IND vs BAN 2nd Test: ಪಂತ್-ಅಯ್ಯರ್ ಜೊತೆಯಾಟದ ಫಲ: ಭಾರತ 314 ರನ್ಸ್​​ಗೆ ಆಲೌಟ್

India vs Bangladesh 2nd Test: ಭಾರತದ ಟಾಪ್ ಆರ್ಡರ್ ಕುಸಿತ ಕಂಡರೂ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಹಾಗೂ ಶ್ರೇಯಸ್ ಅಯ್ಯರ್ ಅವರ ಶತಕದ ಜೊತೆಯಾಟದ ನೆರವಿನಿಂದ 314 ರನ್ ಕಲೆಹಾಕಿದೆ.

IND vs BAN 2nd Test: ಪಂತ್-ಅಯ್ಯರ್ ಜೊತೆಯಾಟದ ಫಲ: ಭಾರತ 314 ರನ್ಸ್​​ಗೆ ಆಲೌಟ್
Follow us
| Updated By: Vinay Bhat

Updated on: Dec 23, 2022 | 4:49 PM

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತದ (India vs Bangladesh) ಟಾಪ್ ಆರ್ಡರ್ ಕುಸಿತ ಕಂಡರೂ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಹಾಗೂ ಶ್ರೇಯಸ್ ಅಯ್ಯರ್ ಅವರ ಶತಕದ ಜೊತೆಯಾಟದ ನೆರವಿನಿಂದ 314 ರನ್ ಕಲೆಹಾಕಿದೆ. 100 ರನ್​ಗೂ ಮೊದಲೇ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತಕ್ಕೆ ಪಂತ್ ಹಾಗೂ ಶ್ರೇಯಸ್ ಅಯ್ಯರ್ (Shreyas Iyer) 159 ರನ್​ಗಳ ಜೊತೆಯಾಟ ಆಡಿ ತಂಡಕ್ಕೆ ಆಧಾರವಾಗಿ ನಿಂತರು. ಟೀಮ್ ಇಂಡಿಯಾ 87 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಇದೀಗ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಬಾಂಗ್ಲಾ ಎಚ್ಚರಿಕೆಯ ಬ್ಯಾಟಿಂಗ್ ನಡೆಸುತ್ತಿದೆ.

ಮೊದಲ ದಿನವೇ ಬಾಂಗ್ಲಾ ಪಡೆಯನ್ನು 227 ರನ್​ಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಶುರು ಮಾಡಿದ್ದ ಟೀಮ್ ಇಂಡಿಯಾ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 8 ಓವರ್​ಗಳಿಗೆ 19 ರನ್ ಗಳಿಸಿತ್ತು. ಎರಡನೇ ದಿನವಾದ ಇಂದು ಬ್ಯಾಟಿಂಗ್ ಮುಂದುವರೆಸಿದ ಟೀಮ್ ಇಂಡಿಯಾ ಪುನಃ ಆರಂಭಿಕ ವೈಫಲ್ಯ ಅನುಭವಿಸಿತು. ತಂಡದ ಮೊತ್ತ 27 ಆಗುವಷ್ಟರಲ್ಲಿ ಕಳಪೆ ಫಾರ್ಮ್​ನಲ್ಲಿರುವ ಕೆಎಲ್ ರಾಹುಲ್ 10 ರನ್​​ಗೆ (45 ಎಸೆತ) ಔಟಾದರು. ಇದರ ಬೆನ್ನಲ್ಲೇ 39 ಎಸೆತಗಳಲ್ಲಿ 20 ರನ್ ಗಳಿಸಿ ಶುಭ್​ಮನ್ ಗಿಲ್ ಕೂಡ ನಿರ್ಗಮಿಸಿದರು. ಈ ಸಂದರ್ಭ ಒಂದಾದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿ ತಂಡವನ್ನು ಮೇಲೆತ್ತುವ ಪ್ರಯತ್ನ ನಡೆಸಿದರು.

ಐಪಿಎಲ್​ ಮಿನಿಹರಾಜು ಪ್ರಕ್ರಿಯೆ ಲೈವ್​

ಇದನ್ನೂ ಓದಿ
Image
Reece Topley: RCB ತಂಡಕ್ಕೆ ಎಡಗೈ ವೇಗಿ ಎಂಟ್ರಿ
Image
Nicholas Pooran: ಶಾಕಿಂಗ್: ಬರೋಬ್ಬರಿ 16 ಕೋಟಿಗೆ ಸೇಲ್ ಆದ ನಿಕೋಲಸ್ ಪೂರನ್: ಯಾವ ತಂಡಕ್ಕೆ?
Image
Cameron Green: ಬರೋಬ್ಬರಿ 17.5 ಕೋಟಿಗೆ ರೋಹಿತ್ ಶರ್ಮಾ ತಂಡ ಸೇರಿದ ಕ್ಯಾಮ್ರೊನ್ ಗ್ರೀನ್
Image
Ben Stokes: 16.25 ಕೋಟಿಗೆ ಬಿಕರಿಯಾದ ಬೆನ್​ ಸ್ಟೋಕ್ಸ್..!

ಆದರೆ, ಈ ಜೋಡಿ 34 ರನ್​ಗಳ ಜೊತೆಯಾಟ ಆಡಿತಷ್ಟೆ. ಪೂಜಾರ 55 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರೆ, ಊಟದ ವಿರಾಮದ ಬಳಿಕ ವಿರಾಟ್ ಕೊಹ್ಲಿ 73 ಎಸೆತಗಳಲ್ಲಿ 24 ರನ್​ಗೆ ಬ್ಯಾಟ್ ಕೆಳಗಿಟ್ಟರು. ಈ ಸಂದರ್ಭ 5ನೇ ವಿಕೆಟ್​ಗೆ ಜೊತೆಯಾದ ರಿಷಭ್ ಪಂತ್ ಹಾಗೂ ಶ್ರೇಯಸ್ ಅಯ್ಯರ್ ತಂಡಕ್ಕೆ ಆಧಾರವಾದರು. ಪಂತ್ ತಮ್ಮದೇ ಶೈಲಿಯ ಸ್ಫೋಟಕ ಆಟದ ಮೊರೆಹೋದರೆ, ಅಯ್ಯರ್ ಇವರಿಗೆ ಉತ್ತಮ ಸಾಥ್ ನೀಡಿದರು. 49 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಪಂತ್ ಶತಕದ ಅಂಚಿನಲ್ಲಿ ಎಡವಿದರು. 105 ಎಸೆತಗಳಲ್ಲಿ 7 ಫೋರ್, 5 ಭರ್ಜರಿ ಸಿಕ್ಸರ್​ನೊಂದಿಗೆ 93 ರನ್ ಸಿಡಿಸಿ ಔಟಾದರು.

ಇದರ ಬೆನ್ನಲ್ಲೇ ಅಯ್ಯರ್ ಕೂಡ 105 ಎಸೆತಗಳಲ್ಲಿ 10 ಫೋರ್, 2 ಸಿಕ್ಸರ್​ನೊಂದಿಗೆ 87 ರನ್​ಗೆ ಬ್ಯಾಟ್ ಕೆಳಗಿಟ್ಟರು. ಬಳಿಕ ಬಂದ ಬ್ಯಾಟರ್​ಗಳು ಬಂದಷ್ಟೇ ವೇಗದಲ್ಲಿ ಪೆವಿಲಿಯನ್ ಸೇರಿಕೊಂಡರು. ಅಕ್ಷರ್ 4, ಅಶ್ವಿನ್ 12, ಉಮೇಶ್ 14, ಸಿರಾಜ್ 7 ಹಾಗೂ ಜಯದೇವ್ ಉನಾದ್ಕಟ್ ಅಜೇಯ 14 ರನ್ ಗಳಿಸಿದರು. ಭಾರತ 86.3 ಓವರ್​ಗಳಲ್ಲಿ 314 ರನ್​ಗೆ ಆಲೌಟ್ ಆಯಿತು. ಬಾಂಗ್ಲಾ ಪರ ಶಕಿಬ್ ಅಲ್ ಹಸನ್ ಹಾಗೂ ತೈಜುಲ್ ಇಸ್ಲಾಂ ತಲಾ 4 ವಿಕೆಟ್ ಕಿತ್ತರು.

ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್:

ಎರಡನೇ ಟೆಸ್ಟ್​ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್​ ಗೆದ್ದು ಮೊದಲ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿತ್ತು. ಆದರೆ, ಬಾಂಗ್ಲಾದ ಆರಂಭವು ಉತ್ತಮವಾಗಿರಲಿಲ್ಲ. ಮೊಮಿನುಲ್ ಹಕ್ (84) ಹೊರತುಪಡಿಸಿದರೆ ಯಾವ ಆಟಗಾರರು ಬ್ಯಾಟ್​ ಬೀಸಲು ಸಾಧ್ಯವಾಗಲಿಲ್ಲ. ಹೀಗಾಗಿ 73.5 ಓವರ್‌ಗಳಲ್ಲಿ ಬಾಂಗ್ಲಾ 227 ರನ್‌ಗಳಿಗೆ ಸರ್ವಪತನ ಕಂಡಿತು. ನಜ್ಮುಲ್‌ ಹುಸೇನ್ ಶಾಂಟೊ (25), ಜಾಕಿರ್‌ ಹಸನ್‌(15), ಶಕಿಬ್‌ ಅಲ್‌ ಹಸನ್‌ (16), ಮುಷ್ಫಿಕರ್‌ ರಹೀಮ್‌ (26) ಹಾಗೂ ಲಿಟನ್‌ ದಾಸ್‌ (15) ಬ್ಯಾಟಿಂಗ್‌ನಲ್ಲಿ ನಿರಾಶೆ ಮೂಡಿಸಿದರು. 130 ರನ್‌ಗಳವರೆಗೆ ಕೇವಲ 4 ವಿಕೆಟ್ ಕಳೆದುಕೊಂಡಿದ್ದ ಬಾಂಗ್ಲಾ ತಂಡವು ನಂತರ ನಿಂರತರವಾಗಿ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಲೇ ಸಾಗಿ ಆಲೌಟ್ ಆಯಿತು.

ಭಾರತ ತಂಡದ ಪರ ಶಿಸ್ತಿನ ದಾಳಿ ನಡೆಸಿದ ಉಮೇಶ್ ಯಾದವ್ 15 ಓವರ್​ಗಳನ್ನು ಎಸೆದು 4 ಮೇಡನ್​ ಓವರ್​ಗಳೊಂದಿಗೆ ಕೇವಲ 25 ರನ್‌ ನೀಡಿ 4 ವಿಕೆಟ್ ಕಬಳಿಸಿದರು. ಇವರ ಜೊತೆಗೆ ರವಿಚಂದ್ರನ್ ಅಶ್ವಿನ್ 71 ರನ್ ನೀಡಿ 4 ವಿಕೆಟ್ ಪಡೆದರು. 12 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್‌ಗೆ ಮರಳಿದ ಜಯದೇವ್ ಉನಾದ್ಕತ್ 2 ವಿಕೆಟ್ ಕಬಳಿಸಿದರು. ಎರಡನೇ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಒಂದು ಬದಲಾವಣೆ ತರಲಾಯಿತು. ಕಳೆದ ಪಂದ್ಯದಲ್ಲಿ 8 ವಿಕೆಟ್‌ ಕಬಳಿಸಿದ್ದ ಕುಲ್ದೀಪ್‌ ಯಾದವ್ ಅವರ ಬದಲು ಜಯದೇವ್‌ ಉನಾದ್ಕಟ್‌ಗೆ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಅವಕಾಶ ನೀಡಲಾಯಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ