AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant IPL 2024: ರಿಷಭ್ ಪಂತ್ ಫ್ಯಾನ್ಸ್​ಗೆ ಬಂಪರ್ ಸುದ್ದಿ: ಡೆಲ್ಲಿ ಕಡೆಯಿಂದ ಬಂತು ಖಚಿತ ಮಾಹಿತಿ

Delhi Capitals, IPL 2024: ಟೀಮ್ ಇಂಡಿಯಾ ಸೂಪರ್ ಸ್ಟಾರ್ ರಿಷಭ್ ಪಂತ್ ಐಪಿಎಲ್ 2024 ರ ಮೂಲಕ ಕ್ರಿಕೆಟ್ ಲೋಕಕ್ಕೆ ಕಮ್​ಬ್ಯಾಕ್ ಮಾಡುವುದು ಖಚಿತವಾಗಿದೆ. ಇವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿರುತ್ತಾರೆ ಎಂದು ಪಾರ್ಥ್ ಜಿಂದಾಲ್ ಹೇಳಿದ್ದಾರೆ. ಕಳೆದ ಋತುವಿನಲ್ಲಿ ಪಂತ್ ಆಡಲು ಸಾಧ್ಯವಾಗಲಿಲ್ಲ, ಈಗ ಸುಮಾರು ಒಂದೂವರೆ ವರ್ಷಗಳ ನಂತರ ಮೈದಾನಕ್ಕೆ ಮರಳುತ್ತಿದ್ದಾರೆ.

Rishabh Pant IPL 2024: ರಿಷಭ್ ಪಂತ್ ಫ್ಯಾನ್ಸ್​ಗೆ ಬಂಪರ್ ಸುದ್ದಿ: ಡೆಲ್ಲಿ ಕಡೆಯಿಂದ ಬಂತು ಖಚಿತ ಮಾಹಿತಿ
Rishabh Pant
Vinay Bhat
|

Updated on: Feb 23, 2024 | 10:22 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ವೇಳಾಪಟ್ಟಿಯನ್ನು (IPL 2024 Schedule) ಪ್ರಕಟಿಸಲಾಗಿದೆ. ಈ ಬಾರಿ ಲೋಕಸಭೆ ಚುನಾವಣೆಯ ಕಾರಣ, ಮೊದಲ 21 ದಿನಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರ ನಡುವೆ ರಿಷಭ್ ಪಂತ್ ಅಭಿಮಾನಿಗಳಿಗೆ ಶುಭಸುದ್ದಿ ಕೂಡ ಸಿಕ್ಕಿದೆ. ಐಪಿಎಲ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮೊದಲ ಪಂದ್ಯದಲೇ ರಿಷಭ್ ಪಂತ್ ನಾಯಕನಾಗಿ ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸ್‌ನ ಸಹ-ಮಾಲೀಕ ಪಾರ್ಥ್ ಜಿಂದಾಲ್ ESPNcricinfo ಗೆ ತಿಳಿಸಿದ್ದಾರೆ. ಹಾಗೆಯೆ ಅನ್ರಿಚ್ ನಾರ್ಟ್ಜೆ ಐಪಿಎಲ್‌ನಲ್ಲಿ ಪುನರಾಗಮನ ಮಾಡಲಿದ್ದಾರೆ ಎಂದು ಜಿಂದಾಲ್ ಖಚಿತ ಪಡಿಸಿದ್ದಾರೆ.

ಟಾಸ್ ಗೆದ್ದ ಇಂಗ್ಲೆಂಡ್: ಆಕಾಶ್ ದೀಪ್ ಪದಾರ್ಪಣೆ, ಇಲ್ಲಿದೆ ಭಾರತದ ಪ್ಲೇಯಿಂಗ್ XI

ಪಂತ್ ತಮ್ಮ ವಿಕೆಟ್ ಕೀಪಿಂಗ್ ಕಸರತ್ತನ್ನು ಪ್ರಾರಂಭಿಸಿದ್ದಾರೆ. ಬ್ಯಾಟಿಂಗ್ ಮಾಡುತ್ತಿದ್ದಾರೆ. ರನ್​ಗೆಂದು ಓಡುತ್ತಿದ್ದಾರೆ ಎಂದು ಪಾರ್ಥ್ ಹೇಳಿದ್ದಾರೆ. ಆದಾಗ್ಯೂ, ಅವರು ಐಪಿಎಲ್ 2024ರ ಮೊದಲಾರ್ಧದಲ್ಲಿ ವಿಕೆಟ್ ಕೀಪಿಂಗ್ ಮಾಡುವುದಿಲ್ಲ, ಅವರ ದೇಹವು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಆಧಾರದ ಮೇಲೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

“ರಿಷಭ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರು ಐಪಿಎಲ್‌ಗೆ ಸಂಪೂರ್ಣವಾಗಿ ಫಿಟ್ ಆಗುವ ಸಾಧ್ಯತೆಯಿದೆ. ಅವರು ಐಪಿಎಲ್ ಆಡುತ್ತಾರೆ, ಮೊದಲ ಪಂದ್ಯದಿಂದಲೇ ತಂಡವನ್ನು ಮುನ್ನಡೆಸುತ್ತಾರೆ. ಮೊದಲ ಏಳು ಪಂದ್ಯಗಳಲ್ಲಿ ಅವರು ಬ್ಯಾಟರ್ ಆಗಿ ಮತ್ತು ನಾಯಕನಾಗಿ ಮಾತ್ರ ಕಾಣಿಸಲಿದ್ದಾರೆ. ನಂತರ ಅವರ ದೇಹವು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಆಧಾರದ ಮೇಲೆ ನಿರ್ಧಾರ ಮಾಡುತ್ತೇವೆ,” ಎಂದು ಪಾರ್ಥ್ ಜಿಂದಾಲ್ ಹೇಳಿದ್ದಾರೆ.

ಹಾಗೆಯೆ ದಕ್ಷಿಣ ಆಫ್ರಿಕಾದ ವೇಗಿ ಅನ್ರಿಚ್ ನಾರ್ಟ್ಜೆ ಫಿಟ್ ಮತ್ತು ಐಪಿಎಲ್‌ನಲ್ಲಿ ಪುನರಾಗಮನ ಮಾಡಲಿದ್ದಾರೆ ಎಂದಿದ್ದಾರೆ. ಅವರು 80% ಫಿಟ್ ಆಗಿದ್ದಾರೆ. ಮುಂದಿನ ವಾರ, ಶೇ. 100 ರಷ್ಟು ಫಿಟ್ ಆಗಿ ಬೌಲಿಂಗ್ ಮಾಡುತ್ತಾರೆ. ಅವರು IPL ನಲ್ಲಿ ಪುನರಾಗಮನವನ್ನು ಮಾಡಲಿದ್ದಾರೆ ಎಂದು ಜಿಂದಾಲ್ ಹೇಳಿದರು.

ಮಹಿಳಾ ಪ್ರೀಮಿಯರ್ ಲೀಗ್​ಗೆ ಇಂದು ಚಾಲನೆ: ಮೊದಲ ಪಂದ್ಯದಲ್ಲಿ ಮುಂಬೈ-ಡೆಲ್ಲಿ ಸೆಣೆಸಾಟ

ಇದರ ನಡುವೆ ಡೆಲ್ಲಿ ಅಭಿಮಾನಿಗಳಿಗೆ ಬೇಸರದ ಸಂಗತಿ ಎಂದರೆ ಡೆಲ್ಲಿ ಕ್ಯಾಪಿಟಲ್ಸ್‌ನ ತವರು ಮೈದಾನ ಬದಲಾಗಿದೆ, ಅವರ ಆರಂಭಿಕ ಪಂದ್ಯಗಳನ್ನು ದೆಹಲಿಯಲ್ಲಿ ಆಡುವ ಬದಲು ವಿಶಾಖಪಟ್ಟಣಂ ಮೈದಾನದಲ್ಲಿ ಆಯೋಜಿಸಲಾಗಿದೆ. ಕ್ರಿಕ್‌ಬಜ್ ಪ್ರಕಾರ, ಐಪಿಎಲ್‌ಗಿಂತ ಮೊದಲು ದೆಹಲಿಯಲ್ಲಿ ಮಹಿಳಾ ಪ್ರೀಮಿಯರ್ ಲೀಗ್ ಆಡುತ್ತಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಭಾಗವು ಈ ಬಾರಿ ದೆಹಲಿಯಲ್ಲಿ ನಡೆಯುತ್ತಿದ್ದು, ಅಲ್ಲಿಯವರೆಗೆ ಅರುಣ್ ಜೇಟ್ಲಿ ಸ್ಟೇಡಿಯಂ ಡಬ್ಲ್ಯುಪಿಎಲ್‌ನಲ್ಲಿ ನಿರತವಾಗಿರುತ್ತದೆ.

ಡಬ್ಲ್ಯುಪಿಎಲ್ ಮುಗಿದ ತಕ್ಷಣ ಇಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಸಾಧ್ಯವಾಗಲಿಲ್ಲ. ಏಕೆಂದರೆ ಇಷ್ಟು ಪಂದ್ಯಗಳ ನಂತರ ಕ್ರೀಡಾಂಗಣಕ್ಕೆ ಸ್ವಲ್ಪ ಸಮಯ ನೀಡಬೇಕು, ಇಲ್ಲದಿದ್ದರೆ ಪಿಚ್ ಮತ್ತು ಮೈದಾನವನ್ನು ನಿರೀಕ್ಷೆಗೆ ತಕ್ಕಂತೆ ನಿರ್ಮಿಸಲಾಗುವುದಿಲ್ಲ ಎಂದು ಐಪಿಎಲ್ ತಂಡಗಳಿಂದ ಕೂಡ ಹೇಳಲಾಗಿದೆ. ಈ ಕಾರಣಕ್ಕಾಗಿ, ವಿಶಾಖಪಟ್ಟಣವನ್ನು ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೋಮ್‌ಗ್ರೌಂಡ್ ಮಾಡಲಾಗಿದೆ. ಹೀಗಾಗಿ ಐಪಿಎಲ್‌ನ ಎರಡನೇ ಹಂತದಲ್ಲಿ ದೆಹಲಿಯ ಕ್ರೀಡಾಂಗಣ ಸಿದ್ಧವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ