AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: 42ನೇ ಓವರ್​ನಲ್ಲಿ ರಿಷಭ್ ಪಂತ್ ಆಡಿದ ಆಟಕ್ಕೆ ಬೆರಗಾದ ಕ್ರಿಕೆಟ್ ಜಗತ್ತು: ವಿಡಿಯೋ ನೋಡಿ

IND vs ENG 3rd ODI: ಟಾಪ್ ಆರ್ಡರ್​ ಬ್ಯಾಟರ್​ಗಳನ್ನು ಕೆಡವಿ ಸಂಭ್ರಮದಲ್ಲಿದ್ದ ಇಂಗ್ಲೆಂಡ್​ಗೆ ಪಂತ್ ಪಂಚ್ ಮೇಲೆ ಪಂಚ್ ಕೊಟ್ಟರು. ಇವರಿಗೆ ಪಾಂಡ್ಯ ಕೂಡ ಭರ್ಜರಿ ಸಾಥ್ ನೀಡಿದರು. ಇಬ್ಬರೂ ಸ್ಫೋಟಕ ಆಟವಾಡಿದರು.

Rishabh Pant: 42ನೇ ಓವರ್​ನಲ್ಲಿ ರಿಷಭ್ ಪಂತ್ ಆಡಿದ ಆಟಕ್ಕೆ ಬೆರಗಾದ ಕ್ರಿಕೆಟ್ ಜಗತ್ತು: ವಿಡಿಯೋ ನೋಡಿ
Rishabh Pant IND vs ENG 3rd ODI
TV9 Web
| Updated By: Vinay Bhat|

Updated on:Jul 18, 2022 | 8:11 AM

Share

ಮ್ಯಾಂಚೆಸ್ಟರ್​​ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಅಂತಿಮ ಹಾಗೂ ಮೂರನೇ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಭಾರತ (India vs England) 5 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ. ರಿಷಭ್ ಪಂತ್  ಅವರ ಆಕರ್ಷಕ ಶತಕ ಹಾಗೂ ಹಾರ್ದಿಕ್ ಪಾಂಡ್ಯ (Hardik Pandya) ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಜಯದ ನಗೆ ಬೀರಿದ್ದು ಮಾತ್ರವಲ್ಲದೆ 2-1 ಅಂತರದಿಂದ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಟಿ20 ಬಳಿಕ ಇದೀಗ ಏಕದಿನ ಸರಣಿಯನ್ನೂ ಕಳೆದುಕೊಂಡ ಆಂಗ್ಲರಿಗೆ ತವರಿನಲ್ಲೇ ಭಾರೀ ಮುಖಭಂಗವಾಗಿದೆ. 113 ಎಸೆತಗಳನ್ನು ಎದುರಿಸಿದ ಪಂತ್ (Rishabh Pant) ಬರೋಬ್ಬರಿ 16 ಫೋರ್ ಹಾಗೂ 2 ಸಿಕ್ಸರ್​​ ಬಾರಿಸಿ ಅಜೇಯ 125 ರನ್ ಚಚ್ಚಿದರು. ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಇದು ಪಂತ್ ಅವರ ಚೊಚ್ಚಲ ಶತಕ. ಇವರ ಸ್ಫೋಟಕ ಆಟಕ್ಕೆ ಇಂಗ್ಲೆಂಡ್ ಬೌಲರ್​​ಗಳು ತಲೆಕೆಡೆಸಿಕೊಂಡಿದ್ದು ಸುಳ್ಳಲ್ಲ.

ಹೌದು, ಇಂಗ್ಲೆಂಡ್ ನೀಡಿದ್ದ 260 ರನ್​ಗಳ ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಭಾರತ ಆರಂಭದಲ್ಲೇ ಮುಖ್ಯ ವಿಕೆಟ್​ಗಳನ್ನು ಕಳೆದುಕೊಂಡಿತು. ಶಿಖರ್ ಧವನ್ ಕೇವಲ 1 ರನ್​ಗೆ​ ಔಟಾದರೆ, ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 17 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡು. ಸೂರ್ಯಕುಮಾರ್ ಯಾದವ್ (16) ಕೂಡ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಿಲಿಲ್ಲ. ಹೀಗೆ ಭಾರತ 72 ರನ್ ಆಗುವ ಹೊತ್ತಿಗೆ 4 ವಿಕಟ್ ಕಳೆದುಕೊಂಡಿತು. ಈ ಸಂದರ್ಭ ಇಂಗ್ಲೆಂಡ್ ಮೇಲುಗೈ ಸಾಧಿಸಿತು ಎಂದೇ ನಂಬಲಾಗಿತ್ತು. ಆದರೆ, ಇಡೀ ಪಂದ್ಯದ ಗತಿಯನ್ನೇ ಬದಲಾಯಿಸಿದ್ದು ರಿಷಭ್ ಪಂತ್ ಹಾಗೂ ಇವರಿಗೆ ಸಾಥ್ ನೀಡಿದ್ದು ಹಾರ್ದಿಕ್ ಪಾಂಡ್ಯ.

ಇದನ್ನೂ ಓದಿ
Image
IND Vs ENG 3rd ODI Match Report: ಪಂತ್ ಶತಕದಬ್ಬರಕ್ಕೆ ಇಂಗ್ಲೆಂಡ್ ಧೂಳಿಪಟ! ಭಾರತಕ್ಕೆ ಸರಣಿ
Image
ನಾನು ವಜ್ರದ ಚಮಚದೊಂದಿಗೆ ಹುಟ್ಟಿದವ, ನನ್ನನ್ನು ಬ್ಯಾನ್ ಮಾಡಿದಾಗ ಬಿಸಿಸಿಐ ಖಜಾನೆ ತುಂಬಿತುಳುಕುವಂತೆ ಮಾಡಿದ್ದೆ -ಸಂಪೂರ್ಣ ಜಾತಕ ತೆರೆದಿಟ್ಟ ಲಲಿತ್ ಮೋದಿ!
Image
ನಕಲಿ ದಾಖಲೆ ಬಳಸಿ ತಂಡ ಬದಲಿಸಲು ಹೋಗಿ ಸಿಕ್ಕಿಬಿದ್ದ ಭಾರತೀಯ ಆಟಗಾರ!
Image
KL Rahul: ಭರ್ಜರಿ ಅಭ್ಯಾಸ ಆರಂಭಿಸಿದ ಕೆಎಲ್ ರಾಹುಲ್

ಟಾಪ್ ಆರ್ಡರ್​ ಬ್ಯಾಟರ್​ಗಳನ್ನು ಕೆಡವಿ ಸಂಭ್ರಮದಲ್ಲಿದ್ದ ಇಂಗ್ಲೆಂಡ್​ಗೆ ಪಂತ್ ಪಂಚ್ ಮೇಲೆ ಪಂಚ್ ಕೊಟ್ಟರು. ಇವರಿಗೆ ಪಾಂಡ್ಯ ಕೂಡ ಭರ್ಜರಿ ಸಾಥ್ ನೀಡಿದರು. ಇಬ್ಬರೂ ಸ್ಫೋಟಕ ಆಟವಾಡಿದರು. 106 ಎಸೆತಗಳಲ್ಲಿ ಶತಕ ಪೂರೈಸಿದ ರಿಷಭ್ ಪಂತ್ ನಂತರವೂ ತಮ್ಮ ಶೈಲಿಯ ಆಟ ಮುಂದುವರೆಸಿ ಜಯ ತಂದುಕೊಟ್ಟರು. ಪಂತ್-ಹಾರ್ದಿಕ್ ಕಡೆಯಿಂದ ಮೂಡಿಬಂದಿದ್ದು ಬರೋಬ್ಬರಿ 133 ರನ್​ಗಳ ಜೊತೆಯಾಟ. ತಂಡದ ಗೆಲುವು ಖಚಿತವಾಗುತ್ತಿದ್ದಂತೆ ಹಾರ್ದಿಕ್ ನಿರ್ಗಮಿಸಿದರು. 55 ಎಸೆತಗಳಲ್ಲಿ 10 ಫೋರ್ ಬಾರಿಸಿ 71 ರನ್​ಗೆ ಔಟಾದರು.

ಪಾಂಡ್ಯ ಪೆವಿಲಿಯನ್ ಸೇರಿಕೊಂಡ ಬಳಿಕ ಪಂತ್ ಆಟ ಮತ್ತಷ್ಟು ಬಿರುಸಾಯಿತು. ಅದು ಎಷ್ಟರ ಮಟ್ಟಿಗೆ ಎಂದರೆ 42ನೇ ಓವರ್​ನ ಡೇವಿಡ್ ವಿಲ್ಲೆ ಓವರ್​ನಲ್ಲಿ 5 ಫೋರ್ ಸಿಡಿಸಿ ಮಿಂಚಿದರು. ಈ ಓವರ್​ನಲ್ಲಿ ಭಾರತ 21 ರನ್ ಕಲೆಹಾಕಿತು. ವಿಶ್ವ ಶ್ರೇಷ್ಠ ಬೌಲರ್​ಗಳ ಓವರ್​ನಲ್ಲಿ ಪಂತ್ ಆಡಿದ ಆಟ ಕಂಡು ಇಂಗ್ಲೆಂಡ್ ದಂಗಾಗಿದ್ದು ಸುಳ್ಳಲ್ಲ. ಭಾರತ 42.1 ಓವರ್​ನಲ್ಲೇ 5 ವಿಕೆಟ್ ನಷ್ಟಕ್ಕೆ 261 ರನ್ ಗಳಿಸಿ ಗೆಲುವು ಸಾಧಿಸಿತು. ರಿಷಭ್ ಪಂತ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಜಿಕೊಂಡರೆ ಹಾರ್ದಿಕ್ ಸರಣಿಶ್ರೇಷ್ಠ ತಮ್ಮದಾಗಿಸಿದರು.

259 ರನ್ ಗಳಿಸಿದ್ದ ಇಂಗ್ಲೆಂಡ್:

ಇದಕ್ಕೂ ಮುನ್ನ ಇಂಗ್ಲೆಂಡ್ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿಯಿತು. ನಾಯಕ ಜೋಸ್ ಬಟ್ಲರ್ ಅರ್ಧಶತಕ ಗಳಿಸಿ 60 ರನ್ ಬಾರಿಸಿದ್ದು ಬಿಟ್ಟರೆ ಜೇಸನ್ ರಾಯ್ 41 ರನ್ ಗಳಿಸಿದ್ದೇ ಹೆಚ್ಚು. ಉಳಿದ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ಬೆನ್ ಸ್ಟೋಕ್ಸ್ 27, ಮೊಯಿನ್ ಅಲಿ 34, ಲಿಯಾಮ್ ಲಿವಿಂಗ್‌ಸ್ಟೋನ್ 27, ಡೇವಿಡ್ ವಿಲ್ಲಿಕ್ 18, ಕ್ರೇಗ್ ಓವರ್‌ಟಾಂಕ್ 32 ರನ್ ಕೊಡುಗೆ ಸಲ್ಲಿಸಿದ ಪರಿಣಾಮ ಇಂಗ್ಲೆಂಡ್ 259 ರನ್ ಗಳಿಸಿತು. ಭಾರತ ಪರ ಹಾರ್ದಿಕ್ 4 ವಿಕೆಟ್ ಕಿತ್ತರೆ ಚಹಲ್ 3 ವಿಕೆಟ್ ಪಡೆದರು.

Published On - 8:09 am, Mon, 18 July 22

ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ