AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ವಿರಾಟ್ ಕೊಹ್ಲಿಯನ್ನು ರಿಷಭ್ ಪಂತ್ ಹಿಂದಿಕ್ಕಲಿದ್ದಾರೆ ಎಂದ ನೆಟ್ಟಿಗರು

IND vs SA 5th T20: ಟೀಮ್ ಇಂಡಿಯಾ ಇದೇ ಮೈದಾನದಲ್ಲಿ 2017 ರಲ್ಲಿ ಇಂಗ್ಲೆಂಡ್ ವಿರುದ್ದ 202 ರನ್​ ಕಲೆಹಾಕಿದ್ದು, ಇಲ್ಲಿನ ಗರಿಷ್ಠ ಸ್ಕೋರ್ ಆಗಿದೆ. ಅದು ಕೂಡ ಮೊದಲು ಬ್ಯಾಟ್ ಮಾಡಿ ಎಂಬುದು ವಿಶೇಷ.

Rishabh Pant: ವಿರಾಟ್ ಕೊಹ್ಲಿಯನ್ನು ರಿಷಭ್ ಪಂತ್ ಹಿಂದಿಕ್ಕಲಿದ್ದಾರೆ ಎಂದ ನೆಟ್ಟಿಗರು
Rishabh Pant
TV9 Web
| Updated By: ಝಾಹಿರ್ ಯೂಸುಫ್|

Updated on: Jun 19, 2022 | 7:39 PM

Share

ಭಾರತ-ಸೌತ್ ಆಫ್ರಿಕಾ ನಡುವಣ 5ನೇ ಟಿ20 ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. 5 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ಎರಡೆರಡು ಮ್ಯಾಚ್ ಗೆದ್ದಿರುವ ಕಾರಣ, ಇದು ಫೈನಲ್ ಪಂದ್ಯವಾಗಿದೆ. ಹೀಗಾಗಿ ಟ್ರೋಫಿ ಗೆಲ್ಲಲು ಎರಡೂ ತಂಡಗಳಿಂದ ಭರ್ಜರಿ ಪೈಪೋಟಿ ಕಂಡು ಬರಲಿದೆ. ಈ ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾರಣ ಟಾಸ್ ಬಹಳ ಮುಖ್ಯವಾಗುತ್ತೆ. ಏಕೆಂದರೆ ಚಿನ್ನಸ್ವಾಮಿ ಪಿಚ್​ ಚೇಸಿಂಗ್​ಗೆ ಸಹಕಾರಿ. ಹೀಗಾಗಿ ಟಾಸ್ ಗೆದ್ದ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು ಎನ್ನಲಾಗಿತ್ತು. ಅದರಂತೆ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ನಿರೀಕ್ಷೆಯಂತೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ವಿಶೇಷ ಎಂದರೆ ಇದರೊಂದಿಗೆ ಇಡೀ ಸರಣಿಯಲ್ಲಿ ಟಾಸ್ ಸೋತ ನಾಯಕನಾಗಿ ರಿಷಭ್ ಪಂತ್ ಹೊರಹೊಮ್ಮಿದ್ದಾರೆ.

ಅಂದರೆ ಸೌತ್ ಆಫ್ರಿಕಾ ವಿರುದ್ದದ 5 ಪಂದ್ಯಗಳಲ್ಲೂ ರಿಷಭ್ ಪಂತ್ ಒಂದೇ ಒಂದು ಬಾರಿ ಟಾಸ್ ಗೆದ್ದಿಲ್ಲ. ಇತ್ತ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ರಿಷಭ್ ಪಂತ್ ಟಾಸ್ ಸೋಲುವುದರೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಅದು ಕೂಡ ವಿರಾಟ್ ಕೊಹ್ಲಿಯ ಹೆಸರಿನೊಂದಿಗೆ ಎಂಬುದು ವಿಶೇಷ. ಅಂದರೆ ಟಾಸ್ ವಿಷಯದಲ್ಲಿ ವಿರಾಟ್ ಕೊಹ್ಲಿಯನ್ನು ನತದೃಷ್ಟ ನಾಯಕ ಎನ್ನಲಾಗುತ್ತದೆ. ಆದರೆ ಇದೇ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಂಡ ರಿಷಭ್ ಪಂತ್ ಸತತ ಐದು ಬಾರಿ ಟಾಸ್ ಸೋತಿದ್ದಾರೆ. ಅಷ್ಟೇ ಅಲ್ಲದೆ ಪಂತ್ ಅವರನ್ನು ಭವಿಷ್ಯದ ಟೀಮ್ ಇಂಡಿಯಾ ನಾಯಕ ಎನ್ನಲಾಗುತ್ತಿದೆ.

ಇದೇ ಕಾರಣದಿಂದ ಇದೀಗ ರಿಷಭ್ ಪಂತ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಒಂದು ವೇಳೆ ಪಂತ್ ಟೀಮ್ ಇಂಡಿಯಾ ನಾಯಕರಾದರೆ ಟಾಸ್ ವಿಷಯದಲ್ಲಿ ವಿರಾಟ್ ಕೊಹ್ಲಿಯನ್ನೇ ಮೀರಿಸಲಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಿಚಾಯಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಇದು ಜಸ್ಟ್ ಆರಂಭ. ಐದೂ ಪಂದ್ಯಗಳಲ್ಲೂ ಟಾಸ್ ಸೋತಿರುವ ರಿಷಭ್ ಪಂತ್ ತಾನೆಂತಹ ನತದೃಷ್ಟ ನಾಯಕ ಎಂಬುದನ್ನು ತೋರಿಸಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿಯನ್ನು ಟಾಸ್ ವಿಷಯದಲ್ಲಿ ಹಿಂದಿಕ್ಕಲಿದ್ದಾರೆ ಎಂದು ಅನೇಕರು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು 49 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಕೊಹ್ಲಿ ಟಾಸ್ ಗೆದ್ದಿದ್ದು ಕೇವಲ 19 ಬಾರಿ ಮಾತ್ರ. ಅಂದರೆ 30 ಬಾರಿ ಟಾಸ್​ ಫೇಲ್ ಆಗಿದ್ದಾರೆ. ಇದೀಗ ನಾಯಕನಾಗಿ ಪದಾರ್ಪಣೆ ಮಾಡಿರುವ ರಿಷಭ್ ಪಂತ್ ತಮ್ಮ ಮೊದಲ ಐದು ಪಂದ್ಯಗಳಲ್ಲಿ ಟಾಸ್ ಸೋಲುವ ಗಮನ ಸೆಳೆದಿದ್ದಾರೆ. ಹೀಗಾಗಿಯೇ ರಿಷಭ್ ಪಂತ್ ನಾಯಕರಾದರೆ ಟೀಮ್ ಇಂಡಿಯಾ ಟಾಸ್ ಗೆಲ್ಲುವುದನ್ನು ಯಾರು ಕೂಡ ನಿರೀಕ್ಷಿಸಬೇಡಿ ಎಂದು ಟ್ರೋಲ್ ಮಾಡಲಾಗುತ್ತಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಏಕೆ ಮುಖ್ಯ? ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದುವರೆಗೆ 8 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಲಾಗಿದೆ. ಈ ವೇಳೆ ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿದ್ದು ಕೇವಲ 3 ಬಾರಿ ಮಾತ್ರ. ಅಂದರೆ ಚೇಸಿಂಗ್ ಮಾಡಿ 5 ಬಾರಿ ಜಯ ಸಾಧಿಸಿದೆ. ಹೀಗಾಗಿ ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡುತ್ತೆ.

ಇನ್ನು ಮೊದಲು ಬ್ಯಾಟ್ ಮಾಡಿದರೂ ಗೆಲ್ಲಬಹುದು. ಇದಕ್ಕಾಗಿ ಫಸ್ಟ್ ಬ್ಯಾಟ್ ಮಾಡುವ ತಂಡ 180 ಕ್ಕಿಂತ ಅಧಿಕ ರನ್​ ಕಲೆಹಾಕಬೇಕು. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನ ಅವರೇಜ್ ಸ್ಕೋರ್ 150. ಹೀಗಾಗಿ ಮೊದಲು ಬ್ಯಾಟ್ ಮಾಡುವ ತಂಡ ದೊಡ್ಡ ಮೊತ್ತ ಕಲೆಹಾಕಿದರೆ ಮಾತ್ರ ಗೆಲುವು ಸಾಧಿಸಬಹುದು.

ಏಕೆಂದರೆ ಟೀಮ್ ಇಂಡಿಯಾ ಇದೇ ಮೈದಾನದಲ್ಲಿ 2017 ರಲ್ಲಿ ಇಂಗ್ಲೆಂಡ್ ವಿರುದ್ದ 202 ರನ್​ ಕಲೆಹಾಕಿದ್ದು, ಇಲ್ಲಿನ ಗರಿಷ್ಠ ಸ್ಕೋರ್ ಆಗಿದೆ. ಅದು ಕೂಡ ಮೊದಲು ಬ್ಯಾಟ್ ಮಾಡಿ ಎಂಬುದು ವಿಶೇಷ. ಆ ಪಂದ್ಯವನ್ನು ಭಾರತ ತಂಡ ಗೆದ್ದಿತ್ತು. ಹಾಗಾಗಿ ಇಲ್ಲಿ ಟಾಸ್ ಸೋತರೂ 180 ಕ್ಕಿಂತ ಹೆಚ್ಚು ರನ್​ಗಳಿಸಿದರೆ ಮ್ಯಾಚ್ ವಿನ್ ಆಗಬಹುದು. ಅದರಂತೆ ಟಾಸ್ ಸೋತಿರುವ ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಲಿದೆಯಾ ಕಾದು ನೋಡಬೇಕಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು