Sign In

By signing in or creating an account, you agree with Associated Broadcasting Company's Terms & Conditions and Privacy Policy.

Riyan Parag: ಸತತ ಎರಡು ಸೋಲಿನ ಬಳಿಕ ರಿಯಾನ್ ಪರಾಗ್ ಪೋಸ್ಟ್ ಮ್ಯಾಚ್ ವೇಳೆ ಏನು ಹೇಳಿದ್ರು ನೋಡಿ

RR vs KKR, IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ತನ್ನ ಎರಡನೇ ಪಂದ್ಯದಲ್ಲಿ ರಾಜಸ್ಥಾನ್ 8 ವಿಕೆಟ್‌ಗಳ ಸೋಲು ಅನುಭವಿಸಿತು. ತಂಡದ ಖಾಯಂ ನಾಯಕ ಸಂಜು ಸ್ಯಾಮ್ಸನ್ ಸಂಪೂರ್ಣವಾಗಿ ಫಿಟ್ ಆಗಿಲ್ಲದ ಕಾರಣ ಅವರ ಸ್ಥಾನದಲ್ಲಿ, ರಿಯಾನ್ ಪರಾಗ್ ಎರಡೂ ಪಂದ್ಯಗಳಲ್ಲಿ ನಾಯಕತ್ವ ವಹಿಸಿಕೊಂಡರು.

Riyan Parag: ಸತತ ಎರಡು ಸೋಲಿನ ಬಳಿಕ ರಿಯಾನ್ ಪರಾಗ್ ಪೋಸ್ಟ್ ಮ್ಯಾಚ್ ವೇಳೆ ಏನು ಹೇಳಿದ್ರು ನೋಡಿ
Riyan Parag
Follow us
Vinay Bhat
|

Updated on:Mar 27, 2025 | 4:50 PM

ಬೆಂಗಳೂರು (ಮಾ. 25): ರಾಜಸ್ಥಾನ ರಾಯಲ್ಸ್ (Rajasthan Royals) ತಂಡವು 2025 ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತನ್ನ ಮೊದಲ ಎರಡೂ ಪಂದ್ಯಗಳನ್ನು ಸೋಲುವ ಮೂಲಕ ಕೆಟ್ಟ ಆರಂಭ ಪಡೆದುಕೊಂಡಿದೆ. 2019 ರ ನಂತರ ತಂಡವು ತನ್ನ ಮೊದಲ ಎರಡು ಪಂದ್ಯಗಳನ್ನು ಗೆಲ್ಲಲು ವಿಫಲವಾಗಿರುವುದು ಇದೇ ಮೊದಲು. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ತನ್ನ ಎರಡನೇ ಪಂದ್ಯದಲ್ಲಿ ರಾಜಸ್ಥಾನ್ 8 ವಿಕೆಟ್‌ಗಳ ಸೋಲು ಅನುಭವಿಸಿತು. ತಂಡದ ಖಾಯಂ ನಾಯಕ ಸಂಜು ಸ್ಯಾಮ್ಸನ್ ಸಂಪೂರ್ಣವಾಗಿ ಫಿಟ್ ಆಗಿಲ್ಲದ ಕಾರಣ ಅವರ ಸ್ಥಾನದಲ್ಲಿ, ರಿಯಾನ್ ಪರಾಗ್ ಎರಡೂ ಪಂದ್ಯಗಳಲ್ಲಿ ನಾಯಕತ್ವ ವಹಿಸಿಕೊಂಡರು.

ಸೋಲಿನ ನಂತರ ನಾಯಕ ರಿಯಾನ್ ಪರಾಗ್ ಹೇಳಿದ್ದೇನು?:

ರಾಜಸ್ಥಾನ್ ರಾಯಲ್ಸ್ ತಂಡದ ಹಂಗಾಮಿ ನಾಯಕ ರಿಯಾನ್ ಪರಾಗ್ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿ, ತಮ್ಮ ತಂಡವು ಕೆಕೆಆರ್ ವಿರುದ್ಧ 20 ರನ್ ಕಡಿಮೆ ಗಳಿಸಿದೆ ಎಂದು ಹೇಳಿದ್ದಾರೆ. ‘‘170 ರನ್‌ಗಳು ನಿಜವಾಗಿಯೂ ಉತ್ತಮ ಸ್ಕೋರ್ ಆಗಿದೆ, ಇದು ನಮ್ಮ ಟಾರ್ಗೆಟ್ ಆಗಿತ್ತು. ವಿಕೆಟ್ ಬಗ್ಗೆ ತಿಳಿದುಕೊಂಡು ನಾನು ವೈಯಕ್ತಿಕವಾಗಿ ಸ್ವಲ್ಪ ಆತುರಪಟ್ಟೆ. 20 ರನ್‌ಗಳಷ್ಟು ಶಾರ್ಟ್ ಆಯಿತು. ಡಿಕಾಕ್ ಅವರನ್ನು ಬೇಗನೆ ಔಟ್ ಮಾಡುವುದು ನಮ್ಮ ಯೋಜನೆಯಾಗಿತ್ತು, ಆದರೆ ಅದು ಆಗಲಿಲ್ಲ. ಅವರು ನಿಜವಾಗಿಯೂ ಚೆನ್ನಾಗಿ ಆಡಿದರು, ಅವರಿಗೆ ಅಭಿನಂದನೆ ಹೇಳಬೇಕು’’.

ಕಳೆದ ಋತುವಿನಲ್ಲಿ ರಿಯಾನ್ ಪರಾಗ್ ನಾಲ್ಕನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ್ದರು ಆದರೆ ಈ ಬಾರಿ ಅವರು ಮೂರನೇ ಸ್ಥಾನದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಇದರ ಬಗ್ಗೆ ಕೇಳಿದಾಗ, ‘‘ಕಳೆದ ವರ್ಷ ತಂಡವು ನನ್ನನ್ನು 4 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬೇಕೆಂದು ಬಯಸಿತ್ತು, ನಾನು ಅದನ್ನು ಸಂತೋಷದಿಂದ ಮಾಡಿದೆ. ಈ ವರ್ಷ ಅವರು ನನ್ನನ್ನು 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕೆಂದು ಬಯಸಿದ್ದಾರೆ, ಹೀಗಾಗಿ ತಂಡದ ಪರವಾಗಿ ನಾನು ಎಲ್ಲಿ ಬೇಕಾದರೂ ಬ್ಯಾಟಿಂಗ್ ಮಾಡಲು ಸಿದ್ದನಿದ್ದೇನೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
IPL 2025: ಬೌಲರ್​ಗಳಿಗೆ ಮನಃಶಾಸ್ತ್ರಜ್ಞರ ಅಗತ್ಯವಿದೆ: ಅಶ್ವಿನ್
Image
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
Image
IPL 2025: ಐಪಿಎಲ್​ ಇತಿಹಾಸದ ಅತ್ಯಂತ ಕಿರಿಯ ಆಟಗಾರನಿಗೆ ಇಂದು ಹುಟ್ಟುಹಬ್ಬ
Image
24 ಗಂಟೆಗಳಲ್ಲಿ ಮೂವರ ಶತಕ ಮಿಸ್..!

IPL 2025: ಬೌಲರ್​ಗಳಿಗೆ ಮನಃಶಾಸ್ತ್ರಜ್ಞರ ಅಗತ್ಯವಿದೆ: ಅಶ್ವಿನ್

ಕಳೆದ ಋತುವಿಗೆ ಹೋಲಿಸಿದರೆ, ರಿಯಾನ್ ಪರಾಗ್ ತಮ್ಮ ತಂಡವು ಈ ಬಾರಿ ಚಿಕ್ಕದಾಗಿದೆ ಎಂದು ಹೇಳಿದ್ದಾರೆ. ‘‘ಈ ವರ್ಷ ನಮ್ಮ ತಂಡವು ಕಳೆದ ವರ್ಷಕ್ಕಿಂತ ಚಿಕ್ಕದಾಗಿದೆ. ಈಗ ನಾವು ಉತ್ತಮ ಪಂದ್ಯ ಆಡುವ ಸಮಯ ಬಂದಿದೆ ಮತ್ತು ಮುಂದಿನ ದಿನಗಳಲ್ಲಿ ಫಲಿತಾಂಶವು ನಮ್ಮ ಪರವಾಗಿ ಬರುತ್ತದೆ. ನಾವು ಕಲಿಯುತ್ತೇವೆ, ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ, ಇವುಗಳು ಪುನರಾವರ್ತಿಸದಂತೆ ಎಚ್ಚರವಹಿಸುತ್ತೇವೆ ಮತ್ತು ಚೆನ್ನೈಗೆ ಹೊಸ ಮನಸ್ಥಿತಿಯಲ್ಲಿ ಹೋಗುತ್ತೇವೆ’’ ಎಂದು ಹೇಳಿದರು.

ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ 9 ವಿಕೆಟ್‌ಗೆ 151 ರನ್ ಗಳಿಸಿತು. ರಾಜಸ್ಥಾನ ಪರ ಧ್ರುವ್ ಜುರೆಲ್ ಅತಿ ಹೆಚ್ಚು 33 ರನ್ ಗಳಿಸಿದರು. ಮೊಯಿನ್ ಅಲಿ, ವರುಣ್ ಚಕ್ರವರ್ತಿ, ವೈಭವ್ ಅರೋರಾ ಮತ್ತು ಹರ್ಷಿತ್ ರಾಣಾ ತಲಾ ಎರಡು ವಿಕೆಟ್ ಪಡೆದರು. ಡಿ ಕಾಕ್ (97) ಅವರ ಆಟದ ಬಲದಿಂದ ಹಾಲಿ ಚಾಂಪಿಯನ್ ಕೋಲ್ಕತಾ ತಂಡ ಸುಲಭವಾಗಿ ಗುರಿಯನ್ನು ತಲುಪಿತು. ಆರ್‌ಆರ್ ಪರ ವನಿಂದು ಹಸರಂಗ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Thu, 27 March 25

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ