AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ನೋ ಬಾಲ್ ವಿವಾದ: ಪಂದ್ಯ ಮುಗಿದ ಬಳಿಕ ಅಂಪೈರ್ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ರಿಷಭ್ ಪಂತ್

No call controversy, DC vs RR: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದ ಕೊನೆಯ ಓವರ್​ನಲ್ಲಿ ನೋ ಬಾಲ್ ಕುರಿತು ಹೈ ಡ್ರಾಮವೇ ನಡೆದು ಹೋಯಿತು. ಪಂದ್ಯ ಮುಗಿದ ಬಳಿಕ ಈ ಬಗ್ಗೆ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಈ ಬಗ್ಗೆ ಮಾತನಾಡಿದ್ದು ಏನು ಹೇಳಿದರು ಎಂಬುದನ್ನು ಕೇಳಿ

Rishabh Pant: ನೋ ಬಾಲ್ ವಿವಾದ: ಪಂದ್ಯ ಮುಗಿದ ಬಳಿಕ ಅಂಪೈರ್ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ರಿಷಭ್ ಪಂತ್
Rishabh Pant post-match presentation DC vs RR
TV9 Web
| Updated By: Vinay Bhat|

Updated on: Apr 23, 2022 | 9:54 AM

Share

ಐಪಿಎಲ್ 2022 ರಲ್ಲಿ (IPL 2022) ಶುಕ್ರವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC vs RR) ಸೋಲು ಕಂಡಿತು. ಈ ಮೂಲಕ ಆಡಿದ ಏಳು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲುಂಡು ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಹೈ ಸ್ಕೋರ್ ಪಂದ್ಯದಲ್ಲಿ ರಿಷಭ್ ಪಂತ್ (Rishabh Pant) ಪಡೆ ಗೆಲುವಿಗಾಗಿ ಕೊನೆಯ ಓವರ್ ವರೆಗೂ ಹೋರಾಡಿ ಸೋತಿತು. ಆರ್​ಆರ್ ಆರಂಭಿಕ ಜೋಸ್ ಬಟ್ಲರ್ (116 ರನ್, 65 ಎಸೆತ, 9 ಬೌಂಡರಿ, 9 ಸಿಕ್ಸರ್) ಹಾಗೂ ಕನ್ನಡಿಗ ದೇವದತ್ ಪಡಿಕ್ಕಲ್ (54ರನ್, 35 ಎಸೆತ, 7 ಬೌಂಡರಿ, 2 ಸಿಕ್ಸರ್) ಜೋಡಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ 222 ರನ್ ಕಲೆಹಾಕಿತು. ಪ್ರತಿಯಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್​​ಗೆ 8 ವಿಕೆಟ್‌ಗೆ 207 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಅದರಲ್ಲೂ ಕೊನೆಯ ಓವರ್​ನಲ್ಲಿ ನೋ ಬಾಲ್ ಕುರಿತು ಹೈ ಡ್ರಾಮವೇ ನಡೆದು ಹೋಯಿತು.

ಪಂದ್ಯ ಮುಗಿದ ಬಳಿಕ ಈ ಬಗ್ಗೆ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್, “ಪಂದ್ಯದ ಕೊನೆಯ ಹಂತದ ವರೆಗೂ ರಾಜಸ್ಥಾನ್ ಬೌಲರ್​ಗಳು ಉತ್ತಮ ಪ್ರದರ್ಶನ ತೋರಿದರು. ಆದರೆ, ಅಂತಿಮ ಹಂತದಲ್ಲಿ ರೋವ್ಮನ್‌ ಪೊವೆಲ್‌ ನಮಗೆ ಗೆಲುವಿನ ಆಸೆ ಚಿಗುರಿಸಿದರು. ಆ ಎಸೆತಕ್ಕೆ ನೋ ಬಾಲ್‌ ತೀರ್ಪು ಕೊಟ್ಟಿದ್ದರೆ, ನಮ್ಮ ಪಾಲಿಗೆ ಅತ್ಯಮೂಲ್ಯವಾಗಿರುತ್ತಿತ್ತು. ಅದನ್ನು ನಾವು ಕೂಡ ಪರಿಶೀಲನೆ ಮಾಡಬಹುದಿತ್ತು. ಆದರೆ ಇದು ನಮ್ಮ ನಿಯಂತ್ರಣದಲ್ಲಿಲ್ಲ. ಇದರಿಂದ ಎಲ್ಲರಿಗೂ ತುಂಬಾ ನೋವಾಗಿದೆ. ಏಕೆಂದರೆ, ಅದು ನೋ ಬಾಲ್ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಥರ್ಡ್ ಅಂಪೈರ್‌ ಮಧ್ಯ ಪ್ರವೇಶಿಸಿ ನೋ ಬಾಲ್ ಎಂದು ತೀರ್ಪು ನೀಡಬಹುದಿತ್ತು. ಆದರೆ, ಈ ಕೆಲಸ ಕೂಡ ಅಲ್ಲಿ ನಡೆಯಲಿಲ್ಲ,” ಎಂದು ಅಂಪೈರ್ ವಿರುದ್ಧ ನೇರವಾಗಿ ದೂರಿದ್ದಾರೆ.

“ಈ ನೋ ಬಾಲ್‌ ವಿಷಯದಲ್ಲಿ ಸರಿಯಾದ ತೀರ್ಪು ಮೂಡಿ ಬಂದಿದ್ದರೆ, ಇಡೀ ಪಂದ್ಯದ ಚಿತ್ರಣ ಬದಲಾಗುತ್ತಿತ್ತು. ಮೈದಾನದಲ್ಲಿ ನಮಗೆ ಏನಾಯಿತು ಅದು ಸರಿಯಲ್ಲ. ಸನ್ನಿವೇಶ ಸ್ವಲ್ಪ ಕಠಿಣವಾಗಿತ್ತು. ಇದರ ಬಗ್ಗೆ ನಾವು ಏನೂ ಮಾಡಲು ಸಾಧ್ಯವಿಲ್ಲ. ಇಬ್ಬರೂ ಅಂಪೈರ್‌ಗಳು ನೋ ಬಾಲ್‌ ವಿಷಯದಲ್ಲಿ ತಪ್ಪು ಮಾಡಿದ್ದಾರೆಂದು ನನಗೆ ಅನಿಸುತ್ತಿದೆ. ಆದರೆ, ಟೂರ್ನಿಯುದ್ದಕ್ಕೂ ನಾವು ಅತ್ಯುತ್ತಮ ಅಂಪೈರಿಂಗ್ ಅನ್ನು ನೋಡಿದ್ದೇವೆ. ನಮ್ಮ ಬೌಲಿಂಗ್ ಚೆನ್ನಾಗಿರಲಿಲ್ಲ ನಿಜ. ಆದರೆ, ದೊಡ್ಡ ಮೊತ್ತ ಟಾರ್ಗೆಟ್ ಬೆನ್ನಟ್ಟಿ ಇಷ್ಟು ಹತ್ತಿರ ಬಂದು ಸೋಲು ಅನುಭವಿಸಿದ್ದಕ್ಕೆ ತುಂಬಾ ಬೇಸರವಾಗುತ್ತಿದೆ. ಇಲ್ಲಿ ಮಾಡಿರುವ ತಪ್ಪನ್ನು ತಿದ್ದಿ ಮುಂದಿನ ಪಂದ್ಯದಲ್ಲಿ ಇನ್ನಷ್ಟು ಬಲಿಷ್ಠವಾಗಿ ಕಮ್​ಬ್ಯಾಕ್ ಮಾಡುತ್ತೇವೆ,” ಎಂಬುದು ಪಂತ್ ಮಾತು.

ಇನ್ನು ರಾಜಸ್ಥಾನ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮಾತನಾಡಿ, “ಅದು ಫುಲ್-ಟಾಸ್ ಬಾಲ್ ಆಗಿತ್ತು ಮತ್ತು ಬ್ಯಾಟ್ಸ್​ಮನ್ ಅದನ್ನು ನೋ ಬಾಲ್ ಕೊಡಿ ಎಂದು ಕೇಳಿದರು. ಆದರೆ, ಅಂಪೈರ್ ಕೊಡಲಿಲ್ಲ. ಮೊದಲ ಮೂರು ಎಸೆತಗಳಲ್ಲಿ ಸತತ ಮೂರು ಸಿಕ್ಸ್ ಬಾರಿಸಿದ ಸಂದರ್ಭ ಬೌಲರ್​ಗೆ ಬೌಲಿಂಗ್ ಮಾಡುವುದು ಸುಲಭ ಆಗಿರುವುದಿಲ್ಲ. ಕಳೆದ ಪಂದ್ಯದಂತೆ ಈ ಪಂದ್ಯ ಕೂಡ ಕಷ್ಟವಾಗಿತ್ತು. ರೋವ್ಮನ್‌ ಪೊವೆಲ್‌ ಆರೀತಿ ಸಿಕ್ಸರ್​ಗಳನ್ನು ಸಿಡಿಸುತ್ತಿದ್ದಾಗ ಸಮಾಧಾನದಿಂದ ಯೋಚಿಸಿ ನಮ್ಮ ತಂಡದ ಆಟಗಾರರನ್ನು ನಂಬುವುದು ಮುಖ್ಯ. ಟಾಸ್ ಬಗ್ಗೆ ಏನನ್ನು ಹೇಳಲು ಸಾಧ್ಯವಿಲ್ಲ. ಟಾಸ್ ಸೋತರು ಈಗ ಪಂದ್ಯವನ್ನು ಗೆಲ್ಲುತ್ತಿದ್ದೇವೆ. ಬಟ್ಲರ್ ಆಟ ಅದ್ಭುತವಾಗಿತ್ತು. ಪಡಿಕ್ಕಲ್ ಕೂಡ ತಂಡಕ್ಕೆ ಉತ್ತಮ ಕೊಡುಗೆ ನೀಡಿದರು,” ಎಂದು ಹೇಳಿದ್ದಾರೆ.

Rishabb Pant: ಅಂಪೈರ್ ನೋ ಬಾಲ್ ಕೊಟ್ಟಿಲ್ಲ ಹೋಗಿ ಕೇಳೆಂದು ಕೋಚ್ ಅನ್ನೇ ಮೈದಾನಕ್ಕೆ ಅಟ್ಟಿದ ಪಂತ್

RCB vs SRH: ಐಪಿಎಲ್​ನಲ್ಲಿಂದು ಎರಡು ಪಂದ್ಯ: ಗೆಲುವಿನ ಓಟ ಮುಂದುವರೆಸುತ್ತಾ ಆರ್​​ಸಿಬಿ?

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?