AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಟೀಮ್ ಇಂಡಿಯಾ ಜೊತೆ ಕಾಣಿಸಿಕೊಂಡ ರಿಷಭ್ ಪಂತ್

Rishabh Pant: ಕಳೆದ ವರ್ಷ ಡಿಸೆಂಬರ್​ನಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಫಿಟ್​ನೆಸ್ ಮರಳಿ ಪಡೆಯುವ ಹಾದಿಯಲ್ಲಿದ್ದಾರೆ. ಐಪಿಎಲ್ ಆರಂಭದ ವೇಳೆ ಅವರು ಸಂಪೂರ್ಣ ಫಿಟ್ ಆಗಿರಲಿದ್ದು, ಈ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲಿದ್ದಾರೆ.

Rishabh Pant: ಟೀಮ್ ಇಂಡಿಯಾ ಜೊತೆ ಕಾಣಿಸಿಕೊಂಡ ರಿಷಭ್ ಪಂತ್
Rishabh Pant With Team India
TV9 Web
| Edited By: |

Updated on: Jan 17, 2024 | 7:56 AM

Share

ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಟೀಮ್ ಇಂಡಿಯಾ (Team India) ಜೊತೆ ಕಾಣಿಸಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ಮೈದಾನದಿಂದ ಹೊರಗುಳಿದಿರುವ ಪಂತ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ತಂಡದೊಂದಿಗೆ ಅಭ್ಯಾಸ ನಡೆಸಿದರು. ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಮಂಗಳವಾರ ಟೀಮ್ ಇಂಡಿಯಾ ಅಭ್ಯಾಸ ನಡೆಸಿತು.

ಈ ವೇಳೆ ಮೈದಾನಕ್ಕೆ ಆಗಮಿಸಿದ ಪಂತ್ ಸಹ ಆಟಗಾರರೊಂದಿಗೆ ಕುಶಲೋಪರಿ ನಡೆಸಿದರು. ಅಷ್ಟೇ ಅಲ್ಲದೆ ಕೆಲ ಕಾಲ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಇದೀಗ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಂಡಿರುವ ರಿಷಭ್ ಪಂತ್ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಿಷಭ್ ಪಂತ್ ಕಂಬ್ಯಾಕ್ ಯಾವಾಗ?

ಕಳೆದ ವರ್ಷ ಡಿಸೆಂಬರ್​ನಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಫಿಟ್​ನೆಸ್ ಮರಳಿ ಪಡೆಯುವ ಹಾದಿಯಲ್ಲಿದ್ದಾರೆ. ಐಪಿಎಲ್ ಆರಂಭದ ವೇಳೆ ಅವರು ಸಂಪೂರ್ಣ ಫಿಟ್ ಆಗಿರಲಿದ್ದು, ಈ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲಿದ್ದಾರೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

ಇದನ್ನೂ ಓದಿ: Rohit Sharma: ಭಾರತ ತಂಡ ಗೆದ್ದರೆ ರೋಹಿತ್ ಶರ್ಮಾ ಹೆಸರಿಗೆ ಹೊಸ ದಾಖಲೆ

ಭಾರತ ಮತ್ತು ಅಫ್ಘಾನ್ ಪಂದ್ಯ:

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರನೇ ಟಿ20 ಪಂದ್ಯ ಇಂದು (ಜ.17) ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ. ಇದಕ್ಕೂ ಮುನ್ನ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಇಂದೋರ್​ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ 6 ವಿಕೆಟ್​ಗಳ ಗೆಲುವು ದಾಖಲಿಸಿತು. ಇದೀಗ ಸರಣಿಯ ಕೊನೆಯ ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದೆ.

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ