AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ತನ್ನದೇ ತಂಡದ ಆಟಗಾರನಿಗೆ ಕಪಾಳಮೋಕ್ಷ ಮಾಡಲು ಮುಂದಾದ ರಿಷಭ್ ಪಂತ್

LSG vs DC, IPL 2025: ಲಕ್ನೋ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಬ್ಯಾಟಿಂಗ್ ಇನ್ನಿಂಗ್ಸ್ನ 7 ನೇ ಓವರ್‌ನ ಕೊನೆಯ ದಿಗ್ವೇಶ್ ರಥಿ ಅವರ ಎಸೆತದಲ್ಲಿ ಲಕ್ನೋ ತಂಡವು ಕೆಎಲ್ ರಾಹುಲ್ ಅವರನ್ನು ಎಲ್ಬಿಡಬ್ಲ್ಯೂ ಔಟ್ ಮಾಡಲು ಮನವಿ ಮಾಡಲಾಯಿತು. ಆದರೆ ಅಂಪೈರ್ ರಾಹುಲ್ ನಾಟ್ ಔಟ್ ಎಂದು ಘೋಷಿಸಿದರು. ಈ ಸಂದರ್ಭ ದೊಡ್ಡ ಹೈ ಡ್ರಾಮವೇ ನಡೆದು ಹೋಯಿತು.

Rishabh Pant: ತನ್ನದೇ ತಂಡದ ಆಟಗಾರನಿಗೆ ಕಪಾಳಮೋಕ್ಷ ಮಾಡಲು ಮುಂದಾದ ರಿಷಭ್ ಪಂತ್
Rishabh Pant And Digvesh Rathi
Follow us
Vinay Bhat
|

Updated on: Apr 23, 2025 | 9:41 AM

ಬೆಂಗಳೂರು (ಏ. 23): ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ (Indian Premier League 2025) ರಿಷಭ್ ಪಂತ್ ಅಂದುಕೊಂಡಂತೆ ಯಾವುದೂ ಸರಿಯಾಗಿ ನಡೆಯುತ್ತಿಲ್ಲ. ಪಂತ್ ಅವರ ಬ್ಯಾಟಿಂಗ್ ಆಗಲಿ ಅಥವಾ ನಾಯಕತ್ವವಾಗಲಿ ಈ ಋತುವಿನಲ್ಲಿ ತೀರ ಕಳಪೆಯಾಗಿದೆ. ಇದರಿಂದಾಗಿ ಪಂತ್ ಪ್ರತಿ ಪಂದ್ಯದಲ್ಲಿ ಸುದ್ದಿಯಲ್ಲಿದ್ದಾರೆ. ಇದೀಗ ಐಪಿಎಲ್​ನಲ್ಲಿ ನಿನ್ನೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂತ್ ತಮ್ಮದೇ ತಂಡದ ಆಟಗಾರನ ಮೇಲೆ ಕೋಪಗೊಂಡ ಘಟನೆ ನಡೆದಿದೆ. ಅಚ್ಚರಿ ಎಂದರೆ ಪಂತ್ ಆ ಆಟಗಾರನಿಗೆ ಕಪಾಳಮೋಕ್ಷ ಮಾಡಲು ಮುಂದಾದರು.

ರಿಷಭ್ ಪಂತ್‌ಗೆ ಕಪಾಳಮೋಕ್ಷ ಮಾಡಲು ಮುಂದಾದರು:

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 159 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಡಿಸಿ ಉತ್ತಮ ಆರಂಭವನ್ನು ಪಡೆಯಿತು. ಆದರೆ ಪವರ್‌ಪ್ಲೇನಲ್ಲಿ ಕರುಣ್ ನಾಯರ್ ಅವರ ವಿಕೆಟ್ ಕಳೆದುಕೊಂಡಿತು. ಈ ವಿಕೆಟ್ ಲಕ್ನೋ ತಂಡದ ಗೆಲುವಿನ ಆಸೆ ಚಿಗುರಿಸಿತು. ನಂತರ, 7 ನೇ ಓವರ್‌ನ ಕೊನೆಯ ದಿಗ್ವೇಶ್ ರಥಿ ಅವರ ಎಸೆತದಲ್ಲಿ ಲಕ್ನೋ ತಂಡವು ಕೆಎಲ್ ರಾಹುಲ್ ಅವರನ್ನು ಎಲ್ಬಿಡಬ್ಲ್ಯೂ ಔಟ್ ಮಾಡಲು ಮನವಿ ಮಾಡಲಾಯಿತು. ಆದರೆ ಅಂಪೈರ್ ರಾಹುಲ್ ನಾಟ್ ಔಟ್ ಎಂದು ಘೋಷಿಸಿದರು.

ಮೊದಲಿಗೆ ಚೆಂಡು ವಿಕೆಟ್ ಹೊರಗೆ ಬಡಿಯುತ್ತಿರುವಂತೆ ಕಂಡುಬಂತು. ಹೀಗಾಗಿ ರಿಷಭ್ ಪಂತ್ ಕೂಡ ಡಿಆರ್​ಎಸ್ ತೆಗೆದುಕೊಳ್ಳುವಲ್ಲಿ ಆಸಕ್ತಿ ತೋರಿಸುತ್ತಿರಲಿಲ್ಲ. ಆದರೆ ದಿಗ್ವೇಶ್ ರಿವ್ಯೂ ತೆಗೆದುಕೊಳ್ಳಲು ಮುಂದಾದರು. ಅವರು ಪಂತ್ ಅವರನ್ನು ವಿಮರ್ಶೆ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಹೀಗಾಗಿ ಪಂತ್ ಬೇರೆ ದಾರಿಯಿಲ್ಲದೆ ಡಿಆರ್​ಎಸ್ ತೆಗೆದುಕೊಂಡರು. ಆದರೆ, ರಿವ್ಯೂ ನಲ್ಲಿ ಚೆಂಡು ವಿಕೆಟ್ ಹೊರಗೆ ಬಿದ್ದಿದೆ ಎಂದು ತೋರಿಸಲಾಯಿತು. ಈ ಮೂಲಕ ಲಕ್ನೋ ರಿವ್ಯೂ ಕಳೆದುಕೊಂಡಿತು. ಇದರಿಂದ ಕೋಪಗೊಂಡ ಪಂತ್ ಅವರು ದಿಗ್ವೇಶ್ ಅವರನ್ನು ಗದರಿಸಿ ಕೆನ್ನೆಗೆ ಹೊಡೆಯಲು ಪ್ರಯತ್ನಿಸಿದರು. ಇದರ ಫೋಟೋ-ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
Image
VIDEO: ನಾನೇ ಕೆಎಲ್ ರಾಹುಲ್... LSGಗೆ ಕನ್ನಡಿಗನ ತಿರುಗೇಟು
Image
Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್
Image
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್

Kl Rahul: ದಾಖಲೆಗಳು ಧೂಳೀಪಟ… ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್

ಪಂತ್ ಬ್ಯಾಟ್ ಕೂಡ ಸದ್ದು ಮಾಡಲಿಲ್ಲ:

ಇದಕ್ಕೂ ಮೊದಲು ಲಕ್ನೋ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ ರಿಷಭ್ ಪಂತ್ ಬ್ಯಾಟಿಂಗ್ ನಲ್ಲಿ ಕೂಡ ಸಂಪೂರ್ಣವಾಗಿ ವಿಫಲರಾದರು. ಕೊನೆಯ ಓವರ್‌ನಲ್ಲಿ ಬ್ಯಾಟಿಂಗ್ ಮಾಡಲು ಬಂದ ಪಂತ್ ಕೇವಲ 2 ಎಸೆತಗಳನ್ನು ಆಡಿ ಖಾತೆ ತೆರೆಯದೆಯೇ ಔಟಾದರು. ಇದಾದ ನಂತರ, ಪಂತ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ತೀವ್ರವಾಗಿ ಟ್ರೋಲ್ ಮಾಡಲಾಗುತ್ತಿದೆ.

ಲಕ್ನೋ ತಂಡ 160 ರನ್‌ಗಳ ಗುರಿ ನೀಡಿತು:

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಮಾತ್ರ ಗಳಿಸಿತು. ಐಡೆನ್ ಮಾರ್ಕ್ರಾಮ್ ಮತ್ತು ಮಿಚೆಲ್ ಮಾರ್ಷ್ ಮೊದಲ ವಿಕೆಟ್‌ಗೆ 10 ಓವರ್‌ಗಳಲ್ಲಿ 87 ರನ್‌ಗಳನ್ನು ಸೇರಿಸಿದರು. ಈ ಜೊತೆಯಾಟದ ನಂತರ, ಲಕ್ನೋದ ಮಧ್ಯಮ ಕ್ರಮಾಂಕವು ಹೇಳಿಕೊಳ್ಳುವಂತಹ ಸ್ಕೋರ್ ಕಲೆಹಾಕಲು ಸಾಧ್ಯವಾಗಲಿಲ್ಲ. ಕೊನೆಯಲ್ಲಿ, ಆಯುಷ್ ಬಡೋನಿ 21 ಎಸೆತಗಳಲ್ಲಿ 36 ರನ್ ಗಳಿಸಿ ತಂಡವನ್ನು 159 ರನ್‌ಗಳ ಸ್ಕೋರ್‌ಗೆ ಕೊಂಡೊಯ್ದರು. ಡೆಲ್ಲಿ ಈ ಟಾರ್ಗೆಟ್ ಅನ್ನು 17.5 ಓವರ್​ಗಳಲ್ಲೇ ಮುಟ್ಟಿ 8 ವಿಕೆಟ್​ಗಳ ಅಮೋಘ ಗೆಲುವು ಕಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್