LSG vs SRH, IPL 2025: ಐಪಿಎಲ್ನಿಂದ ಲಕ್ನೋ ಔಟ್: ಪಂದ್ಯದ ಬಳಿಕ ವಿಚಿತ್ರ ಹೇಳಿಕೆ ನೀಡಿದ ರಿಷಭ್ ಪಂತ್
Rishabh Pant match presentation: ಹೈದರಾಬಾದ್ ವಿರುದ್ಧ ಸೋತು ಟೂರ್ನಮೆಂಟ್ನಿಂದ ಹೊರಬಿದ್ದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಲಕ್ನೋ ಸೂಪರ್ ಜೇಂಟ್ಸ್ ನಾಯಕ ರಿಷಭ್ ಪಂತ್, ನಾವು ಹರಾಜಿನಲ್ಲಿ ಯೋಜಿಸಿದ ರೀತಿಯಲ್ಲಿಯೇ ಬೌಲಿಂಗ್ ದಾಳಿಯನ್ನು ಹೊಂದಿದ್ದರೆ, ಕಥೆ ಬೇರೆಯೇ ಆಗಿರುತ್ತಿತ್ತು ಎಂದು ಹೇಳಿದ್ದಾರೆ.

ಬೆಂಗಳೂರು (ಮೇ. 20): ಅಭಿಷೇಕ್ ಶರ್ಮಾ (Abhishek Sharma) ಅವರ 20 ಎಸೆತಗಳಲ್ಲಿ 59 ರನ್ಗಳ ಸುಂಟರಗಾಳಿ, ಹೆನ್ರಿಚ್ ಕ್ಲಾಸೆನ್ (28 ಎಸೆತಗಳಲ್ಲಿ 47), ಕಮಿಂಡು ಮೆಂಡಿಸ್ (21 ಎಸೆತಗಳಲ್ಲಿ 32 ರನ್ಗಳಿಗೆ ನಿವೃತ್ತಿ) ಮತ್ತು ಇಶಾನ್ ಕಿಶನ್ (28 ಎಸೆತಗಳಲ್ಲಿ 35) ಅವರ ಉಪಯುಕ್ತ ಕೊಡುಗೆಗಳ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ (LSG) ತಂಡವನ್ನು 6 ವಿಕೆಟ್ಗಳಿಂದ ಸೋಲಿಸಿತು. ಈ ಸೋಲಿನೊಂದಿಗೆ, LSG ತಂಡವು ಪ್ಲೇಆಫ್ ರೇಸ್ನಿಂದ ಹೊರಬಿತ್ತು. ಇದು ಎಲ್ಎಸ್ಜಿಯ 12 ಪಂದ್ಯಗಳಲ್ಲಿ ಏಳನೇ ಸೋಲು ಮತ್ತು ತಂಡವು 10 ಅಂಕಗಳೊಂದಿಗೆ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಪಂದ್ಯ ಸೋತ ನಂತರ ಲಕ್ನೋ ನಾಯಕ ರಿಷಭ್ ಪಂತ್ ದೊಡ್ಡ ಹೇಳಿಕೆ ನೀಡಿದ್ದಾರೆ.
ಸೋಲಿನ ನಂತರ ರಿಷಭ್ ಪಂತ್ ಹೇಳಿದ್ದೇನು?
ಟೂರ್ನಮೆಂಟ್ ನಿಂದ ಹೊರಗುಳಿದ ನಂತರ ರಿಷಭ್ ಪಂತ್ ವಿಚಿತ್ರ ಹೇಳಿಕೆ ನೀಡಿದ್ದಾರೆ. ‘‘ಗಾಯಗಳಿಂದಾಗಿ ನಾವು ಕೆಲವು ನ್ಯೂನತೆಗಳನ್ನು ತುಂಬಬೇಕು ಎಂದು ನಮಗೆ ತಿಳಿದಿತ್ತು. ಒಂದು ತಂಡವಾಗಿ ನಾವು ಅದರ ಬಗ್ಗೆ ಮಾತನಾಡದಿರಲು ನಿರ್ಧರಿಸಿದ್ದೆವು. ಆದರೆ ಅದರ ಉದ್ದೇಶ ನ್ಯೂನತೆಗಳನ್ನು ನಿವಾರಿಸುವುದಾಗಿತ್ತು. ನಾವು ಹರಾಜಿನಲ್ಲಿ ಯೋಜಿಸಿದ ರೀತಿಯಲ್ಲಿಯೇ ಬೌಲಿಂಗ್ ದಾಳಿಯನ್ನು ಹೊಂದಿದ್ದರೆ, ಕಥೆ ಬೇರೆಯೇ ಆಗಿರುತ್ತಿತ್ತು. ಕೆಲವೊಮ್ಮೆ ವಿಷಯಗಳು ನಾವು ಅಂದುಕೊಂಡ ರೀತಿ ನಡೆಯುತ್ತೆ, ಕೆಲವೊಮ್ಮೆ ಹಾಗಗಲ್ಲ’’ ಎಂದಿದ್ದಾರೆ.
ನಮ್ಮ ಆಟದ ಬಗ್ಗೆ ನನಗೆ ಹೆಮ್ಮೆ ಇದೆ- ಪಂತ್
ನಾವು ಆಡಿದ ರೀತಿಗೆ ನಮಗೆ ಹೆಮ್ಮೆ ಇದೆ ಮತ್ತು ನಾವು ಸಕಾರಾತ್ಮಕ ಅಂಶಗಳತ್ತ ಗಮನ ಹರಿಸುತ್ತೇವೆ ಎಂದು ಪಂತ್ ಹೇಳಿದರು. ನಮ್ಮಲ್ಲಿ ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ಇದೆ. ಬೌಲರ್ಗಳಿಗೂ ಸಹ, ಅವರು ಉತ್ತಮ ಪ್ರದೇಶಗಳಲ್ಲಿ ಬೌಲಿಂಗ್ ಮಾಡುತ್ತಿದ್ದ ಸಂದರ್ಭಗಳಿದ್ದವು. ನಾವು ಅದರ ಪೂರ್ಣ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದೆವು. ನಮಗೆ ಹತ್ತು ರನ್ ಕಡಿಮೆ ಇದೆ ಎಂದು ತಿಳಿದಿತ್ತು. ನಾವು ಕೆಲವು ಸಂದರ್ಭಗಳಲ್ಲಿ ಚೆನ್ನಾಗಿ ಆಡಿದೆವು ಆದರೆ ಪಂದ್ಯವನ್ನು ಮುಗಿಸಲು ಸಾಧ್ಯವಾಗಲಿಲ್ಲ. ದಿಗ್ವೇಶ್ ರಾಥಿ ಚೆನ್ನಾಗಿ ಆಡಿದ್ದಾರೆ. ಇದು ಅವರ ಮೊದಲ ಸೀಸನ್. ಅವರು ಬೌಲಿಂಗ್ ಮಾಡಿದ ರೀತಿಯನ್ನು ನೋಡುವುದೇ ಚೆನ್ನಾಗಿತ್ತು ಎಂದರು.
IPL 2025: ಹೈದರಾಬಾದ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಲಕ್ನೋ
ಲಕ್ನೋಗೆ ಹೀನಾಯ ಸೋಲು
ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಲ್ಪಟ್ಟ ನಂತರ ಲಕ್ನೋ ತಂಡ 7 ವಿಕೆಟ್ಗೆ 205 ರನ್ಗಳ ದೊಡ್ಡ ಮೊತ್ತವನ್ನು ಗಳಿಸಿತು ಆದರೆ ಹೈದರಾಬಾದ್ 18.2 ಓವರ್ಗಳಲ್ಲಿ ಕೇವಲ ನಾಲ್ಕು ವಿಕೆಟ್ ಕಳೆದುಕೊಂಡು ಗುರಿಯನ್ನು ತಲುಪಿತು. ಈ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಗುರಿಯನ್ನು ಬೆನ್ನಟ್ಟಿದ ತಂಡ 200 ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಗೆಲುವು ಸಾಧಿಸಿದೆ. ಅಭಿಷೇಕ್ ಇನ್ನಿಂಗ್ಸ್ನ ಆರಂಭದಲ್ಲಿ ನಾಲ್ಕು ಬೌಂಡರಿ ಮತ್ತು ಆರು ಸಿಕ್ಸರ್ಗಳನ್ನು ಗಳಿಸಿ ಸ್ಫೋಟಕ ಆಟವಾಡಿದರು. ರವಿ ಬಿಷ್ಣೋಯ್ ವಿರುದ್ಧ ಸತತ ನಾಲ್ಕು ಸಿಕ್ಸರ್ಗಳನ್ನು ಬಾರಿಸುವ ಮೂಲಕ ಅವರು 18 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




