Sign In

By signing in or creating an account, you agree with Associated Broadcasting Company's Terms & Conditions and Privacy Policy.

Robin Uthappa: ಸಿಎಸ್​ಕೆ ಪರ ಭರ್ಜರಿ ಬ್ಯಾಟಿಂಗ್ ಬಳಿಕ ಕೆಕೆಆರ್ ತಂಡವನ್ನು ನೆನೆದ ಉತ್ತಪ್ಪ

IPL 2021: ರಾಬಿನ್ ಉತ್ತಪ್ಪ ಐಪಿಎಲ್​ನಲ್ಲಿ ಆರ್​ಸಿಬಿ, ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ಪರ ಆಡಿದ್ದರು. ಅದರಲ್ಲೂ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್​ ತಂಡವು ಚಾಂಪಿಯನ್ ಪಟ್ಟಕ್ಕೇರುವಲ್ಲಿ ಉತ್ತಪ್ಪ ಪ್ರಮುಖ ಪಾತ್ರವಹಿಸಿದ್ದರು.

Robin Uthappa: ಸಿಎಸ್​ಕೆ ಪರ ಭರ್ಜರಿ ಬ್ಯಾಟಿಂಗ್ ಬಳಿಕ ಕೆಕೆಆರ್ ತಂಡವನ್ನು ನೆನೆದ ಉತ್ತಪ್ಪ
Robin Uthappa
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 11, 2021 | 5:13 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 14ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ದ ಭರ್ಜರಿ ಜಯ ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಫೈನಲ್​ಗೇರಿದೆ. ಈ ಪಂದ್ಯದಲ್ಲಿ ಸಿಎಸ್​ಕೆ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಹಾಗೂ ರಾಬಿನ್ ಉತ್ತಪ್ಪ. ಅದರಲ್ಲೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಉತ್ತಪ್ಪ ಎಲ್ಲರೂ ಹುಬ್ಬೇರುವಂತೆ ಬ್ಯಾಟ್ ಬೀಸಿದ್ದರು. ಡೆಲ್ಲಿ ಬೌಲರುಗಳನ್ನು ಮನಸೊ ಇಚ್ಛೆ ದಂಡಿಸಿದ ಉತ್ತಪ್ಪ 63 ರನ್​ಗಳನ್ನು ಚಚ್ಚಿದರು. ಬಿರುಸಿನ ಇನ್ನಿಂಗ್ಸ್ ಆಡುವ ಮೂಲಕ ಉತ್ತಪ್ಪ ಚೆನ್ನೈಯನ್ನು ಫೈನಲ್‌ಗೆ ಕರೆದೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಗೆಲುವಿನ ಬಳಿಕ ಮಾತನಾಡಿದ ಉತ್ತಪ್ಪ, ತಮ್ಮ ಹಿಂದಿನ ತಂಡವನ್ನು ನೆನಪಿಸಿಕೊಂಡಿದ್ದು ವಿಶೇಷ. ಅದರಲ್ಲೂ ಮಾಜಿ ನಾಯಕನನ್ನು ಹಾಡಿಹೊಗಳಿ ಎಲ್ಲರ ಗಮನ ಸೆಳೆದರು.

ಹೌದು, ಗೆಲುವಿನ ನಂತರ ಮಾತನಾಡಿದ ಉತ್ತಪ್ಪ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್​ನಲ್ಲಿ ಅತ್ಯಂತ ಸುರಕ್ಷಿತ ತಂಡ ಎಂಬ ಭಾವನೆ ನನ್ನಲ್ಲಿದೆ. ಆದರೆ ಇದಕ್ಕೂ ಮುನ್ನ ನನಗೆ ಇಂತಹ ಭಾವನೆ ನನ್ನಲಿತ್ತು. ಅದು ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದಲ್ಲಿ. ಗೌತಿ ಮುನ್ನಡೆಸಿದ ಕೆಕೆಆರ್ ತಂಡದಲ್ಲಿ ನಾನು ತುಂಬಾ ಕಂಫರ್ಟ್​ ಆಗಿದ್ದೆ. ಇದೀಗ ಅದೇ ಅನುಭವ ಮತ್ತೆ ಸಿಗುತ್ತಿದೆ. ಇದರಿಂದಾಗಿ ಅತ್ಯುತ್ತಮವಾಗಿ ಬ್ಯಾಟ್ ಬೀಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ರಾಬಿನ್ ಉತ್ತಪ್ಪ ಐಪಿಎಲ್​ನಲ್ಲಿ ಆರ್​ಸಿಬಿ, ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ಪರ ಆಡಿದ್ದರು. ಅದರಲ್ಲೂ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್​ ತಂಡವು ಚಾಂಪಿಯನ್ ಪಟ್ಟಕ್ಕೇರುವಲ್ಲಿ ಉತ್ತಪ್ಪ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ ಕೆಕೆಆರ್​ ತಂಡದಲ್ಲಿದ್ದ ವೇಳೆ ರಾಬಿನ್ ಉತ್ತಪ್ಪ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಆ ಬಳಿಕ ಉತ್ತಪ್ಪ ಬ್ಯಾಟಿಂಗ್ ಮಂಕಾಗಿತ್ತು. ಇದೀಗ ಸಿಎಸ್​ಕೆ-ಡೆಲ್ಲಿ ನಡುವಣ ಪಂದ್ಯದ ಮೂಲಕ ಮತ್ತೆ ಹಿಂದಿನಂತೆ ಸ್ಪೋಟಕ ಇನಿಂಗ್ಸ್​ ಕಟ್ಟುವಲ್ಲಿ ಉತ್ತಪ್ಪ ಯಶಸ್ವಿಯಾಗಿದ್ದಾರೆ. ಇದೇ ಕಾರಣದಿಂದಾಗಿ ಉತ್ತಪ್ಪ ಗೌತಮ್ ಗಂಭೀರ್ ನಾಯಕತ್ವದಡಿಯಲ್ಲಿ ನಾನು ತುಂಬಾ ಕಂಫರ್ಟ್​ ಅನುಭವ ಹೊಂದಿದ್ದೆ. ಇದೀಗ ಸಿಎಸ್​ಕೆ ತಂಡದಲ್ಲೂ ಅದೇ ಅನುಭವ ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ:  KL Rahul: ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ 7 ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

ಇದನ್ನೂ ಓದಿ: IPL 2021: ಅಚ್ಚರಿಯಾದರೂ ಇದು ಸತ್ಯ: 1 ವಿಕೆಟ್​ಗೆ 1 ಕೋಟಿ ಪಡೆದ ಕ್ರಿಸ್ ಮೋರಿಸ್..!

(Robin Uthappa said CSK is one of the most secured franchise)

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ