AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ನಮಗೆ ಇನ್ನೂ ಚಾನ್ಸ್ ಇದೆ… ಸೋತ ಬಳಿಕ ರಿಷಭ್ ಪಂತ್ ಅಚ್ಚರಿಯ ಹೇಳಿಕೆ

IPL 2025 PBKS vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 54ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 199 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಶ್ರೇಯಸ್ ಅಯ್ಯರ್ ಪಡೆ 37 ರನ್​ಗಳ ಜಯ ಸಾಧಿಸಿದೆ.

IPL 2025: ನಮಗೆ ಇನ್ನೂ ಚಾನ್ಸ್ ಇದೆ... ಸೋತ ಬಳಿಕ ರಿಷಭ್ ಪಂತ್ ಅಚ್ಚರಿಯ ಹೇಳಿಕೆ
Rishabh Pant
ಝಾಹಿರ್ ಯೂಸುಫ್
|

Updated on: May 05, 2025 | 8:30 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲನುಭವಿಸಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ (PBKS) ತಂಡವು 20 ಓವರ್​ಗಳಲ್ಲಿ 236 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 199 ರನ್​ ಬಾರಿಸಿ 37 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಸೋಲಿನ ಬಳಿಕ ಮಾತನಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್, ಪ್ಲೇಆಫ್​ಗೇರಲು ನಮಗೆ ಇನ್ನೂ ಉತ್ತಮ ಅವಕಾಶವಿದೆ ಎಂದಿದ್ದಾರೆ. ಏಕೆಂದರೆ ಮುಂದಿನ ಮೂರು ಪಂದ್ಯಗಳು ನಿರ್ಣಾಯಕ ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿ ಪ್ಲೇಆಫ್​ಗೇರುವ ವಿಶ್ವಾಸವಿದೆ ಎಂದು ಪಂತ್ ಹೇಳಿದ್ದಾರೆ.

ಇನ್ನು ಈ ಸೋಲನ್ನು ವಿಮರ್ಶಿಸಿದ ಪಂತ್, ನಾವು ಹೆಚ್ಚು ರನ್ ಬಿಟ್ಟು ಕೊಟ್ಟಿದ್ದು ದುಬಾರಿಯಾಯಿತು. ಅದರಲ್ಲೂ ಕೆಲ ನಿರ್ಣಾಯಕ ಕ್ಯಾಚ್​ಗಳನ್ನು ಕೈ ಬಿಟ್ಟೆವು. ಇವೆಲ್ಲವೂ ನೋವುಂಟು ಮಾಡುತ್ತದೆ. ಆದರೆ ಏನೂ ಮಾಡಕ್ಕಾಗಲ್ಲ. ಅವೆಲ್ಲವೂ ಪಂದ್ಯದ ಒಂದು ಭಾಗ.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಇದಾಗ್ಯೂ ನಮ್ಮ ಬೌಲರ್​ಗಳುಆರಂಭದಲ್ಲಿಯೇ ಲೆಂಗ್ತ್ ಅನ್ನು ಸರಿಯಾಗಿ ಆಯ್ಕೆ ಮಾಡಲಿಲ್ಲ. ಇದರಿಂದ ಆರಂಭದಲ್ಲೇ ಹೆಚ್ಚಿನ ರನ್​ಗಳ ಸೋರಿಕೆಯಾಯಿತು. ಆದರೆ ಮುಂದಿನ ಮೂರು ಪಂದ್ಯಗಳ ಮೂಲಕ ನಾವು ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ರಿಷಭ್ ಪಂತ್ ಹೇಳಿದ್ದಾರೆ.

ಕೊನೆಯ ಮೂರು ಲೀಗ್​ ಮ್ಯಾಚ್​ಗಳನ್ನು ನಾವು ನಾವು ಗೆದ್ದರೆ, ಖಂಡಿತವಾಗಿಯೂ ಪ್ಲೇಆಫ್​ಗೇರಬಹುದು. ನಮ್ಮ ಅಗ್ರ ಕ್ರಮಾಂಕದ ಬ್ಯಾಟರ್​ಗಳಿಂದ ಉತ್ತಮ ಪ್ರದರ್ಶನವನ್ನು ಮೂಡಿಬಂದರೆ ನ ಅದು ಅರ್ಥಪೂರ್ಣವಾಗಿರುತ್ತದೆ. ಹೀಗಾಗಿ ಮುಂದಿನ ಮೂರು ಮ್ಯಾಚ್​ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವು ದಾಖಲಿಸಿ ಪ್ಲೇಆಫ್​ಗೆ ಪ್ರವೇಶಿಸುವ ವಿಶ್ವಾಸವಿದೆ ಎಂದು ರಿಷಭ್ ಪಂತ್ ಹೇಳಿದ್ದಾರೆ.

ಸದ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡವು 11 ಪಂದ್ಯಗಳನ್ನಾಡಿದ್ದು. ಈ ವೇಳೆ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, 6 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಇದೀಗ ಎಲ್​​ಎಸ್​ಜಿ ಪಡೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದೆ. ಅಂದರೆ ಇನ್ನುಳಿದ 3 ಮ್ಯಾಚ್​ಗಳಲ್ಲಿ ಎಲ್​ಎಸ್​ಜಿ ತಂಡ ಗೆದ್ದರೂ 16 ಅಂಕಗಳನ್ನು ಮಾತ್ರ ಪಡೆಯಲಿದೆ. ಈ ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡುವ ನಿರೀಕ್ಷೆಯಲ್ಲಿದ್ದಾರೆ ರಿಷಭ್ ಪಂತ್.

ಇದನ್ನೂ ಓದಿ: PSL ಗೆ ಕೈಕೊಟ್ಟು IPL ಗೆ ಎಂಟ್ರಿ ಕೊಟ್ಟ ಸ್ಫೋಟಕ ದಾಂಡಿಗ

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಗಳನ್ನಾಡಬೇಕಿದೆ. ಈ ಮ್ಯಾಚ್​ಗಳಲ್ಲಿ ಜಯ ಸಾಧಿಸುವ ಮೂಲಕ ಎಲ್​ಎಸ್​ಜಿ ತಂಡ ಪ್ಲೇಆಫ್​​ಗೆ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು