AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI President: ಬಿಸಿಸಿಐ ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ?: ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಕೆ: ವರದಿ

Roger Binny: ರೋಜರ್ ಬಿನ್ನಿ ಈ ಹಿಂದೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್‌ 11 ಮತ್ತು 12 ರಂದು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದು.

BCCI President: ಬಿಸಿಸಿಐ ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ?: ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಕೆ: ವರದಿ
Roger Binny
TV9 Web
| Updated By: Vinay Bhat|

Updated on:Oct 11, 2022 | 12:25 PM

Share

ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್‌ ಬಿನ್ನಿ (Roger Binny) ಅವರು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಲಿದ್ದಾರೆ (BCCI President) ಎಂದು ವರದಿಯಾಗಿದೆ. ಈ ಮೂಲಕ ಬಿನ್ನಿ ಸೌರವ್‌ ಗಂಗೂಲಿ ಅವರ ಸ್ಥಾನವನ್ನು ತುಂಬಲಿದ್ದಾರೆಂದು ಬಿಸಿಸಿಐ ಮೂಲಗಳು ತಿಳಿಸಿವೆ. ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಬಿಸಿಸಿಐನ ಹಾಲಿ ಅಧ್ಯಕ್ಷರಾದ ಸೌರವ್ ಗಂಗೂಲಿ (Sourav Ganguly) ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇನ್ನು ರಾಜಿವ್ ಶುಕ್ಲಾ ಬಿಸಿಸಿಐ ಉಪಾಧ್ಯಕ್ಷರಾಗಲಿದ್ದು, ಐಪಿಎಲ್ ಅಧ್ಯಕ್ಷರಾಗಿ ಅರುಣ್ ಧುಮಾಲ್ ಇರಲಿದ್ದಾರೆ. ಖಜಾಂಚಿ ಸ್ಥಾನಕ್ಕೆ ಆಶಿಶ್ ಶೆಲರ್ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಆದರೆ, ಬಿಸಿಸಿಐ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ರೋಜರ್ ಬಿನ್ನಿ ಈ ಹಿಂದೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್‌ 11 ಮತ್ತು 12 ರಂದು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದು. ಅಕ್ಟೋಬರ್‌ 13 ರಂದು ಎಲ್ಲಾ ನಾಮಪತ್ರಗಳ ಪರಿಶೀಲನೆ ಕಾರ್ಯ ಜರುಗಲಿದೆ. ತದನಂತರ ಅಕ್ಟೋಬರ್‌ 14 ರಂದು ಅಭ್ಯರ್ಥಿಗಳು ತಮ್ಮ-ತಮ್ಮ ನಾಮಪತ್ರಗಳನ್ನು ವಾಪಸ್‌ ಪಡೆಯಲು ಅವಕಾಶ ನೀಡಲಾಗಿದೆ. ಅಂದಹಾಗೆ ಬಿಸಿಸಿಐ ಚುನಾವಣೆ ಅಕ್ಟೋಬರ್‌ 18 ರಂದು ಮುಂಬೈನಲ್ಲಿ ನಡೆಯಲಿದೆ.

1955 ಜುಲೈ 19ರಂದು ಜನಿಸಿರುವ ರೋಜರ್ ಬಿನ್ನಿ 1979ರಿಂದ 1987ರವರೆಗೆ ಭಾರತ ಕ್ರಿಕೆಟ್ ತಂಡದ ಸದಸ್ಯರಾಗಿದ್ದರು. ಬಲಗೈ ಬ್ಯಾಟಿಂಗ್ ಶೈಲಿ ಮತ್ತು ಬಲಗೈ ಮಧ್ಯಮ ವೇಗದ ಬೌಲರ್ ಆಗಿದ್ದರು. ತವರು ಅಂಗಣ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ 1979ಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಜರ್‌ ಬಿನ್ನಿ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ತಮ್ಮ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲಿ ಅವರು 46 ರನ್‌ ಗಳಿಸಿದ್ದರು. ಆ ಮೂಲಕ ಎಲ್ಲರ ಗಮನ ಸೆಳೆದಿದ್ದರು.

ಇದನ್ನೂ ಓದಿ
Image
Aaron Finch: ಮೈದಾನದಲ್ಲಿ ಅಂಪೈರ್‌ಗೆ ಅವಾಚ್ಯ ಶಬ್ದದಿಂದ ನಿಂದಿಸಿದ ಆ್ಯರೋನ್ ಫಿಂಚ್: ನಿಷೇಧದ ಭೀತಿಯಲ್ಲಿ ಆಸೀಸ್ ನಾಯಕ
Image
IND vs SA 3rd ODI: ನಿರ್ಣಾಯಕ ಕದನಕ್ಕೆ ಟೀಮ್ ಇಂಡಿಯಾ ಭರ್ಜರಿ ತಯಾರಿ: ಫೋಟೋ ನೋಡಿ
Image
Virat Kohli: ವಿರಾಟ್ ಕೊಹ್ಲಿಗೆ ಸ್ಪೆಷಲ್ ಟ್ರೈನಿಂಗ್ ನೀಡುತ್ತಿರುವ ಕೋಚ್ ರಾಹುಲ್ ದ್ರಾವಿಡ್: ನೆಟ್​ನಲ್ಲಿ ಏನು ಮಾಡ್ತಿದ್ದಾರೆ ನೋಡಿ
Image
IND vs SA: ಇಂದು ಭಾರತ- ದ. ಆಫ್ರಿಕಾ ಮೂರನೇ ಏಕದಿನ: ನಿರ್ಣಾಯಕ ಪಂದ್ಯಕ್ಕೆ ಉಭಯ ತಂಡಗಳು ಸಜ್ಜು

ಭಾರತದ ಪರ 27 ಟೆಸ್ಟ್ ಪಂದ್ಯಗಳನ್ನು ಆಡಿರುವ ರೋಜರ್ ಬಿನ್ನಿ ಬ್ಯಾಟಿಂಗ್‌ನಲ್ಲಿ 23.06 ಸರಾಸರಿಯಲ್ಲಿ 830 ರನ್ ಗಳಿಸಿದ್ದಾರೆ ಮತ್ತು 5 ಅರ್ಧಶತಕ ಬಾರಿಸಿದ್ದಾರೆ. ಇನ್ನು 72 ಏಕದಿನ ಪಂದ್ಯಗಳನ್ನು ಆಡಿರುವ ಅವರು, 16.13 ಸರಾಸರಿಯಲ್ಲಿ 629 ರನ್ ಗಳಿಸಿದ್ದಾರೆ ಮತ್ತು 1 ಅರ್ಧಶತಕ ಬಾರಿಸಿದ್ದಾರೆ. ಬೌಲಿಂಗ್‌ನಲ್ಲಿ 27 ಟೆಸ್ಟ್ ಪಂದ್ಯಗಳಿಂದ 47 ವಿಕೆಟ್ ಪಡೆದುಕೊಂಡಿದ್ದಾರೆ ಮತ್ತು 2 ಬಾರಿ 5 ವಿಕೆಟ್ ಗೊಂಚಲು ಗಳಿಸಿದ್ದಾರೆ. ಇನ್ನು 72 ಏಕದಿನ ಪಂದ್ಯಗಳಿಂದ 77 ವಿಕೆಟ್ ಪಡೆದುಕೊಂಡ ಸಾಧನೆ ಮಾಡಿದ್ದಾರೆ.

Published On - 11:51 am, Tue, 11 October 22

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ