AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant Health: ಪಂತ್​ಗೆ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆ! ಕ್ರಿಕೆಟ್​ನಿಂದ ಬರೋಬ್ಬರಿ 9 ತಿಂಗಳು ದೂರ?

Rishabh Pant Health: ಸದ್ಯಕ್ಕೆ ರಿಷಬ್ ಅವರ ಮೊಣಕಾಲು ಮತ್ತು ಕಣಕಾಲುಗಳೆರಡಕ್ಕೂ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿದೆ. ಈ ಕಾರಣದಿಂದಾಗಿ, ಅವರು ಸುಮಾರು 9 ತಿಂಗಳ ಕಾಲ ಹೊರಗೆ ಇರುತ್ತಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇನ್ಸೈಡ್ ಸ್ಪೋರ್ಟ್ ವರದಿ ಮಾಡಿದೆ.

Rishabh Pant Health: ಪಂತ್​ಗೆ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆ! ಕ್ರಿಕೆಟ್​ನಿಂದ ಬರೋಬ್ಬರಿ 9 ತಿಂಗಳು ದೂರ?
ರಿಷಬ್ ಪಂತ್
TV9 Web
| Updated By: ಪೃಥ್ವಿಶಂಕರ|

Updated on:Jan 05, 2023 | 11:57 AM

Share

ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಡೆಹ್ರಾಡೂನ್​ನ ಮ್ಯಾಕ್ಸ್ (Max Hospital) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಪಂತ್ (Rishabh Pant) ಅವರನ್ನು ನಿನ್ನೆ, ಅಂದರೆ ಜ.4ರಂದು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್ ಮಾಡಲಾಗಿತ್ತು. ಕಳೆದ ಶುಕ್ರವಾರ ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದ ರಿಷಬ್ ಪಂತ್, ಅಂದಿನಿಂದ ಡೆಹ್ರಾಡೂನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅವರನ್ನು ಮುಂಬೈಗೆ ಶಿಫ್ಟ್ ಮಾಡಿದೆ. ಇದೀಗ ಬಂದಿರುವ ಮಾಹಿತಿ ಪ್ರಕಾರ ಪಂತ್ ಅವರನ್ನು ಮಂಡಿ ಆಪರೇಷನ್​ಗಾಗಿ ಲಂಡನ್​ಗೆ (London) ಕಳುಹಿಸುವ ಸಾಧ್ಯತೆ ಇದೆ. ಅಷ್ಟೇ ಅಲ್ಲ, ಈ ಶಸ್ತ್ರ ಚಿಕಿತ್ಸೆ ಮುಗಿದ ಬಳಿಕ ಪಂತ್ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸುಮಾರು 9 ತಿಂಗಳು ಬೇಕಾಗಬಹುದು ಎಂದು ವರದಿಯಾಗಿದೆ.

ರಸ್ತೆ ಅಪಘಾತದಲ್ಲಿ ಪಂತ್ ದೇಹದಲ್ಲಿ ಅನೇಕ ಗಾಯಗಳಿದ್ದವು. ಆದರೆ ಯಾವ ಇಂಜುರಿಯೂ ಅವರ ಜೀವಕ್ಕೆ ಅಥವಾ ಅವರ ವೃತ್ತಿಜೀವನಕ್ಕೆ ಅಪಾಯವನ್ನುಂಟುಮಾಡುವಷ್ಟು ಗಂಭೀರವಾಗಿರಲಿಲ್ಲ. ಆದರೆ ಪಂತ್‌ಗೆ ಅತ್ಯಂತ ಅಪಾಯಕಾರಿ ಗಾಯವೆಂದರೆ ಅದು ಮೊಣಕಾಲು ಇಂಜುರಿ. ಹೀಗಾಗಿ ಆ ಗಾಯದ ಮಟ್ಟವನ್ನು ಪರೀಕ್ಷಿಸಲು, ಬಿಸಿಸಿಐ ಅವರನ್ನು ವಿಶೇಷ ಏರ್ ಆಂಬ್ಯುಲೆನ್ಸ್ ಮೂಲಕ ಜನವರಿ 4 ರ ಬುಧವಾರ ಮುಂಬೈನ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈನ ಅಂಬಾನಿ ಆಸ್ಪತ್ರೆಯಲ್ಲಿ ಪಂತ್​ಗೆ ಚಿಕಿತ್ಸೆ! ಡೆಹ್ರಾಡೂನ್​ನಿಂದ ಏರ್​ ಲಿಫ್ಟ್; ಮಾಹಿತಿ ನೀಡಿದ ಬಿಸಿಸಿಐ

ಲಂಡನ್ನಲ್ಲಿ ಶಸ್ತ್ರಚಿಕಿತ್ಸೆ

ಈಗ ಮುಂಬೈನ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಂತ್​ಗೆ ಇಲ್ಲಿ ಎಂಆರ್‌ಐ ಸ್ಕ್ಯಾನ್‌ಗಳನ್ನು ಮಾಡಲಾಗುವುದು. ಬಳಿಕ ಪಂತ್​ಗೆ ಆಗಿರುವ ಮೊಣಕಾಲು ಇಂಜುರಿ ತೀವ್ರತೆ ತಿಳಿಯಲಿದೆ. ಆ ಬಳಿಕ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಲಂಡನ್‌ಗೆ ಕಳುಹಿಸಲಾಗುವುದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇನ್ಸೈಡ್ ಸ್ಪೋರ್ಟ್ ವರದಿ ಮಾಡಿದೆ. ಹೀಗಾಗಿ ಈ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳಲು ಪಂತ್​ಗೆ ದೀರ್ಘಕಾಲ ಹಿಡಿಯುವುದರಿಂದ ಅವರು ಹಲವು ತಿಂಗಳು ಮೈದಾನಕ್ಕೆ ಮರಳಲು ಸಾಧ್ಯವಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಎರಡೂ ಮೊಣಕಾಲುಗಳಿಗೆ ಶಸ್ತ್ರಚಿಕಿತ್ಸೆ

ಎರಡೂ ಮೊಣಕಾಲುಗಳ ಶಸ್ತ್ರಚಿಕಿತ್ಸೆಯಿಂದಾಗಿ ಪಂತ್ 9 ತಿಂಗಳ ಕಾಲ ಕ್ರಿಕೆಟ್​ನಿಂದ ಹೊರಗುಳಿಯುವ ನಿರೀಕ್ಷೆಯಿದೆ. ಒಮ್ಮೆ ಊತ ಕಡಿಮೆಯಾದ ನಂತರ, ಡಾ ಪಾರ್ದಿವಾಲಾ ಮತ್ತು ಅವರ ತಂಡವು ಮುಂದಿನ ಚಿಕಿತ್ಸೆಯ ಕೋರ್ಸ್ ಅನ್ನು ನಿರ್ಧರಿಸುತ್ತದೆ. ಸದ್ಯಕ್ಕೆ ರಿಷಬ್ ಅವರ ಮೊಣಕಾಲು ಮತ್ತು ಕಣಕಾಲುಗಳೆರಡಕ್ಕೂ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿದೆ. ಈ ಕಾರಣದಿಂದಾಗಿ, ಅವರು ಸುಮಾರು 9 ತಿಂಗಳ ಕಾಲ ಹೊರಗೆ ಇರುತ್ತಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇನ್ಸೈಡ್ ಸ್ಪೋರ್ಟ್ ವರದಿ ಮಾಡಿದೆ.

ವಿಶ್ವಕಪ್‌ ಆಡ್ತಾರಾ ಪಂತ್?

ಈ ಕಾರಣದಿಂದಾಗಿ ಪಂತ್, ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಹೊರತುಪಡಿಸಿ, ಐಪಿಎಲ್​ನಿಂದಲೂ ಹೊರಗುಳಿಯಲಿದ್ದಾರೆ. ಆದಾಗ್ಯೂ, ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ವೇಳೆಗೆ ಪಂತ್ ಚೇತರಿಸಿಕೊಳ್ಳಲ್ಲಿ ಎಂದು ಭಾರತ ತಂಡ ಆಶಿಸುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Thu, 5 January 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್