AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಜೆಂಡ್ಸ್ ಪ್ರೊ ಟಿ20 ಲೀಗ್‌ನಲ್ಲಿ ಕ್ರಿಕೆಟ್ ದಿಗ್ಗಜರ ಪುನರ್ಮಿಲನ

Legends Pro T20 League 2026: ಟಿ20 ಲೀಗ್​ಗೆ ಹೊಸ ಟೂರ್ನಿಯೊಂದು ಸೇರ್ಪಡೆಯಾಗಲಿದೆ. ಈ ಟೂರ್ನಿಯಲ್ಲಿ ರಾಬಿನ್ ಉತ್ತಪ್ಪ. ಕ್ರಿಸ್ ಗೇಲ್, ಶೇನ್ ವಾಟ್ಸನ್, ಹರ್ಭಜನ್ ಸಿಂಗ್, ಡೇಲ್ ಸ್ಟೇನ್ ಸೇರಿದಂತೆ ಲೆಜೆಂಡ್ಸ್ ಆಟಗಾರರು ಕಣಕ್ಕಿಳಿಯಲಿದ್ದಾರೆ. ಲೆಜೆಂಡ್ಸ್ ಪ್ರೊ ಟಿ20 ಲೀಗ್​ ಹೆಸರಿನ ಈ ಟೂರ್ನಿಯು ಜನವರಿ 26 ರಿಂದ ಫೆಬ್ರವರಿ 4 ರ ನಡುವೆ ಗೋವಾದಲ್ಲಿ ನಡೆಯಲಿದೆ. 

ಲೆಜೆಂಡ್ಸ್ ಪ್ರೊ ಟಿ20 ಲೀಗ್‌ನಲ್ಲಿ ಕ್ರಿಕೆಟ್ ದಿಗ್ಗಜರ ಪುನರ್ಮಿಲನ
Legends Pro T20 League
ಝಾಹಿರ್ ಯೂಸುಫ್
|

Updated on: Dec 11, 2025 | 1:12 PM

Share

ಲೆಜೆಂಡ್ಸ್ ಪ್ರೊ ಟಿ20 ಲೀಗ್ ತನ್ನ ಮೊದಲ ಸೀಸನ್‌ನಲ್ಲಿ ಕ್ರಿಸ್ ಗೇಲ್, ಜಾಕ್ಸ್​ ಕಾಲಿಸ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು ಮತ್ತು ಸ್ಟುವರ್ಟ್ ಬಿನ್ನಿ ಸೇರಿದಂತೆ ಹಲವು ಕ್ರಿಕೆಟ್ ತಾರೆಯಾರನ್ನು ಒಂದುಗೂಡಿಸುತ್ತಿದೆ. ವರ್ಷಗಳ ಕಾಲ ಒಂದೇ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದವರು, ಪೈಪೋಟಿ ನಡೆಸಿದ್ದವರು, ಅನೇಕ ನೆನಪುಗಳನ್ನು ನಿರ್ಮಿಸಿದ್ದವರು ಈ ಬಾರಿ ಎಲ್ಲರೂ ಒಂದೇ ವೇದಿಕೆಯಲ್ಲಿ ಪುನರ್ಮಿಲನಗೊಳ್ಳುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕ್ರಿಸ್ ಗೇಲ್, “ನನ್ನ ಅತ್ಯುತ್ತಮ ಕ್ರಿಕೆಟ್ ದಿನಗಳು ಮತ್ತೆ ನೆನಪಾಗುತ್ತಿವೆ. ಕಾಲಿಸ್ ವಿರುದ್ಧ ಆಡಿದಾಗ ಅವರನ್ನು ಮೀರಿಸುವುದು ಅಸಾಧ್ಯ ಎನಿಸುತ್ತಿತ್ತು. ಉತ್ತಪ್ಪ ಜೊತೆ ಬ್ಯಾಟಿಂಗ್ ಬಗ್ಗೆ ಅನೇಕ ಸಲ ಮಾತುಕತೆ ನಡೆಸಿದ್ದೇನೆ, ರಾಯುಡು ಜೊತೆ ತುಂಬಾ ತಮಾಷೆ ಮಾಡಿಕೊಂಡಿದ್ದೇನೆ. ಈಗ ಧವನ್, ವಾಟ್ಸನ್ ಜೊತೆ ಮತ್ತೆ ಆಡಲು ಈ ಲೆಜೆಂಡ್ಸ್ ಪ್ರೊ T20 ಲೀಗ್ ಅವಕಾಶ ನೀಡುತ್ತಿದೆ,” ಎಂದರು.

ಇನ್ನು ಜಾಕ್ಸ್ ಕಾಲಿಸ್, ಕ್ರಿಕೆಟ್‌ನಿಂದ ಸ್ವಲ್ಪ ದೂರವಾದ ಮೇಲೆ ಕೈಯಲ್ಲಿ ಬ್ಯಾಟ್ ಹಿಡಿಯುವ ಅನುಭವ ನನಗೆ ಬಹಳ ಮಿಸ್ ಆಗುತ್ತಿತ್ತು. ಈಗ ಈ ಲೀಗ್ ಮೂಲಕ ಪುನಃ ಬ್ಯಾಟ್ ಬೀಸುವುದು, ಬಾಲ್ ಹೊಡೆಯುವುದು, ಟೈಮಿಂಗ್ ಹುಡುಕುವುದು ಮತ್ತೆ ಆಟಗಾರನಂತೆ ಭಾಸವಾಗುವುದು ಇವೆಲ್ಲವೂ ಮರಳಿ ಬರುವುದಕ್ಕೆ ಸಂತಸವಾಗಿದೆ ಎಂದರು.

ನಾನು ರಾಯುಡು ಅವರನ್ನು ಎದುರಾಳಿಯಾಗಿ ಎದುರಿಸಿದ್ದೇನೆ, ನಂತರ ಅವರ ಜೊತೆ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದೇನೆ. ದಿನೇಶ್ ಕಾರ್ತಿಕ್ ಜೊತೆ ಪಂದ್ಯ ಮುಗಿಸುವ ತಂತ್ರಗಳ ಬಗ್ಗೆ ಅನೇಕ ಬಾರಿ ಚರ್ಚಿಸಿದ್ದೇವೆ. ಅಂಡರ್-19 ದಿನಗಳಿಂದ ಇರುವ ನಮ್ಮ ಸ್ನೇಹವೂ ವಿಶೇಷ ಎಂದು ರಾಬಿನ್ ಉತ್ತಪ್ಪ ಹಳೆಯ ನೆನಪುಗಳನ್ನು ಸ್ಮರಿಸಿಕೊಂಡರು.

ಇನ್ನು ಹೊಸ ಲೀಗ್​ ಬಗ್ಗೆ ಮಾತನಾಡಿದ ಅಂಬಟಿ ರಾಯುಡು, ಒಟ್ಟಿಗೆ ಪಂದ್ಯಗಳನ್ನು ಆಡಿದ್ದ, ಟ್ರೋಫಿ ಗೆದ್ದಿದ್ದ ಆಟಗಾರರನ್ನು ಮತ್ತೆ ನೋಡಿದಾಗ ಹಳೆಯ ದಿನಗಳು ಕಣ್ಣ ಮುಂದೆ ಬರುತ್ತವೆ. ಬಿನ್ನಿ ಜೊತೆಗಿನ ಆಟ, ಗೇಲ್ ವಿರುದ್ಧ ಮರೆಯಲಾಗದ ಪಂದ್ಯಗಳು, ವಾಟ್ಸನ್ ಜೊತೆಗಿನ ಕ್ಷಣಗಳು ತುಂಬಾ ವಿಶೇಷ. ಈ ಲೀಗ್ ಇವೆಲ್ಲವನ್ನೂ ಮತ್ತೆ ನೀಡುತ್ತಿರುವುದು ತುಂಬಾ ಸಂತೋಷ ಎಂದರು.

ಇದನ್ನೂ ಓದಿ: ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಭಾರತೀಯ ಮೂಲದ ಇಬ್ಬರಿಗೆ ಸ್ಥಾನ

ನನಗೆ ಕ್ರಿಕೆಟ್ ಮಾತ್ರವಲ್ಲ, ಈ ತಂಡವೂ ರೋಮಾಂಚನಕಾರಿಯಾಗಿದೆ. ನಾವು ಪ್ರಪಂಚದಾದ್ಯಂತ ಆಡಿದ್ದೇವೆ, ಸ್ಕೋರ್‌ಕಾರ್ಡ್ ಮೀರಿದ ಅನೇಕ ಕ್ಷಣಗಳನ್ನು ಹಂಚಿಕೊಂಡಿದ್ದೇವೆ. ಅವನ್ನೆಲ್ಲ ಮತ್ತೆ ಅನುಭವಿಸುವ ಅವಕಾಶ ಸಿಕ್ಕಿರುವುದು ತುಂಬಾ ಸಂತೋಷ ಎಂದು ಸ್ಟುವರ್ಟ್ ಬಿನ್ನಿ ಹೇಳಿದರು.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ