AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನೂ ನಿಬ್ಬೆರಗಾಗಿಸಿದ ರಾಬ್

T20 Blast: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಾರ್ಥಾಂಪ್ಟನ್ ಶೈರ್ ಕ್ರಿಸ್ ಲಿನ್ ಅವರ ಶತಕದ ನೆರವಿನಿಂದ 228 ರನ್ ಗಳ ಗುರಿ ನೀಡಿತ್ತು.

Viral Video: ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನೂ ನಿಬ್ಬೆರಗಾಗಿಸಿದ ರಾಬ್
Rob Keogh
TV9 Web
| Edited By: |

Updated on: Jun 02, 2022 | 12:35 PM

Share

ಕ್ರಿಕೆಟ್​ನಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತಿದೆ. ಈ ಮಾತು ಅಕ್ಷರಶಃ ನಿಜ ಎನ್ನಲು ಐಪಿಎಲ್​ನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೆಕೆಆರ್​ ನಡುವಣ ಪಂದ್ಯವೇ ಸಾಕ್ಷಿ. ಏಕೆಂದರೆ ಆ ಪಂದ್ಯದಲ್ಲಿ ಎವಿನ್ ಲೂಯಿಸ್ ಹಿಡಿದ ಅಧ್ಬುತ ಕ್ಯಾಚ್ ಇಡೀ ಪಂದ್ಯದ ಚಿತ್ರಣ ಬದಲಿಸಿತ್ತು. ಅಷ್ಟೇ ಅಲ್ಲದೆ ಅದೇ ಕ್ಯಾಚ್​ಗೆ ಐಪಿಎಲ್ 15 ಬೆಸ್ಟ್ ಕ್ಯಾಚ್ ಅವಾರ್ಡ್​ ಕೂಡ ಒಲಿದಿತ್ತು. ಇದೀಗ ಮತ್ತೊಂದು ಅದ್ಭುತ ಕ್ಯಾಚ್​ಗೆ ಕ್ರಿಕೆಟ್ ಪ್ರೇಮಿಗಳು ಸಾಕ್ಷಿಯಾಗಿದ್ದಾರೆ. ಈ ಕ್ಯಾಚ್ ಮೂಡಿಬಂದಿರುವುದು ಇಂಗ್ಲೆಂಡ್​ನ ಟಿ20 ಬ್ಲಾಸ್ಟ್​ ಲೀಗ್​ನಲ್ಲಿ.

ಈ ಪಂದ್ಯದಲ್ಲಿ ಲೀಸೆಸ್ಟರ್ ಹಾಗೂ ನಾರ್ಥಾಂಪ್ಟನ್​ಶೈರ್ ತಂಡಗಳು ಮುಖಾಮುಖಿಯಾಗಿತ್ತು. ಲೀಸೆಸ್ಟರ್‌ಶೈರ್‌ನ ಇನಿಂಗ್ಸ್‌ನ 12ನೇ ಓವರ್​ನಲ್ಲಿ ನಾರ್ಥಾಂಪ್ಟನ್‌ಶೈರ್ ಆಟಗಾರ ರಾಬ್ ಕಿಯೋಫ್ ಈ ಕ್ಯಾಚ್ ಹಿಡಿದ ಅದ್ಭುತ ಕ್ಯಾಚ್ ನೋಡಿ ಎಲ್ಲರೂ ಹುಬ್ಬೇರಿಸಿದರು. ಲೀಸೆಸ್ಟರ್‌ಶೈರ್ ಬ್ಯಾಟ್ಸ್‌ಮನ್ ರಿಷಿ ಪಟೇಲ್ ಬಾರಿಸಿದ ಚೆಂಡು ಇನ್ನೇನು ಬೌಂಡರಿ ಲೈನ್ ದಾಟಲಿದೆ ಅನ್ನುವಷ್ಟರಲ್ಲಿ ರಾಬ್ ಕಿಯೋಫ್ ಅದ್ಭುತವಾಗಿ ಗಾಳಿಯಲ್ಲಿ ಹಿಂದಕ್ಕೆ ಜಿಗಿದರು. ಅಷ್ಟೇ ಅಲ್ಲದೆ ಚೆಂಡನ್ನು ಹಿಡಿದು ಅತ್ಯುತ್ತಮ ನಿಯಂತ್ರಣ ಸಾಧಿಸಿದರು. ಈ ಮೂಲಕ ರಿಷಿ ಧವನ್ ಔಟ್​ಗೆ ಕಾರಣರಾದರು. ಇದೀಗ ಈ ಅಧ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದರಲ್ಲೂ ಬೌಂಡರಿ ಲೈನ್​ನಲ್ಲಿ ನಿಯಂತ್ರಣ ಸಾಧಿಸಿದ್ದ ರಾಬ್ ಕಿಯೋಫ್ ಅವರ ಫೀಲ್ಡಿಂಗ್​ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಾರ್ಥಾಂಪ್ಟನ್ ಶೈರ್ ಕ್ರಿಸ್ ಲಿನ್ ಅವರ ಶತಕದ ನೆರವಿನಿಂದ 228 ರನ್ ಗಳ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಲೀಸೆಸ್ಟರ್​ಶೈರ್ ತಂಡವು 189 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ನಾರ್ಥಾಂಪ್ಟನ್‌ಶೈರ್ ತಂಡವು 42 ರನ್‌ಗಳ ಭರ್ಜರಿ ಜಯ ಸಾಧಿಸಿತು.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ