IND vs WI: ಭಾರತಕ್ಕೆ ಡಬಲ್ ಶಾಕ್! ಕೊಹ್ಲಿ ಜೊತೆಗೆ ಪಂತ್ ಕೂಡ ಅಂತಿಮ ಟಿ20ಗೆ ಗೈರು; ಲಂಕಾ ಸರಣಿಗೂ ಅಲಭ್ಯ

Rishabh Pant: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಕೊನೆಯ T20 ಪಂದ್ಯದಿಂದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲೂ ಅವರು ಆಡುವುದಿಲ್ಲ.

IND vs WI: ಭಾರತಕ್ಕೆ ಡಬಲ್ ಶಾಕ್! ಕೊಹ್ಲಿ ಜೊತೆಗೆ ಪಂತ್ ಕೂಡ ಅಂತಿಮ ಟಿ20ಗೆ ಗೈರು; ಲಂಕಾ ಸರಣಿಗೂ ಅಲಭ್ಯ
ಪಂತ್
Follow us
| Updated By: ಪೃಥ್ವಿಶಂಕರ

Updated on:Feb 19, 2022 | 11:34 AM

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಕೊನೆಯ T20 ಪಂದ್ಯದಿಂದ (India vs West Indies T20 Series) ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ (Rishabh Pant)ಅವರಿಗೆ ವಿಶ್ರಾಂತಿ ನೀಡಲಾಗಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲೂ (T20 series against Sri Lanka) ಅವರು ಆಡುವುದಿಲ್ಲ. ಮುಂಬರುವ ಸರಣಿಯ ಕಾರಣದಿಂದ ಬಿಸಿಸಿಐ ರಿಷಬ್ ಪಂತ್‌ಗೆ ಬಯೋ ಬಬಲ್‌ನಿಂದ ವಿಶ್ರಾಂತಿ ನೀಡಿದೆ. ಇದೀಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಅವರು ವಾಪಸಾಗಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪಂತ್ ಉತ್ತಮ ಫಾರ್ಮ್ ತೋರಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿ ತಂಡವನ್ನು ಬಲಿಷ್ಠ ಸ್ಕೋರ್​ಗೆ ಕರೆದೊಯ್ದರು. ಈ ಹಿಂದೆ ವಿರಾಟ್ ಕೊಹ್ಲಿ (Virat Kohli)ಗೆ ಬಿಸಿಸಿಐ ಇದೇ ರೀತಿಯ ವಿಶ್ರಾಂತಿ ನೀಡಿತ್ತು. ಅವರು ವೆಸ್ಟ್ ಇಂಡೀಸ್‌ ವಿರುದ್ಧದ ಕೊನೆಯ ಟಿ20 ಮತ್ತು ಶ್ರೀಲಂಕಾ ವಿರುದ್ಧದ ಸರಣಿಯನ್ನೂ ಆಡುವುದಿಲ್ಲ.

ರಿಷಬ್ ಪಂತ್ ಕೆಲವು ಸಮಯದಿಂದ ನಿರಂತರವಾಗಿ ಟೀಮ್ ಇಂಡಿಯಾದ ಭಾಗವಾಗಿದ್ದಾರೆ ಮತ್ತು ಎಲ್ಲಾ ಮೂರು ಸ್ವರೂಪಗಳಲ್ಲಿ ಆಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರು ತುಂಬಾ ಬ್ಯುಸಿಯಾಗಲಿದ್ದಾರೆ. ಭಾರತೀಯ ತಂಡದ ಭಾಗವಾಗುವುದರ ಜೊತೆಗೆ, ಅವರು ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ನಾಯಕರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಪಂತ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸಬಹುದು.

ರಿಷಬ್ ಪಂತ್​ಗೆ ಬ್ರೇಕ್ ಸಿಕ್ಕಿದೆ

ಮಧ್ಯಮ ಕ್ರಮಾಂಕದಲ್ಲಿ ಆಡುವಾಗ ಅವರ ಇತ್ತೀಚಿನ ಪ್ರದರ್ಶನಗಳು ಆಕರ್ಷಕವಾಗಿವೆ. ಪಂತ್ ಅನೇಕ ಸಂದರ್ಭಗಳಲ್ಲಿ ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ T20I ನಲ್ಲಿ ಪಂತ್ ಅಜೇಯ 52 ರನ್ ಗಳಿಸಿದರು. ಈ ಇನ್ನಿಂಗ್ಸ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದರಿಂದಾಗಿ ಪಂತ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಹಿಂದೆ ಏಕದಿನ ಸರಣಿಯಲ್ಲೂ ರಿಷಬ್ ಪಂತ್ ಅರ್ಧಶತಕ ಸಿಡಿಸಿದ್ದರು. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ, ಅವರು ಟೆಸ್ಟ್‌ನಲ್ಲಿ ಶತಕ ಗಳಿಸಿದರು ಮತ್ತು ODIಗಳಲ್ಲಿ 85 ರನ್‌ಗಳ ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದರು.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಸಂದರ್ಭದಲ್ಲಿ ಪಂತ್​ಗೆ ಆರಂಭಿಕರಾಗಿ ಕಣಕ್ಕಿಳಿಸಲಾಯಿತು. ಅದರೆ ಅವರು ಅಲ್ಲಿ ಅಷ್ಟು ಯಶಸ್ಸು ಕಾಣಲಿಲ್ಲ. ಬಳಿಕ ಮತ್ತೆ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಲಾಯಿತು.

ಇದನ್ನೂ ಓದಿ:DC, IPL 2022 Auction: ಪಂತ್, ವಾರ್ನರ್, ಶಾರ್ದೂಲ್! ಕಡಿಮೆ ಬಜೆಟ್‌ನಲ್ಲಿ ಬಲಿಷ್ಠ ತಂಡ ಕಟ್ಟಿದ ಡೆಲ್ಲಿ ಕ್ಯಾಪಿಟಲ್ಸ್

Published On - 11:34 am, Sat, 19 February 22

ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು