AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs DC: ಸೋತ ಬಳಿಕ, ತಲೆಬುಡವಿಲ್ಲದ ಉತ್ತರ ನೀಡಿದ ರಿಷಭ್ ಪಂತ್

IPL 2025 LSG vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 40ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 159 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್​ಗಳಲ್ಲಿ ಗುರಿ ತಲುಪಿ 8 ವಿಕೆಟ್​ಗಳ ಜಯ ಸಾಧಿಸಿದೆ.

LSG vs DC: ಸೋತ ಬಳಿಕ, ತಲೆಬುಡವಿಲ್ಲದ ಉತ್ತರ ನೀಡಿದ ರಿಷಭ್ ಪಂತ್
Rishabh Pant
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 23, 2025 | 10:23 AM

IPL 2025: ಐಪಿಎಲ್ 2025ರ 40ನೇ ಪಂದ್ಯದಲ್ಲಿ  ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಜಯ ಸಾಧಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 1596 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್​ಗಳಲ್ಲಿ 161 ರನ್​ ಬಾರಿಸಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಈ ಹೀನಾಯ ಸೋಲಿನ ಬಳಿಕ ಮಾತನಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್, ಪಂದ್ಯವು ಹೀಗೆ ನಡೆಯುತ್ತದೆ, ಹೀಗೆ ಆಗುತ್ತದೆ ಎಂದು ಯಾರನ್ನೂ ದೂರನ್ನು ಸಾಧ್ಯವಿಲ್ಲ. ಏಕೆಂದರೆ ಎರಡನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಸುಲಭವಾಗುತ್ತದೆ. ಹೀಗಾಗಿ ನಾವು ಸೋಲನುಭವಿಸಿದ್ದೇವೆ ಎಂದರು.

ಲಕ್ನೋ ಪಂದ್ಯಗಳಲ್ಲಿ ಟಾಸ್ ದೊಡ್ಡ ಪಾತ್ರ ವಹಿಸುತ್ತಿದೆ. ಹೀಗಾಗಿ ಸೋಲಿಗೆ ನಾನು  ನೆಪಗಳನ್ನು ಹುಡುಕುತ್ತಿಲ್ಲ. ಇದಾಗ್ಯೂ ನಾವು ಈ ಪಂದ್ಯದಲ್ಲಿ 20 ರನ್​ಗಳನ್ನು ಕಡಿಮೆ ಕಲೆಹಾಕಿದ್ದೆವು. ಇದು ಸಹ ಒಂದು ಕಾರಣ ಎಂದು ರಿಷಭ್ ಪಂತ್ ಹೇಳಿದ್ದಾರೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಇನ್ನು ನೀವೇಕೆ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಪಂತ್, ನಾವು ಸಂದರ್ಭಗಳ ಲಾಭವನ್ನು ಪಡೆಯಲು ಬಯಸಿದ್ದೆವು. ಅದಕ್ಕಾಗಿ ನಾನು ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು.

ಈ ಪಿಚ್​ನ ಸಂಪೂರ್ಣ ಲಾಭ ಪಡೆಯಲು ನಾವು ಅಬ್ದುಲ್ ಸಮದ್ ಅವರನ್ನು ಮೇಲಿನ ಕ್ರಮಾಂಕದಲ್ಲಿ ಕಳಿಸಿದೆವು. ಆ ಬಳಿಕ ಡೇವಿಡ್ ಮಿಲ್ಲರ್​ಗೆ ಅವಕಾಶ ನೀಡಿದೆವು. ಆದರೆ ಅವರಿಂದ ನಿರೀಕ್ಷಿತ ಬ್ಯಾಟಿಂಗ್ ಮೂಡಿ ಬಂದಿರಲಿಲ್ಲ ಎಂದು ರಿಷಭ್ ಪಂತ್ ಹೇಳಿದ್ದಾರೆ.

ಇಲ್ಲಿ ರಿಷಭ್ ಪಂತ್ ತನ್ನ ಸಾಮರ್ಥ್ಯವನ್ನು ಕೆಳದರ್ಜೆಗೆ ಇಳಿಸಿದ್ರಾ? ಅಥವಾ ಅವರಿಗಿಂತ ತಾನು ಕೆಳಮಟ್ಟದ ಬ್ಯಾಟರ್ ಎಂಬುದನ್ನು ಸಾರಿದ್ರಾ ಎಂಬುದೇ ಪ್ರಶ್ನೆ. ಏಕೆಂದರೆ ಇದಕ್ಕೂ ಮುನ್ನ ರಿಷಭ್ ಪಂತ್ ಗುಜರಾತ್ ಟೈಟಾನ್ಸ್ ವಿರುದ್ಧ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಇದೀಗ 7ನೇ ಕ್ರಮಾಂಕದಲ್ಲೇಗೆ ಬ್ಯಾಟ್ ಬೀಸಿದ್ದೀರಿ ಎಂಬ ಪ್ರಶ್ನೆಗೆ ವಿಚಿತ್ರ ಉತ್ತರ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡದ ಅಬ್ದುಲ್ ಸಮದ್, ಆಯುಷ್ ಬದೋನಿಯನ್ನು ಮೇಲಿನ ಕ್ರಮಾಂಕದಲ್ಲಿ ಆಡಿಸಲಾಗಿತ್ತು. ಅಲ್ಲದೆ ಡೇವಿಡ್ ಮಿಲ್ಲರ್ ಬಳಿಕ ಪಂತ್ ಬ್ಯಾಟಿಂಗ್​ಗೆ ಆಗಮಿಸಿದ್ದರು. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಪರ ರಿಷಭ್ ಪಂತ್ ಕೊನೆಯ ಬ್ಯಾಟರ್ ಆಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಪ್ರಮುಖ ಆಟಗಾರನಾಗಿರುವ ರಿಷಭ್ ಪಂತ್ ಬ್ಯಾಟರ್​ಗಳ ಪಟ್ಟಿಯಲ್ಲಿ ಅಂತಿಮ ಕ್ರಮಾಂಕದಲ್ಲಿ ಕಣಕ್ಕಿಳಿದಿರುವುದೇ ಈಗ ಅಚ್ಚರಿ. ಇದನ್ನೇ ಪ್ರಶ್ನಿಸಿದಾಗ ಪಂತ್, ಅವೆಲ್ಲವೂ ನಮ್ಮ ಯೋಜನೆ ಎನ್ನುವ ಮೂಲಕ ಮತ್ತಷ್ಟು ಅಚ್ಚರಿ ಮೂಡಿಸಿದ್ದಾರೆ.

‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ