AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಉಪ ನಾಯಕನ ಘೋಷಣೆ: ಯಾರು ಗೊತ್ತೇ?

Rishabh Pant Vice Captain: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಉಪ ನಾಯಕ ಕೆಎಲ್ ರಾಹುಲ್ ಹೊರಬಿದ್ದ ಕಾರಣ ಇದೀಗ ಬಿಸಿಸಿಐ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ಅವರನ್ನು ನೂತನ ಉಪ ನಾಯಕನಾಗಿ ಹೆಸರಿಸಿದೆ.

IND vs WI: ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಉಪ ನಾಯಕನ ಘೋಷಣೆ: ಯಾರು ಗೊತ್ತೇ?
KL Rahul Rishabh Pant and Team india
TV9 Web
| Updated By: Vinay Bhat|

Updated on: Feb 15, 2022 | 9:41 AM

Share

ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗಾಗಿ ಕೋಲ್ಕತ್ತಾಕ್ಕೆ ಬಂದಿಳಿದಿದ್ದು, ಈಡನ್ ಗಾರ್ಡನ್ಸ್​​ನಲ್ಲಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಬುಧವಾರ ಮೊದಲ ಟಿ20 ಕದನ ನಡೆಯಲಿದ್ದು, ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ಕಣಕ್ಕಿಳಿಯಲಿದೆ. ಟೀಮ್ ಇಂಡಿಯಾ ಉಪ ನಾಯಕ ಕೆಎಲ್ ರಾಹುಲ್ (KL Rahul), ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಇಂಜುರಿಯಿಂದಾಗಿ ಟಿ20 ಸರಣಿಯಿಂದ ಸಂಪೂರ್ಣ ಹೊರಬಿದ್ದಿದ್ದಾರೆ. ರಾಹುಲ್ ವಿಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಹ್ಯಾಮ್‌ಸ್ಟ್ರಿಂಗ್‌ನಿಂದ ಬಳಲಿದರು. ಆದರೂ ಎರಡೂ ಮಣಿಕಟ್ಟುಗಳಿಗೆ ಬ್ಯಾಂಡ್ ಧರಿಸಿ ಫೀಲ್ಡಿಂಗ್ ಮಾಡಿದ್ದರು. ಕೆಲ ಸಮಯದ ಬಳಿಕ ಅವರು ಮೈದಾನದಿಂದ ಹೊರನಡೆದು ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ಇದರಿಂದ ಚೇತರಿಸಿಕೊಳ್ಳಲು ಸಮಯದ ಅವಶ್ಯಕತೆ ಇರುವ ಹಿನ್ನಲೆಯಲ್ಲಿ ರಾಹುಲ್ ವಿಂಡೀಸ್ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಸೂಕ್ತ ಉಪ ನಾಯಕನ ಹುಡುಕಾಟದಲ್ಲಿದ್ದ ಬಿಸಿಸಿಐ (BCCI) ಇದೀಗ ವೈಸ್ ಕ್ಯಾಪ್ಟನ್ ಅನ್ನು ಘೋಷಣೆ ಮಾಡಿದೆ.

ಹೌದು, ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಉಪ ನಾಯಕ ಕೆಎಲ್ ರಾಹುಲ್ ಹೊರಬಿದ್ದ ಕಾರಣ ಇದೀಗ ಬಿಸಿಸಿಐ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ಅವರನ್ನು ನೂತನ ಉಪ ನಾಯಕನಾಗಿ ಹೆಸರಿಸಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಫೆಬ್ರವರಿ 14, 2022 ರಂದು ತನ್ನ ಇತ್ತೀಚಿನ ಪ್ರಕಟಣೆಯಲ್ಲಿ, ವೆಸ್ಟ್ ಇಂಡೀಸ್ ವಿರುದ್ಧದ ಮೂರು ಟಿ20 ಗಳಿಗೆ ರಿಷಭ್ ಪಂತ್ ಅವರನ್ನು ಭಾರತೀಯ ಟಿ20 ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ ಎಂದು ಬಹಿರಂಗಪಡಿಸಿದೆ.

ಕೆ.ಎಲ್ ರಾಹುಲ್ ಅಲಭ್ಯತೆಯಿಂದಾಗಿ ಟಿ20 ಸರಣಿಗೆ ರುತುರಾಜ್ ಗಾಯಕ್ವಾಡ್ ಮತ್ತು ದೀಪಕ್ ಹೂಡಾ ತಂಡ ಸೇರಿಕೊಂಡಿದ್ದಾರೆ. ಇನ್ನು ಈಗಾಗಲೇ ಗಾಯಗೊಂಡು ದಕ್ಷಿಣ ಆಫ್ರಿಕಾ ಪ್ರವಾಸ, ವಿಂಡೀಸ್ ವಿರುದ್ಧ ಏಕದಿನ ಸರಣಿ ಮಿಸ್ ಮಾಡಿಕೊಂಡಿದ್ದ ಅಕ್ಷರ್ ಪಟೇಲ್ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಇದ್ರಿಂದಲೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕಳೆದುಕೊಳ್ಳಬೇಕಾಯಿತು. ಸ್ಪಿನ್ನರ್ ಇತ್ತೀಚೆಗೆ ಕೋವಿಡ್‌ ಪಾಸಿಟಿವ್ ಕೂಡ ಆಗಿದ್ದರು.

ವಾಷಿಂಗ್ಟನ್ ಸುಂದರ್ ಅವರು ಮಂಡಿರಜ್ಜು ನೋವಿಗೆ ಒಳಗಾಗಿದ್ದಾರೆ. ಹೀಗಾಗಿ ಅವರು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. ಸುಂದರ್ ಬದಲಿಗೆ ಚೈನಮನ್ ಸ್ಪಿನ್ನರ್ ಕುಲದೀಪ್ ಯಾದವ್ ಆಯ್ಕೆಯಾಗಿದ್ದಾರೆ. ಕಳೆದ ಶುಕ್ರವಾರ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಸುಂದರ್ ಫೀಲ್ಡಿಂಗ್ ವೇಳೆ ಎಡ ಮಂಡಿರಜ್ಜು ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಟಿ20 ಸರಣಿಯ ವೇಳಾಪಟ್ಟಿ:

1 ನೇ T20, ಫೆಬ್ರವರಿ 16 , ಬುಧವಾರ, ಕೋಲ್ಕತ್ತಾ (ಸಂಜೆ 7 ಗಂಟೆಗೆ ಆರಂಭ)

2 ನೇ T20, ಫೆಬ್ರವರಿ 18 , ಶುಕ್ರವಾರ, ಕೋಲ್ಕತ್ತಾ (ಸಂಜೆ 7 ಗಂಟೆಗೆ ಆರಂಭ)

3ನೇ T20, ಫೆಬ್ರವರಿ 20 , ಭಾನುವಾರ, ಕೋಲ್ಕತ್ತಾ (ಸಂಜೆ 7 ಗಂಟೆಗೆ ಆರಂಭ)

Washington Sundar: ಸುಂದರ್ ಜಾಗಕ್ಕೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದುಕೊಂಡ ಸ್ಟಾರ್ ಪ್ಲೇಯರ್

Rohit Sharma: ಕೊಹ್ಲಿ ಫಾರ್ಮ್​ ಬಗ್ಗೆ ನಾಯಕನಾಗಿ ತುಟಿ ಬಿಚ್ಚಿದ ರೋಹಿತ್ ಶರ್ಮಾ: ಏನಂದ್ರು ಗೊತ್ತೇ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ