AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Riyan Parag: ಅಂದು ಈ ಪುಟ್ಟ ಬಾಲಕ ಧೋನಿ ಅಭಿಮಾನಿ: ಇಂದು ಎಂಎಸ್​ಡಿ ಎದುರೇ ಗೆದ್ದು ಬೀಗಿದ ಆಟಗಾರ

RR vs CSK, IPL 2025: ಸಿಎಸ್‌ಕೆ ತಂಡದ ಮಾಜಿ ನಾಯಕ ಧೋನಿ ಅನೇಕ ಜನರ ಆರಾಧ್ಯ ದೈವ. ಇದರಲ್ಲಿ ಕೇವಲ ಅಭಿಮಾನಿಗಳು ಮಾತ್ರವಲ್ಲ. ಕ್ರಿಕೆಟಿಗರು ಕೂಡ ಇದ್ದಾರೆ. ಇವರನ್ನೇ ತನ್ನ ಐಡ್ಯಲ್ ಆಗಿ ತೆಗೆದುಕೊಂಡು ಬೆಳೆದವರಲ್ಲಿ ರಿಯಾನ್ ಪರಾಗ್ ಕೂಡ ಒಬ್ಬರು. ಚಿಕ್ಕವನಾಗಿದ್ದಾಗ ಧೋನಿ ಜೊತೆ ಒಂದು ಫೋಟೋಕ್ಕೋಸ್ಕರ ಪರಿತಪಿಸುತ್ತಿದ್ದ ಪರಾಗ್ ಇಂದು ಧೋನಿ ಇರುವ ತಂಡವನ್ನೇ ಸೋಲಿಸುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ.

Riyan Parag: ಅಂದು ಈ ಪುಟ್ಟ ಬಾಲಕ ಧೋನಿ ಅಭಿಮಾನಿ: ಇಂದು ಎಂಎಸ್​ಡಿ ಎದುರೇ ಗೆದ್ದು ಬೀಗಿದ ಆಟಗಾರ
Ms Dhoni And Riyan Parag
Follow us
Vinay Bhat
|

Updated on: Mar 31, 2025 | 10:52 AM

(ಬೆಂಗಳೂರು ಮಾ, 31): ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ ಸತತ ಎರಡು ಸೋಲುಗಳ ನಂತರ ರಿಯಾನ್ ಪರಾಗ್ (Riyan Parag) ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ರಾಜಸ್ಥಾನ್ ತಂಡವು ಋತುವಿನ 11 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕೇವಲ 6 ರನ್‌ಗಳಿಂದ ಸೋಲಿಸಿತು. ಈ ಪಂದ್ಯ ಕೊನೆಯ ಓವರ್‌ನವರೆಗೂ ರೋಚಕತೆ ಸೃಷ್ಟಿಸಿತು. ಕೊನೆಯ ಓವರ್‌ನಲ್ಲಿ ಸಿಎಸ್‌ಕೆ ಗೆಲುವಿಗೆ 20 ರನ್‌ಗಳು ಬೇಕಾಗಿದ್ದವು. ಮಹೇಂದ್ರ ಸಿಂಗ್ ಧೋನಿ ಮತ್ತು ರವೀಂದ್ರ ಜಡೇಜಾ ಕ್ರೀಸ್‌ನಲ್ಲಿದ್ದರು, ಆದರೆ ನಾಯಕ ರಿಯಾನ್ ಪರಾಗ್ ರಾಜಸ್ಥಾನ ಪರ ಮಾಸ್ಟರ್ ಸ್ಟ್ರೋಕ್ ಆಡಿದರು, ಇದರಲ್ಲಿ ಸಿಎಸ್‌ಕೆ ತಂಡದ ಮಾಹಿ ಮ್ಯಾಜಿಕ್ ಕೂಡ ವಿಫಲವಾಯಿತು.

ಸಿಎಸ್‌ಕೆ ತಂಡದ ಮಾಜಿ ನಾಯಕ ಧೋನಿ ಅನೇಕ ಜನರ ಆರಾಧ್ಯ ದೈವ. ಇದರಲ್ಲಿ ಕೇವಲ ಅಭಿಮಾನಿಗಳು ಮಾತ್ರವಲ್ಲ. ಕ್ರಿಕೆಟಿಗರು ಕೂಡ ಇದ್ದಾರೆ. ಇವರನ್ನೇ ತನ್ನ ಐಡ್ಯಲ್ ಆಗಿ ತೆಗೆದುಕೊಂಡು ಬೆಳೆದವರಲ್ಲಿ ರಿಯಾನ್ ಪರಾಗ್ ಕೂಡ ಒಬ್ಬರು. ಚಿಕ್ಕವನಾಗಿದ್ದಾಗ ಧೋನಿ ಜೊತೆ ಒಂದು ಫೋಟೋಕ್ಕೋಸ್ಕರ ಪರಿತಪಿಸುತ್ತಿದ್ದ ಪರಾಗ್ ಇಂದು ಧೋನಿ ಇರುವ ತಂಡವನ್ನೇ ಸೋಲಿಸುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಇದೀಗ ಪರಾಗ್ ಚಿಕ್ಕವರಿದ್ದಾಗ ಧೋನಿ ಜೊತೆ ತೆಗೆಸಿಕೊಂಡ ಫೋಟೋ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ನಡೆಯದ ಧೋನಿ ಮ್ಯಾಜಿಕ್: ಕೊನೆಯ ಓವರ್‌ನಲ್ಲಿ ಪಂದ್ಯ ಗೆಲ್ಲಿಸಲು ವಿಫಲರಾದ MSD
Image
ಧೋನಿ ಬಗ್ಗೆ ಒಂದೂ ಮಾತನಾಡದೆ ಸೋಲಿಗೆ ರುತುರಾಜ್ ದೂರಿದ್ದು ಯಾರನ್ನ ಗೊತ್ತೇ?
Image
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
Image
ರಾಜಸ್ಥಾನ್​ಗೆ ಮೊದಲ ಗೆಲುವು; ಚೆನ್ನೈಗೆ 2ನೇ ಸೋಲು

43 ವರ್ಷದ ಎಂಎಸ್ ಧೋನಿ 2004ರಲ್ಲಿ ಕ್ರಿಕೆಟ್​ಗೆ ಪದಾರ್ಪಣೆ ಮಾಡುವಾಗ ಪರಾಗ್​ಗೆ ಕೇವಲ 3 ವರ್ಷ. ಆಸಕ್ತಿದಾಯಕ ಸಂಗತಿ ಏನೆಂದರೆ ರಿಯಾಗ್ ಅಪ್ಪನಾಗಿರುವ ಪರಾಗ್ ದಾಸ್ ಕೂಡಾ ಧೋನಿ ವಿರುದ್ಧ ರಣಜಿ ಟ್ರೋಫಿಯಲ್ಲಿ ಆಡಿದ್ದರು. 1999-2000ನೇ ಇಸವಿಯಲ್ಲಿ ರಣಜಿ ಟ್ರೋಫಿಯಲ್ಲಿ ಬಿಹಾರ್ ಪರ ಡೆಬ್ಯು ಮಾಡಿದ ಧೋನಿ ವಿರುದ್ಧ ಅಸ್ಸಾಂ ತಂಡವನ್ನು ಪರಾಗ್ ದಾಸ್ ಪ್ರತಿನಿಧಿಸಿದ್ದರು. ಅಲ್ಲದೆ 43 ಪ್ರಥಮ ದರ್ಜೆ ಹಾಗೂ 32 ಲಿಸ್ಟ್ ಎ ಪಂದ್ಯಗಳಲ್ಲಿ ಅಸ್ಸಾಂ ತಂಡದ ಪರ ಆಡಿದ್ದಾರೆ. ಇನ್ನು ಕುತೂಹಲಕಾರಿ ಸಂಗತಿಯೆಂದರೆ ರಿಯಾಗ್ ಅಪ್ಪನನ್ನು ಧೋನಿ ಸ್ಟಂಪ್ ಔಟ್ ಮಾಡಿದ್ದರು.

MS Dhoni: ನಡೆಯದ ಎಂಎಸ್ ಧೋನಿ ಮ್ಯಾಜಿಕ್: ಕೊನೆಯ ಓವರ್‌ನಲ್ಲಿ ಪಂದ್ಯ ಗೆಲ್ಲಿಸಲು ವಿಫಲರಾದ MSD

ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 11 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿತು. ಈ ಗೆಲುವಿನಿಂದಾಗಿ, ರಾಜಸ್ಥಾನ ತಂಡವು ಹ್ಯಾಟ್ರಿಕ್ ಸೋಲಿನಿಂದ ಪಾರಾಯಿತು. ರಾಜಸ್ಥಾನ ತಂಡವು ತನ್ನ ಮೊದಲ ಎರಡು ಪಂದ್ಯಗಳಲ್ಲಿ ಹೀನಾಯ ಸೋಲುಗಳನ್ನು ಎದುರಿಸಬೇಕಾಯಿತು. ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ರಾಜಸ್ಥಾನ ಸೋಲಿನ ಭೀತಿಯಲ್ಲೇ ಇತ್ತು, ಆದರೆ ಕೊನೆಯ ಓವರ್‌ನಲ್ಲಿ ರಾಜಸ್ಥಾನ್ ಪಂದ್ಯದ ಗತಿಯನ್ನು ಬದಲಾಯಿಸಿತು. ಧೋನಿ ಔಟ್ ಆದ ಪರಿಣಾಮ ಆರ್​ಆರ್​ ಜಯ ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ