AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಒಂದು ಪಂದ್ಯ ಬ್ಯಾನ್: ರಿಷಭ್ ಪಂತ್​​-ಪ್ರವೀಣ್ ಆಮ್ರೆ ಮೇಲೆ ಕಠಿಣ ಕ್ರಮ ಕೈಗೊಂಡ ಆಡಳಿತ ಮಂಡಳಿ

Rishabh Pant and Pravin Amre: ಇದೀಗ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್​ಗೆ ಹಾಗೂ ಪ್ರವೀಣ್ ಆಮ್ರೆ ಅವರಿಗೆ ಐಪಿಎಲ್ ಆಡಳಿತ ಮಂಡಳಿ ದಂಡ ವಿಧಿಸಿದೆ. ಪಂತ್ ಅವರು ಐಪಿಎಲ್ ನಿಯಮ ಲೆವೆಲ್ 2 ಅನ್ನು ಉಲ್ಲಂಘನೆ ಮಾಡಿದ್ದು ಇವರಿಗೆ ಈ ಪಂದ್ಯದ ಸಂಪೂರ್ಣ ಮೊತ್ತವನ್ನು ಖಡಿತಗೊಳಿಸಲಾಗಿದೆ.

IPL 2022: ಒಂದು ಪಂದ್ಯ ಬ್ಯಾನ್: ರಿಷಭ್ ಪಂತ್​​-ಪ್ರವೀಣ್ ಆಮ್ರೆ ಮೇಲೆ ಕಠಿಣ ಕ್ರಮ ಕೈಗೊಂಡ ಆಡಳಿತ ಮಂಡಳಿ
Rishabh Pant and Pravin Amre
TV9 Web
| Updated By: Vinay Bhat|

Updated on: Apr 23, 2022 | 12:38 PM

Share

ಐಪಿಎಲ್ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (DC vs RR) ನಡುವಣ ಪಂದ್ಯದಲ್ಲಿ ನಡೆದ ನೋ ಬಾಲ್ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಡೆಲ್ಲಿ ನಾಯಕ ರಿಷಭ್ ಪಂತ್ (Risbah Pant) ವರ್ತಿಸಿದ ರೀತಿ ಮತ್ತು ಸಹಾಯಕ ಕೋಚ್ ಪ್ರವೀಣ್ ಆಮ್ರೆ (Pravin Amre) ನೇರವಾಗಿ ಮೈದಾನಕ್ಕೆ ಬಂದು ಅಂಪೈರ್ ಜೊತೆ ಚರ್ಚಿಸಿರುವುದಕ್ಕೆ ಪರ-ವಿರೋಧಗಳು ವ್ಯಕ್ತವಾಗುತ್ತಿದೆ. ಇದೀಗ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್​ಗೆ ಹಾಗೂ ಪ್ರವೀಣ್ ಆಮ್ರೆ ಅವರಿಗೆ ಐಪಿಎಲ್ ಆಡಳಿತ ಮಂಡಳಿ ದಂಡ ವಿಧಿಸಿದೆ. ಪಂತ್ ಅವರು ಐಪಿಎಲ್ ನಿಯಮ ಲೆವೆಲ್ 2 ಅನ್ನು ಉಲ್ಲಂಘನೆ ಮಾಡಿದ್ದು ಇವರಿಗೆ ಈ ಪಂದ್ಯದ ಸಂಪೂರ್ಣ ಮೊತ್ತವನ್ನು ಖಡಿತಗೊಳಿಸಲಾಗಿದೆ. ಅಲ್ಲದೆ ಸಹಾಯಕ ಕೋಚ್ ಪ್ರವೀಣ್ ಅವರಿಗೆ ಶೇ. 100 ರಷ್ಟು ಪಂದ್ಯದ ಶುಲ್ಕವನ್ನು ದಂಡವಾಗಿ ಕಟ್ಟಬೇಕಾಗಿದ್ದು ಒಂದು ಪಂದ್ಯದಿಂದ ನಿಷೇಧ ಕೂಡ ಹೇರಲಾಗಿದೆ. ಶಾರ್ದೂಲ್ ಥಾಕೂರ್ ಅವರಿಗೆ ಪಂದ್ಯದ ಶೇ. 50 ರಷ್ಟು ಮೊತ್ತವನ್ನು ಖಡಿತಗೊಳಿಸಲಾಗಿದೆ.

ಏನಿದು ಘಟನೆ?:

ರಾಜಸ್ಥಾನ್ ರಾಯಲ್ಸ್ ನೀಡಿದ್ದ 223 ರನ್‌ಗಳ ಟಾರ್ಗೆಟ್ ಅನ್ನು ಬೆನ್ನಟ್ಟಲು ಹೊರಟ ಡೆಲ್ಲಿಗೆ ಗೆಲ್ಲಲು ಕೊನೇ ಓವರ್‌ನಲ್ಲಿ 36 ರನ್​​ಗಳು ಬೇಕಾಯಿತು. ಅಂದರೆ ಆರು ಬಾಲ್​ನಲ್ಲಿ 6 ಸಿಕ್ಸರ್. ಹೀಗಿದ್ದಾಗ ಶೇ. 90 ರಷ್ಟು ಗೆಲುವು ಬೌಲಿಂಗ್ ತಂಡಕ್ಕೆ ಎಂಬುದು ಗೊತ್ತಿರುವ ಸಂಗತಿ. ರಾಯಲ್ಸ್‌ ಪರ ಅಂತಿಮ ಓವರ್‌ ಎಸೆದ ಒಬೆಡ್‌ ಮೆಕಾಯ್‌ ಎದುರು ದಿಲ್ಲಿ ಬ್ಯಾಟರ್‌ ರೋವ್ಮನ್‌ ಪೊವೆಲ್‌ ಒಂದು ಕ್ಷಣ ಡೆಲ್ಲಿ ಪಾಳಯದಲ್ಲಿ ಗೆಲುವಿನ ಆಸೆ ಚಿಗುರಿಸಿದರು. ಯಾಕೆಂದರೆ ಮೆಕಾಯ್‌ ಅವರ ಮೊದಲ ಮೂರು ಎಸೆತಗಳಲ್ಲಿ ಪೊವೆಲ್ ಸಿಕ್ಸರ್‌ ಬಾರಿಸಿದ್ದರು. ಮೊದಲ ಮೂರು ಎಸೆತಗಳಲ್ಲಿ ಲೀಲಾಜಾಲವಾಗಿ ಸಿಕ್ಸ್ ಸಿಡಿಸಿದ್ದ ಪೊವೆಲ್​ಗೆ ಮುಂದಿನ 3 ಎಸೆತಗಳಲ್ಲಿ ಸಿಕ್ಸ್ ಸಿಡಿಸುವುದು ದೊಡ್ಡ ಸವಾಲೇನು ಆಗಿರಲಿಲ್ಲ. ಆದರೆ, ಅಲ್ಲಿ ನಡೆದ ಹೈ ಡ್ರಾಮ್ ಇಡೀ ಚಿತ್ರಣವನ್ನೇ ಬದಲಾಯಿಸಿತು.

ಮೆಕಾಯ್‌ ಹಾಕಿದ 3ನೇ ಎಸೆತ ಫುಲ್ ಟಾಸ್‌ ಆಗಿದ್ದು ಇದನ್ನು ಕೂಡ ಪೊವೆಲ್ ಸಿಕ್ಸ್​​ಗೆ ಅಟ್ಟಿದ್ದರು. ಆದರೆ, ಇದು ಅವರ ಸೊಂಟದ ಭಾಗಕ್ಕಿಂತಲೂ ಮೇಲಿದೆ, ಅದು ನೋ-ಬಾಲ್ ಎಂದು ಡೆಲ್ಲಿ ವಾದಕ್ಕಿಳಿತು. ಆದರೆ, ಅಂಪೈರ್ ಇದು ನೋ ಬಾಲ್ ಅಲ್ಲ ಎಂದು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಇದರಿಂದ ಸಿಟ್ಟಾದ ಡೆಲ್ಲಿ ನಾಯಕ ರಿಷಭ್ ಪಂತ್ ಇದು ಅನ್ಯಾಯ ಎಂದು ಮೈದಾನದಲ್ಲಿದ್ದ ತಮ್ಮ ಬ್ಯಾಟರ್‌ಗಳಾದ ರೋವ್ಮನ್‌ ಪೊವೆಲ್‌ ಮತ್ತು ಕುಲ್ದೀಪ್‌ ಯಾದವ್‌ ಅವರನ್ನು ಪವಿಲಿಯನ್‌ಗೆ ಹಿಂದಿರುಗುವಂತೆ ಬೌಂಡರಿ ಗೆರೆ ಬಳಿ ನಿಂತು ಡಿಕ್ಲೇರ್ ಘೋಷಿಸಲು ಮುಂದಾದರು.

ಇದರ ಜೊತೆಗೆ ಪಂತ್ ತಮ್ಮ ತಂಡದ ಕೋಚ್ ಪ್ರವೀಣ್‌ ಆಮ್ರೆ ಅವರನ್ನು ಅಂಪೈರ್ ಬಳಿ ಚರ್ಚಿಸಲು ಮೈದಾನಕ್ಕೆ ಕಳುಹಿಸಿದರು. ಅಂಗಣಕ್ಕೆ ಧಾವಿಸಿ ಆನ್‌ ಫೀಲ್ಡ್‌ ಅಂಪೈರ್​ಗಳ ಜೊತೆಗೆ ಚರ್ಚಿಸಿ ಕನಿಷ್ಠ ಮೂರನೇ ಅಂಪೈರ್‌ಗೆ ಈ ನಿರ್ಧಾರ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಆದರೆ, ಲೆಗ್‌ ಅಂಪೈರ್‌ ಅದು ನೋ-ಬಾಲ್‌ ಅಲ್ಲ ಎಂದು ತೀರ್ಪು ನೀಡಿದ್ದ ಕಾರಣ, ಅದೇ ತೀರ್ಪಿಗೆ ಬದ್ಧರಾಗಿ ನಿಂತು ಆಟ ಮುಂದುವರಿಸಲು ಆನ್‌ಫೀಲ್ಡ್‌ ಅಂಪೈರ್‌ಗಳು ತೀರ್ಮಾನಿಸಿದರು. ಅತ್ತ ಬೌಂಡರಿ ಗೆರೆ ಬಳಿಯಿದ್ದ ಆರ್ ಆರ್ ಬ್ಯಾಟರ್ ಜಾಸ್ ಬಟ್ಲರ್ ಜೊತೆಗೂ ಪಂತ್ ರೇಗಾಡಿದರು. ಹಿರಿಯ ಆಟಗಾರ ಶೇನ್ ವಾಟ್ಸನ್ ಮೇಲೂ ಕೋಪಗೊಂಡರು.

ಅಂತಿಮವಾಗಿ ಡೆಲ್ಲಿಗೆ ಕೊನೆಯ 3 ಎಸೆತಗಳಲ್ಲಿ ಗೆಲ್ಲಲು 18 ರನ್​ಗಳ ಅವಶ್ಯಕತೆಯಿತ್ತು. ಮೊದಲ ಮೂರೂ ಎಸೆಸತಗಳಲ್ಲಿ ಸಿಕ್ಸರ್‌ ಬಾರಿಸಿದ್ದ ಪೊವೆಲ್‌, ನಂತರದ ಮೂರು ಎಸೆಸತಗಳಲ್ಲಿ 1 ರನ್‌ ಕೂಡ ಗಳಿಸಲಿಲ್ಲ. 145 ಎಸೆತಗಲ್ಲಿ 36 ರನ್ ಗಳಿಸಿದ್ದ ಇವರು ಕೊನೇ ಎಸೆತದಲ್ಲಿ ಕೀಪರ್​ಗೆ ಕ್ಯಾಚಿತ್ತು ಔಟಾದರು. ಒಟ್ಟಾರೆ ಐಪಿಎಲ್ 2022ರ ಮೊದಲ ವಿವಾದಕ್ಕೆ ಡೆಲ್ಲಿ ಹಾಗೂ ರಾಜಸ್ಥಾನ್ ನಡುವಣ ಕದನ ಸಾಕ್ಷಿಯಾಯಿತು. ಇಲ್ಲಿ ಅಂಪೈರ್ ನಿರ್ಧಾರ ಹಾಗೂ ರಿಷಭ್ ಪಂತ್ ನಡೆ ಎಷ್ಟು ಸರಿ ಎಂಬ ಪ್ರಶ್ನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

Risbah Pant: ಇದು ಕ್ರಿಕೆಟ್, ಫುಟ್ಬಾಲ್ ಅಲ್ಲ: ರಿಷಭ್ ಪಂತ್ ಮೈಚಳಿ ಬಿಡಿಸಿದ ಕೆವಿನ್ ಪೀಟರ್ಸನ್

Rishabh Pant: ನೋ ಬಾಲ್ ವಿವಾದ: ಪಂದ್ಯ ಮುಗಿದ ಬಳಿಕ ಅಂಪೈರ್ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ರಿಷಭ್ ಪಂತ್

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!