕ್ಷೆಗಳು ಮತ್ತು ಸ್ಕ್ಯಾನ್‌ಗಳು ನಡೆಯುತ್ತಿವೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈಶಾ ಹೇಳಿದ್ದಾರೆ. ಶಾ ತಮ್ಮ ಹೇಳಿಕೆಯಲ್ಲಿ, ‘ಪಂತ್ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಪಂತ್ ಅವರ ಆರೋಗ್ಯ ಸ್ಥಿತಿಯನ್ನು ಕಾಲಕಾಲಕ್ಕೆ ಗಮನಿಸಲಾಗುತ್ತಿದ್ದು, ಯಾವುದೇ ರೀತಿಯ ನೆರವು ನೀಡಲು ಸಿದ್ಧ ಎಂದು ಹೇಳಿದ್ದಾರೆ. ಅಲ್ಲದೆ ಪಂತ್ ಅವರ ಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಅಪಘಾತಕ್ಕೆ ಕಾರಣವೇನು?

ಆದರೆ ಈ ಅಪಘಾತಕ್ಕೆ ಕಾರಣವೇನು? ಅತೀ ವೇಗದಿಂದ ಈ ಅಪಘಾತ ಸಂಭವಿಸಿದೇಯಾ? ಅತಿ ವೇಗದಿಂದ ಕಾರು ನಿಯಂತ್ರಣ ತಪ್ಪಿ ಡಿವೈಡರ್​ಗೆ​ ಡಿಕ್ಕಿ ಹೊಡೆಯಿತಾ..? ಅಥವಾ ನಿದ್ರೆಯಲ್ಲಿ ಈ ಅವಘಡ ಸಂಭವಿಸಿದೆಯಾ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಅಪಘಾತದ ಸಮಯದಲ್ಲಿ ಪಂತ್ ಸೀಟ್ ಬೆಲ್ಟ್ ಧರಿಸಿದ್ರಾ ಎಂಬುದು ಸ್ಪಷ್ಟವಾಗಿಲ್ಲ.

Rishabh Pant accident: ರಿಷಬ್ ಪಂತ್ ಚೇತರಿಕೆಗಾಗಿ ಪ್ರಾರ್ಥಿಸಿದ ಪಾಕಿಸ್ತಾನ್ ಕ್ರಿಕೆಟಿಗರು

ಈ ಅವಘಡ ಸಂಭವಿಸುವ ವೇಳೆ ರಿಷಬ್ ಪಂತ್ ಮಾತ್ರ ಕಾರಿನಲ್ಲಿದ್ದು, ಅವರೇ ಕಾರನ್ನು ಓಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹೊತ್ತಿ ಉರಿಯುತ್ತಿದ್ದ ಕಾರಿನ ಗಾಜುಗಳನ್ನು ಒಡೆದು ರಿಷಬ್ ಪಂತ್ ಹೊರಗೆ ಬಂದಿದ್ದಾರೆ ಎನ್ನಲಾಗಿದೆ. ರಾತ್ರಿ ಪ್ರಯಾಣದ ಕಾರಣ ಕೊಂಚ ತೂಕಡಿಕೆಯಾಗಿದ್ದು, ಕ್ಷಣಾರ್ಧದಲ್ಲಿ ಅಪಘಾತ ಸಂಭವಿಸಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಅಪಘಾತದಿಂದ ರಿಷಬ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Fri, 30 December 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್