Rishabh Pant: ರಿಷಭ್ ಪಂತ್ ಸೋಲಿಗೆ ದೂರಿದ್ದು ಬೌಲರ್​ಗಳನ್ನಲ್ಲ: ಪಂದ್ಯದ ಬಳಿಕ ಏನಂದ್ರು ನೋಡಿ

IND vs SA 1st T20I: ಆಫ್ರಿಕಾ ತಂಡ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ರಾಸಿ ವನ್ ಡರ್ ಡುಸೆನ್ ಹಾಗೂ ಡೇವಿಡ್ ಮಿಲ್ಲರ್ ಜೋಡಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 212 ರನ್‌ಗಳಿಸಿ ಜಯದ ನಗೆ ಬೀರಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ರಿಷಭ್ ಪಂತ್ ಏನು ಹೇಳಿದರು ಕೇಳಿ.

Rishabh Pant: ರಿಷಭ್ ಪಂತ್ ಸೋಲಿಗೆ ದೂರಿದ್ದು ಬೌಲರ್​ಗಳನ್ನಲ್ಲ: ಪಂದ್ಯದ ಬಳಿಕ ಏನಂದ್ರು ನೋಡಿ
rishabh pant post match presentation IND vs SA
Follow us
| Updated By: Vinay Bhat

Updated on:Jun 10, 2022 | 11:58 AM

212 ರನ್​ಗಳ ಬೆಟ್ಟದಂತಹ ಟಾರ್ಗೆಟ್ ನೀಡಿದ್ದರೂ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ (India vs South Africa) ಜಯ ಸಾಧಿಸಲು ಸಾಧ್ಯವಾಗಲಿಲ್ಲ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆರಂಭಿಕ ಇಶಾನ್ ಕಿಶನ್ ಅವರ 76 ರನ್ ಹಾಗೂ ಹಾರ್ದಿಕ್ ಪಾಂಡ್ಯ (Hardik Pandya) ಮತ್ತು ಶ್ರೇಯಸ್ ಅಯ್ಯರ್ ಅವರ ಉಪಯುಕ್ತ ಕಾಣಿಕೆಯ ಫಲವಾಗಿ 20 ಓವರ್​ನಲ್ಲಿ 4 ವಿಕೆಟ್‌ಗೆ 211 ರನ್ ಪೇರಿಸಿತು. ಈ ಬೃಹತ್ ಮೊತ್ತ ಬೆನ್ನಟ್ಟಿದ ದ. ಆಫ್ರಿಕಾ ತಂಡ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ರಾಸಿ ವನ್ ಡರ್ ಡುಸೆನ್ (75*ರನ್, 46 ಎಸೆತ, 7 ಬೌಂಡರಿ, 5 ಸಿಕ್ಸರ್) ಹಾಗೂ ಡೇವಿಡ್ ಮಿಲ್ಲರ್ (64*ರನ್, 31ಎಸೆತ, 4 ಬೌಂಡರಿ, 5 ಸಿಕ್ಸರ್) ಜೋಡಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 19.1 ಓವರ್‌ಗಳಲ್ಲಿ 3 ವಿಕೆಟ್‌ಗೆ 212 ರನ್‌ಗಳಿಸಿ ಜಯದ ನಗೆ ಬೀರಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ರಿಷಭ್ ಪಂತ್ (Rishabh Pant) ಏನು ಹೇಳಿದರು ಕೇಳಿ.

ದಕ್ಷಿಣ ಆಫ್ರಿಕಾ ಬ್ಯಾಟರ್​ಗಳನ್ನು ಕಟ್ಟಿ ಹಾಕಲು ಭಾರತೀಯ ಬೌಲರ್​ಗಳು ಸಂಪೂರ್ಣ ವಿಫಲರಾದರು. ಎಲ್ಲ ಬೌಲರ್​ಗಳು ದುಬಾರಿಯಾದರು. ಆದರೆ, ಪಂದ್ಯ ಮುಗಿದ ಬಳಿಕ ಪಂತ್ ಈ ಬಗ್ಗೆ ಒಂದು ಮಾತು ಆಡಲಿಲ್ಲ. “ನಾವು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ತೋರಿದೆವು. ಕಲೆ ಹಾಕಿದ್ದ ರನ್‌ಗಳು ಸಾಕೆಂದು ಭಾವಿಸುತ್ತೇನೆ. ಆದರೆ, ಬೌಲಿಂಗ್‌ನಲ್ಲಿ ನಾವು ಯೋಜನೆಯನ್ನು ಕಾರ್ಯಗತಗೊಳಿಸುವಲ್ಲಿ ವಿಫಲರಾಗಿದ್ದೇವೆ. ಈ ಜಯದ ಶ್ರೇಯ ಎದುರಾಳಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳಿಗೆ ಸಲ್ಲಬೇಕು,” ಎಂದು ಪಂತ್ ಹೇಳಿದ್ದಾರೆ.

Dinesh Karthik: ಮೊದಲ ಟಿ20 ಪಂದ್ಯದಲ್ಲಿ ದಿನೇಶ್ ಕಾರ್ತಿಕ್​ಗೆ ಅವಮಾನ: ಅದು ಭಾರತೀಯ ಪ್ಲೇಯರ್​ನಿಂದಲೆ

ಇದನ್ನೂ ಓದಿ
Image
Exclusive: ಇದು ಭಾರತೀಯ ಕ್ರಿಕೆಟ್ ತಲೆತಗ್ಗಿಸುವಂತಹ ಸುದ್ದಿ: ಇಲ್ಲಿದೆ ಉತ್ತರಖಂಡ ಕ್ರಿಕೆಟ್​ನ ಕರ್ಮಕಾಂಡ
Image
IND vs SA: ವಿಶ್ವದ ದಾಖಲೆ ನಿರ್ಮಿಸುವ ಟೀಮ್ ಇಂಡಿಯಾ ಕನಸು ನುಚ್ಚುನೂರು ಮಾಡಿದ ಆಫ್ರಿಕಾನ್ನರು
Image
India vs South Africa, 1st T20: ಮಿಂಚಿದ ಕಿಲ್ಲರ್ ಮಿಲ್ಲರ್, ಡೇಂಜರಸ್ ಡುಸ್ಸೆನ್: ಸೌತ್​ ಆಫ್ರಿಕಾಗೆ ಭರ್ಜರಿ ಜಯ
Image
IPL 2023: 74, 84, 94: ಐಪಿಎಲ್​ ಟೂರ್ನಿಯಲ್ಲಿ ಮಹತ್ವದ ಬದಲಾವಣೆ..!

“ಡೇವಿಡ್ ಮಿಲ್ಲರ್, ರಾಸಿ ವನ್ ಡರ್ ಡುಸೆನ್ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ನಾವು ಬ್ಯಾಟಿಂಗ್ ಮಾಡುವಾಗ ವಿಕೆಟ್ ಸ್ವಲ್ಪ ಸ್ಲೋ ಇತ್ತು. ಆ ನಂತರ ಸೆಕೆಂಡ್ ಇನ್ನಿಂಗ್ಸ್​​ನಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿತ್ತು. ಮಿಲ್ಲರ್ ಅವರನ್ನ ಕಟ್ಟಿಹಾಕಲು ನಾವು ಪ್ರಯತ್ನಿಸಿದ್ದೇವು. ಆದರೆ ಪಿಚ್ ಬ್ಯಾಟಿಂಗ್​ಗೆ ಸಂಪೂರ್ಣವಾಗಿ ಬೆಂಬಲ ನೀಡುತ್ತಿತ್ತು. ಆದರೂ ನಮ್ಮ ಪ್ರದರ್ಶನದ ಬಗ್ಗೆ ಖುಷಿ ಇದೆ. ಮುಂದಿನ ಪಂದ್ಯದಲ್ಲಿ ನಾವು ಖಂಡಿತವಾಗಿ ಕಮ್ ಬ್ಯಾಕ್ ಮಾಡುತ್ತೇವೆ,” ಎಂದು ಹೇಳಿ ಪಂತ್ ಮಾತು ಮುಗಿಸಿದರು.

ಇನ್ನು ಗೆದ್ದ ತಂಡದ ದ. ಆಫ್ರಿಕಾ ನಾಯಕ ತೆಂಬ ಬವೂಮ ಮಾತನಾಡಿ, “ಭಾರತದ ಬ್ಯಾಟಿಂಗ್‌ ವೇಳೆ ನಿಧಾನಗತಿಯ ಎಸೆತಗಳು ಕೆಲಸ ಮಾಡಬಹುದೆಂದು ಅನಿಸಿತ್ತು. ಆದರೆ, ದ್ವಿತೀಯ ಇನಿಂಗ್ಸ್‌ನಲ್ಲಿ ನಿಧಾನಗತಿಯ ಎಸೆತಗಳು ಬ್ಯಾಟ್ಸ್‌ಮನ್‌ಗಳಿಗೆ ತುಂಬಾ ಸುಲಭವಾಯಿತು. ನಾವು ಕಲೆ ಹಾಕಿದ ಮೊತ್ತದ ಬಗ್ಗೆ ಖುಷಿ ಇದೆ. ಆದರೆ, ನಮ್ಮ ಬೌಲಿಂಗ್ ಚೆನ್ನಾಗಿರಲಿಲ್ಲ. ತುಂಬಾ ರನ್ ಹರಿಬಿಟ್ಟೆವು. ಡೇವಿಡ್‌ ಮಿಲ್ಲರ್‌ ಐಪಿಎಲ್‌ ಟೂರ್ನಿಯ ಲಯವನ್ನು ಮುಂದುವರಿಸಿದ್ದಾರೆ ಹಾಗೂ ಇವರಿಗೆ ರಾಸಿ ವ್ಯಾನ್ ಡೆರ್‌ ಡುಸೆನ್‌ ಅತ್ಯುತ್ತಮವಾಗಿ ಸಾಥ್‌ ನೀಡಿದ್ದಾರೆ. ಬ್ಯಾಟಿಂಗ್‌ಗೆ ಹೇಳಿ ಮಾಡಿಸಿದ ಪಿಚ್‌  ಇದಾಗಿತ್ತು ಎಂದು ಹೇಳಿದ್ದಾರೆ.

“ಈ ಪಿಚ್​ನಲ್ಲಿ ಪ್ರಥಮ ಇನಿಂಗ್ಸ್‌ಗಿಂತ ದ್ವಿತೀಯ ಇನಿಂಗ್ಸ್‌ನಲ್ಲಿ ಅತ್ಯುತ್ತಮವಾಗಿ ಬ್ಯಾಟ್‌ ಮಾಡಬಹುದು ಎಂದು ನಾನು ಮೊದಲೇ ಅಂದುಕೊಂಡಿದ್ದೆ. ಈ ಕಾರಣದಿಂದಲೇ ಚೇಸಿಂಗ್‌ ಆಯ್ದುಕೊಂಡೆ. ಇದರ ಹೊರತಾಗಿಯೂ ಇಶಾನ್‌ ಕಿಶನ್‌ ಬ್ಯಾಟಿಂಗ್‌ ಹಾದಿ ತುಂಬಾ ಸುಲಭವಾಗಿತ್ತು. ಅವರು ನಮ್ಮ ಸ್ಪಿನ್ನರ್‌ಗಳನ್ನು ಒತ್ತಡಕ್ಕೆ ತಳ್ಳಿದ್ದರು. ಇದಕ್ಕೆ ತಕ್ಕಂತೆ ನಮ್ಮ ಬ್ಯಾಟರ್​ಗಳು ಕೂಡ ಉತ್ತಮ ತಿರುಗೇಟು ನೀಡಿದರು ಎಂಬುದು ತೆಂಬ ಬವೂಮ ಮಾತು.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:58 am, Fri, 10 June 22

ತಾಜಾ ಸುದ್ದಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ