AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 4ನೇ ಟೆಸ್ಟ್​ನಲ್ಲಿ ರಿಷಭ್ ಪಂತ್ ಕೇವಲ ಬ್ಯಾಟರ್

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಮ್ಯಾಚ್ ಜುಲೈ 23 ರಿಂದ ಶುರುವಾಗಲಿದೆ. ಮ್ಯಾಚೆಂಸ್ಟರ್​ನ ಓಲ್ಡ್ ಟ್ರಾಫೋರ್ಡ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈಗಾಗಲೇ ಇಂಗ್ಲೆಂಡ್ ತಂಡವು ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದ್ದು, ಹೀಗಾಗಿ ಸರಣಿಯಲ್ಲಿ ಸಮಬಲ ಸಾಧಿಸಲು ಭಾರತ ತಂಡವು ಮ್ಯಾಂಚೆಸ್ಟರ್​ನಲ್ಲಿ ಗೆಲ್ಲಲೇಬೇಕು,

IND vs ENG: 4ನೇ ಟೆಸ್ಟ್​ನಲ್ಲಿ ರಿಷಭ್ ಪಂತ್ ಕೇವಲ ಬ್ಯಾಟರ್
Rishabh Pant
ಝಾಹಿರ್ ಯೂಸುಫ್
|

Updated on: Jul 21, 2025 | 11:24 AM

Share

ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ. ಮ್ಯಾಚೆಂಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಪಂತ್ ವಿಕೆಟ್ ಕೀಪಿಂಗ್ ಮಾಡುವ ಸಾಧ್ಯತೆಯಿಲ್ಲ. ಅವರ ಬದಲಿಗೆ ಧ್ರುವ್ ಜುರೇಲ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತಿಸಿದೆ.

ಲಾರ್ಡ್ಸ್​ ಮೈದಾನದಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ವೇಳೆ ಕೀಪಿಂಗ್ ಮಾಡುವಾಗ ರಿಷಭ್ ಪಂತ್ ಅವರ ಬೆರಳಿಗೆ ಗಾಯವಾಗಿತ್ತು. ಡೈವ್ ಹೊಡೆದು ಚೆಂಡು ಹಿಡಿಯುವ ಯತ್ನದಲ್ಲಿ ಅವರ ಎಡಗೈನ ತೋರು ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು. ಅಲ್ಲದೆ ಪಂತ್ ಬದಲಿಗೆ ಎರಡು ಇನಿಂಗ್ಸ್​ಗಳಲ್ಲಿ ಧ್ರುವ್ ಜುರೇಲ್ ವಿಕೆಟ್ ಕೀಪಿಂಗ್ ಮಾಡಿದ್ದರು.

ಇದಾಗ್ಯೂ ರಿಷಭ್ ಪಂತ್ ಮೂರನೇ ಟೆಸ್ಟ್​ ಪಂದ್ಯದಲ್ಲಿ ಬ್ಯಾಟಿಂಗ್​​ ಮಾತ್ರ ಮಾಡಿದ್ದರು. ಅಂದರೆ ಇಲ್ಲಿ ಪಂತ್​ಗೆ ಬ್ಯಾಟಿಂಗ್​ ಮಾಡುವುದು ಕಷ್ಟಕರವಲ್ಲ. ಆದರೆ ಗಾಯದ ಕಾರಣ ವಿಕೆಟ್ ಕೀಪಿಂಗ್ ಮಾಡುವುದೇ ದೊಡ್ಡ ಸವಾಲಾಗಲಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಅವರನ್ನು ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಲಾಗಿದೆ.

ಇತ್ತ ರಿಷಭ್ ಪಂತ್ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿದರೆ, ವಿಕೆಟ್ ಕೀಪಿಂಗ್ ಜವಾಬ್ದಾರಿ ಧ್ರುವ್ ಜುರೇಲ್ ಅಥವಾ ಕೆಎಲ್ ರಾಹುಲ್ ಹೆಗಲೇರಲಿದೆ. ಆದರೆ ಧ್ರುವ್ ಜುರೇಲ್ ಅವರನ್ನು ಕಣಕ್ಕಿಳಿಸಬೇಕಿದ್ದರೆ ಓರ್ವ ಬ್ಯಾಟರ್​ನನ್ನು ಆಡುವ ಬಳಗದಿಂದ ಕೈ ಬಿಡಬೇಕಾಗುತ್ತದೆ. ಅದರಂತೆ ಕರುಣ್ ನಾಯರ್ ಬದಲಿಗೆ ಧ್ರುವ್​ಗೆ ಅವಕಾಶ ಸಿಕ್ಕರೆ, ಅವರೇ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಒಂದು ವೇಳೆ ಧ್ರುವ್ ಜುರೇಲ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳದಿದ್ದರೆ, ಕೆಎಲ್ ರಾಹುಲ್ ಗ್ಲೌಸ್ ತೊಡುವುದು ಖಚಿತ. ಈ ಹಿಂದೆ ಟೀಮ್ ಇಂಡಿಯಾ ಪರ ವಿಕೆಟ್ ಕೀಪಿಂಗ್ ಮಾಡಿದ ಅನುಭವ ಕೆಎಲ್ ರಾಹುಲ್ ಜೊತೆಗಿದೆ. ಅಷ್ಟೇ ಅಲ್ಲದೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಅವರು ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದ್ದರು. ಹೀಗಾಗಿ ಧ್ರುವ್ ಜುರೇಲ್​ ಆಡುವ ಬಳಗದಲ್ಲಿ ಕಾಣಿಸಿಕೊಳ್ಳದಿದ್ದರೆ, ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ: ಬರೋಬ್ಬರಿ 13 ಸಿಕ್ಸ್​: ಟಿ10 ಪಂದ್ಯದಲ್ಲಿ ತೂಫಾನ್ ಸೆಂಚುರಿ ಸಿಡಿಸಿದ ಜೋಶ್

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.

ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ