AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಅಪಘಾತದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ರಿಷಭ್ ಪಂತ್

Rishabh Pant: ಮೊಣಕಾಲಿನ ಸರ್ಜರಿ ಮುಗಿಸಿರುವ ರಿಷಭ್ ಪಂತ್ ಮತ್ತೊಂದು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಹೀಗಾಗಿ ಅವರು ಕನಿಷ್ಠ 6-7 ತಿಂಗಳ ಕಾಲ ಮೈದಾನಕ್ಕೆ ಇಳಿಯಲು ಸಾಧ್ಯವಾಗುವುದಿಲ್ಲ

Rishabh Pant: ಅಪಘಾತದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ರಿಷಭ್ ಪಂತ್
Rishabh Pant
TV9 Web
| Edited By: |

Updated on:Jan 16, 2023 | 9:18 PM

Share

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ (Rishabh Pant) ಕಳೆದ ವರ್ಷ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಡಿಸೆಂಬರ್ 30 ರಂದು ದೆಹಲಿಯಿಂದ ಉತ್ತರ ಖಂಡದ ಹರಿದ್ವಾರದಲ್ಲಿರುವ ರೂರ್ಕಿಯಲ್ಲಿರುವ ತನ್ನ ಮನೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿತ್ತು. ಬಳಿಕ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ (Max Hospital) ಸೇರಿಸಲಾಗಿತ್ತು. ಕೆಲ ದಿನಗಳ ಚಿಕಿತ್ಸೆಯ ಬಳಿಕ ಪಂತ್ ಅವರನ್ನು ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಗಾಯದಿಂದ ತುಸು ಚೇತರಿಸಿಕೊಂಡಿರುವ ರಿಷಭ್ ಪಂತ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಂತ್, ನಿಮ್ಮೆಲ್ಲರ ಹಾರೈಕೆಗೆ ನಾನು ಆಭಾರಿಯಾಗಿದ್ದೇನೆ. ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಚೇತರಿಕೆಯ ಹಾದಿಯಲ್ಲಿದ್ದೇನೆ. ನನಗೆ ಬೆಂಬಲ ಸೂಚಿಸಿದ ಅಭಿಮಾನಿಗಳಿಗೆ, ಸರ್ಕಾರಿ ಅಧಿಕಾರಿಗಳಿಗೆ, ವೈದ್ಯರಿಗೆ, ಬಿಸಿಸಿಐಗೆ, ಜಯ್ ಶಾ ಅವರಿಗೆ..ಎಲ್ಲರಿಗೂ ನಾನು ಹೃದಯಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ. ಅಲ್ಲದೆ ಶೀಘ್ರದಲ್ಲೇ  ನಿಮ್ಮೆಲ್ಲರನ್ನೂ ಮೈದಾನದಲ್ಲಿ ಭೇಟಿಯಾಗುವುದನ್ನು ಎದುರು ನೋಡುತ್ತಿದ್ದೇನೆ ಎಂದು ರಿಷಭ್ ಪಂತ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
IPL 2023: ಐಪಿಎಲ್​ನಿಂದ ಹೊರಬಿದ್ದ ರಿಷಭ್ ಪಂತ್​ಗೆ ಸಿಗಲಿದೆ 21 ಕೋಟಿ ರೂ.
Image
Suryakumar Yadav: ರಾಹುಲ್ ದಾಖಲೆ ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸೂರ್ಯ
Image
Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Image
Virat Kohli – Rohit Sharma: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ-ರೋಹಿತ್​ಗಿಲ್ಲ ಚಾನ್ಸ್​?

ಸದ್ಯ ಮೊಣಕಾಲಿನ ಸರ್ಜರಿ ಮುಗಿಸಿರುವ ರಿಷಭ್ ಪಂತ್ ಮತ್ತೊಂದು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಹೀಗಾಗಿ ಅವರು ಕನಿಷ್ಠ 6-7 ತಿಂಗಳ ಕಾಲ ಮೈದಾನಕ್ಕೆ ಇಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಇದರಿಂದ ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ರಿಷಭ್ ಪಂತ್ ತಪ್ಪಿಸಿಕೊಳ್ಳಲಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಪಂತ್ ಕಾಣಿಸಿಕೊಳ್ಳುವುದಿಲ್ಲ ಎಂಬುದನ್ನು ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖಚಿತಪಡಿಸಿದೆ. ಹಾಗಾಗಿ 2023ರ ಪ್ರಮುಖ ಟೂರ್ನಿ ಹಾಗೂ ಸರಣಿಗಳನ್ನು ರಿಷಭ್ ಪಂತ್ ತಪ್ಪಿಸಿಕೊಳ್ಳಲಿದ್ದಾರೆ.

Published On - 9:02 pm, Mon, 16 January 23

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ