AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಅಪಘಾತದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ರಿಷಭ್ ಪಂತ್

Rishabh Pant: ಮೊಣಕಾಲಿನ ಸರ್ಜರಿ ಮುಗಿಸಿರುವ ರಿಷಭ್ ಪಂತ್ ಮತ್ತೊಂದು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಹೀಗಾಗಿ ಅವರು ಕನಿಷ್ಠ 6-7 ತಿಂಗಳ ಕಾಲ ಮೈದಾನಕ್ಕೆ ಇಳಿಯಲು ಸಾಧ್ಯವಾಗುವುದಿಲ್ಲ

Rishabh Pant: ಅಪಘಾತದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ರಿಷಭ್ ಪಂತ್
Rishabh Pant
TV9 Web
| Edited By: |

Updated on:Jan 16, 2023 | 9:18 PM

Share

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ (Rishabh Pant) ಕಳೆದ ವರ್ಷ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಡಿಸೆಂಬರ್ 30 ರಂದು ದೆಹಲಿಯಿಂದ ಉತ್ತರ ಖಂಡದ ಹರಿದ್ವಾರದಲ್ಲಿರುವ ರೂರ್ಕಿಯಲ್ಲಿರುವ ತನ್ನ ಮನೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿತ್ತು. ಬಳಿಕ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ (Max Hospital) ಸೇರಿಸಲಾಗಿತ್ತು. ಕೆಲ ದಿನಗಳ ಚಿಕಿತ್ಸೆಯ ಬಳಿಕ ಪಂತ್ ಅವರನ್ನು ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಗಾಯದಿಂದ ತುಸು ಚೇತರಿಸಿಕೊಂಡಿರುವ ರಿಷಭ್ ಪಂತ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಂತ್, ನಿಮ್ಮೆಲ್ಲರ ಹಾರೈಕೆಗೆ ನಾನು ಆಭಾರಿಯಾಗಿದ್ದೇನೆ. ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಚೇತರಿಕೆಯ ಹಾದಿಯಲ್ಲಿದ್ದೇನೆ. ನನಗೆ ಬೆಂಬಲ ಸೂಚಿಸಿದ ಅಭಿಮಾನಿಗಳಿಗೆ, ಸರ್ಕಾರಿ ಅಧಿಕಾರಿಗಳಿಗೆ, ವೈದ್ಯರಿಗೆ, ಬಿಸಿಸಿಐಗೆ, ಜಯ್ ಶಾ ಅವರಿಗೆ..ಎಲ್ಲರಿಗೂ ನಾನು ಹೃದಯಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ. ಅಲ್ಲದೆ ಶೀಘ್ರದಲ್ಲೇ  ನಿಮ್ಮೆಲ್ಲರನ್ನೂ ಮೈದಾನದಲ್ಲಿ ಭೇಟಿಯಾಗುವುದನ್ನು ಎದುರು ನೋಡುತ್ತಿದ್ದೇನೆ ಎಂದು ರಿಷಭ್ ಪಂತ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
IPL 2023: ಐಪಿಎಲ್​ನಿಂದ ಹೊರಬಿದ್ದ ರಿಷಭ್ ಪಂತ್​ಗೆ ಸಿಗಲಿದೆ 21 ಕೋಟಿ ರೂ.
Image
Suryakumar Yadav: ರಾಹುಲ್ ದಾಖಲೆ ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸೂರ್ಯ
Image
Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Image
Virat Kohli – Rohit Sharma: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ-ರೋಹಿತ್​ಗಿಲ್ಲ ಚಾನ್ಸ್​?

ಸದ್ಯ ಮೊಣಕಾಲಿನ ಸರ್ಜರಿ ಮುಗಿಸಿರುವ ರಿಷಭ್ ಪಂತ್ ಮತ್ತೊಂದು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಹೀಗಾಗಿ ಅವರು ಕನಿಷ್ಠ 6-7 ತಿಂಗಳ ಕಾಲ ಮೈದಾನಕ್ಕೆ ಇಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಇದರಿಂದ ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ರಿಷಭ್ ಪಂತ್ ತಪ್ಪಿಸಿಕೊಳ್ಳಲಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಪಂತ್ ಕಾಣಿಸಿಕೊಳ್ಳುವುದಿಲ್ಲ ಎಂಬುದನ್ನು ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖಚಿತಪಡಿಸಿದೆ. ಹಾಗಾಗಿ 2023ರ ಪ್ರಮುಖ ಟೂರ್ನಿ ಹಾಗೂ ಸರಣಿಗಳನ್ನು ರಿಷಭ್ ಪಂತ್ ತಪ್ಪಿಸಿಕೊಳ್ಳಲಿದ್ದಾರೆ.

Published On - 9:02 pm, Mon, 16 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ