AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿಗೆ ಕಾರಣವೇನು? ನಮಗೆ ವಿಶ್ರಾಂತಿಯ ಅಗತ್ಯವಿದೆ ಎಂದ ರಿಷಭ್ ಪಂತ್!

IPL 2026 LSG vs KKR: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ 20 ಓವರ್​ಗಳಲ್ಲಿ 155 ರನ್ ಬಾರಿಸಿ ಪಂದ್ಯ ಟೈ ಗೊಳಿಸಿದ್ದರು. ಇದಾದ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಕೆಕೆಆರ್ ತಂಡ ಜಯ ಸಾಧಿಸಿದೆ.

ಸೋಲಿಗೆ ಕಾರಣವೇನು? ನಮಗೆ ವಿಶ್ರಾಂತಿಯ ಅಗತ್ಯವಿದೆ ಎಂದ ರಿಷಭ್ ಪಂತ್!
Rishabh Pant
ಝಾಹಿರ್ ಯೂಸುಫ್
|

Updated on: Apr 27, 2026 | 9:30 AM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಲಿನ ಸರಮಾಲೆ ಮುಂದುವರೆದಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಎಲ್​ಎಸ್​ಜಿ ಪಡೆ ಸೂಪರ್ ಓವರ್​ನಲ್ಲಿ ಸೋಲೊಪ್ಪಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್​ಗಳಲ್ಲಿ 155 ರನ್​​ ಕಲೆಹಾಕಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಎಲ್​ಎಸ್​ಜಿ 20 ಓವರ್​ಗಳಲ್ಲಿ 155 ರನ್​ ಗಳಿಸಿ ಪಂದ್ಯವನ್ನು ಟೈ ಮಾಡಿ ಕೊಂಡಿದ್ದರು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೇವಲ 1 ರನ್​ಗಳಿಸಿದರೆ, ಈ ಗುರಿಯನ್ನು ಮೊದಲ ಎಸೆತದಲ್ಲೇ ಬೆನ್ನತ್ತಿ ಕೆಕೆಆರ್ ತಂಡ ಜಯ ಸಾಧಿಸಿತು.

ಈ ಸೋಲಿನ ಬಳಿಕ ಮಾತನಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್, ನಾವು ಸತತವಾಗಿ ಸೋಲುತ್ತಿದ್ದೇವೆ. ಹೀಗಾಗಿ ನಮಗೆ ವಿಶ್ರಾಂತಿಯ ಅಗತ್ಯವಿದೆ ಎಂದಿದ್ದಾರೆ. ಈ ಸೋಲುಗಳಿಗೆ ಒಬ್ಬರು ಅಥವಾ ಇಬ್ಬರು ವ್ಯಕ್ತಿಗಳು ಕಾರಣರಲ್ಲ.  ಇದರ ಹೊಣೆಗಾರಿಕೆಯನ್ನು ಇಡೀ ತಂಡ ಹೊರಬೇಕು.

ಸತತ ಸೋಲುಗಳಿಂದ ಉಂಟಾದ ಮಾನಸಿಕ ಒತ್ತಡವನ್ನು ಹೋಗಲಾಡಿಸಲು ತಂಡಕ್ಕೆ ಒಂದು “ವಿರಾಮ” ಬೇಕು. ವಿಶ್ರಾಂತಿ ಪಡೆದ ಬಳಿಕ ಸೋಲಿಗೆ ಕಾರಣಗಳೇನು ಎಂಬುದನ್ನು ವಿಮರ್ಶಿಸಬೇಕಿದೆ ಎಂದಿದ್ದಾರೆ.

ಇದೇ ವೇಳೆ ಫಾರ್ಮ್‌ನಲ್ಲಿಲ್ಲದ ನಿಕೋಲಸ್ ಪೂರನ್ ಅವರನ್ನು ಸೂಪರ್ ಓವರ್‌ಗೆ ಕಳುಹಿಸಿದ ನಿರ್ಧಾರದ ಬಗ್ಗೆ ಮಾತನಾಡಿದ ಪಂತ್, ಕಷ್ಟದ ಸಮಯದಲ್ಲಿ ಆಟಗಾರನನ್ನು ಬೆಂಬಲಿಸುವುದು ಮುಖ್ಯ. ಅಂಕಿ ಅಂಶಗಳಿಗಿಂತ ಆಟಗಾರನ ಸಾಮರ್ಥ್ಯದ ಮೇಲೆ ನಂಬಿಕೆ ಇಡುವ ಮುಖ್ಯವಾಗುತ್ತದೆ. ಹೀಗಾಗಿ ಇಂತಹದೊಂದು ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಇನ್ನು ಕೊನೆಯ ಓವರ್​ ಅನ್ನು ದಿಗ್ವೇಶ್ ರಾಠಿಗೆ ನೀಡಿದ ಬಗ್ಗೆ ಮಾತನಾಡಿದ ರಿಷಭ್ ಪಂತ್, ತುಂಬಾ ಯೋಚಿಸುವುದು ಮೈದಾನದಲ್ಲಿನ ಕೆಲಸಗಳನ್ನು ಸುಲಭಗೊಳಿಸುವುದಿಲ್ಲ. ಮೈದಾನದ ಒಳಗೆ ಹೊರಗಿನ ಸಲಹೆಗಳಿಗಿಂತ ತನ್ನ ಆಲೋಚನೆಗಳು ಕೂಡ ಮುಖ್ಯವಾಗುತ್ತದೆ. ಹೀಗಾಗಿ ಅಂತಿಮ ಓವರ್​ನಲ್ಲಿ ಯಶಸ್ಸು ಸಾಧಿಸಬಹುದು ಎಂದು ದಿಗ್ವೇಶ್​ಗೆ ಚೆಂಡು ನೀಡಿರುವುದಾಗಿ ತಿಳಿಸಿದ್ದಾರೆ.

ರಿಷಭ್ ಪಂತ್ ಅವರ ಪ್ರಸ್ತುತ ಹಾದಿಯು ಭಾವನಾತ್ಮಕವಾಗಿ ಮತ್ತು ನಾಯಕತ್ವದ ದೃಷ್ಟಿಯಿಂದ ಪ್ರಬಲವಾಗಿ ಕಂಡರೂ, ಐಪಿಎಲ್‌ನಂತಹ ವೇಗದ ಟೂರ್ನಿಯಲ್ಲಿ ಫಲಿತಾಂಶಗಳು ಶೀಘ್ರವಾಗಿ ಬಾರದಿದ್ದರೆ ಟೀಕೆಗಳು ಹೆಚ್ಚಾಗುವುದು ಸಹಜ. ಮುಂಬರುವ ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಈ ‘ವಿರಾಮ’ವನ್ನು ಹೇಗೆ ಬಳಸಿಕೊಳ್ಳುತ್ತದೆ ಎಂಬುದು ಪಂತ್ ಅವರ ಈ ತತ್ವಗಳ ಯಶಸ್ಸನ್ನು ನಿರ್ಧರಿಸಲಿದೆ.

ಇದನ್ನೂ ಓದಿ: ಚೆಂಡು ವಿಕೆಟ್​ಗೆ ತಾಗದಿದ್ದರೂ ಔಟ್ ನೀಡಿದ್ದೇಕೆ? ಇಲ್ಲಿದೆ ಐಪಿಎಲ್ ನಿಯಮ

ಅಲ್ಲದೆ ಈಗಾಗಲೇ 8 ಪಂದ್ಯಗಳಲ್ಲಿ 6 ಮ್ಯಾಚ್ ಸೋತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಮುಂದಿನ ಆರು ಪಂದ್ಯಗಳೂ ಕೂಡ ನಿರ್ಣಾಯಕ. ಈ ಮ್ಯಾಚ್​ಗಳಲ್ಲಿ ಕೆಲ ಪಂದ್ಯಗಳಲ್ಲಿ ಸೋತರೂ ಟೂರ್ನಿಯಿಂದ ಹೊರಬೀಳುವುದು ಖಚಿತ ಎಂದೇ ಹೇಳಬಹುದು.

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ