AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಮೊನ್ನೆ ಕಾರ್ತಿಕ್​ ಕುತ್ತಿಗೆ ಹಿಡಿದಿದ್ದ ರೋಹಿತ್ 2ನೇ ಟಿ20ಯಲ್ಲಿ ಗೆದ್ದಾಗ ಏನು ಮಾಡಿದ್ರು ನೋಡಿ

Dinesh Karthik, IND vs AUS: ಡೆನಿಯಲ್ ಸ್ಯಾಮ್ಸ್ ಅವರ ಮೊದಲ ಎಸೆತದಲ್ಲೇ ದಿನೇಶ್ ಕಾರ್ತಿಕ್ ಚೆಂಡನ್ನು ಸಿಕ್ಸರ್​ಗೆ ಅಟ್ಟಿ ಗೆಲುವು ಖಚಿತ ಪಡಿಸಿದರು. ಎರಡನೇ ಎಸೆತದಲ್ಲಿ ಫೋರ್ ಬಾರಿಸಿ ಗೆಲುವಿಗೆ ಕಾರಣರಾದರು. ಈ ಸಂದರ್ಭ ರೋಹಿತ್ ಶರ್ಮಾ ಏನು ಮಾಡಿದರು ನೋಡಿ.

Rohit Sharma: ಮೊನ್ನೆ ಕಾರ್ತಿಕ್​ ಕುತ್ತಿಗೆ ಹಿಡಿದಿದ್ದ ರೋಹಿತ್ 2ನೇ ಟಿ20ಯಲ್ಲಿ ಗೆದ್ದಾಗ ಏನು ಮಾಡಿದ್ರು ನೋಡಿ
Dinesh Karthik and Rohit Sharma
TV9 Web
| Edited By: |

Updated on:Sep 24, 2022 | 10:45 AM

Share

ನಾಗ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20ಯ ಎಂಟು ಓವರ್​ಗಳ ಪಂದ್ಯದಲ್ಲಿ ಭಾರತ (India vs Australia) ರೋಚಕ ಜಯ ಸಾಧಿಸಿ ಸರಣಿ ಸಮಬಲ ಸಾಧಿಸಿದೆ. ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ ಬೌಲಿಂಗ್​ನಲ್ಲಿ ಮಿಂಚಿದರೆ, ನಾಯಕ ರೋಹಿತ್ ಶರ್ಮಾ (Rohit Sharma) ಸ್ಫೋಟಕ ಬ್ಯಾಟಿಂಗ್ ನಡೆಸಿದರು. ದಿನೇಶ್ ಕಾರ್ತಿಕ್ (Dinesh Karthik) ಒಂದು ಫೋರ್, ಸಿಕ್ಸರ್ ಸಿಡಿಸಿ ಪಂದ್ಯವನ್ನು ಫಿನಿಶ್ ಮಾಡಿದರು. ಕೊನೆಯ ಓವರ್​ನಲ್ಲಿ ಭಾರತಕ್ಕೆ ಗೆಲ್ಲಲು 9 ರನ್​ಗಳ ಅವಶ್ಯಕತೆಯಿತ್ತು. ಹಿಂದಿನ ಓವರ್​ನ ಅಂತಿಮ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಔಟಾದ ಕಾರಣ ಕಾರ್ತಿಕ್ ಕ್ರೀಸ್​ಗೆ ಬಂದು ಸ್ಟ್ರೈಕ್​ನಲ್ಲಿದ್ದರು. ಡೆನಿಯಲ್ ಸ್ಯಾಮ್ಸ್ ಅವರ ಮೊದಲ ಎಸೆತದಲ್ಲೇ ಕಾರ್ತಿಕ್ ಚೆಂಡನ್ನು ಸಿಕ್ಸರ್​ಗೆ ಅಟ್ಟಿ ಗೆಲುವು ಖಚಿತ ಪಡಿಸಿದರು. ಎರಡನೇ ಎಸೆತದಲ್ಲಿ ಫೋರ್ ಬಾರಿಸಿ ಗೆಲುವಿಗೆ ಕಾರಣರಾದರು. ಈ ಸಂದರ್ಭ ರೋಹಿತ್ ಶರ್ಮಾ ಏನು ಮಾಡಿದರು ನೋಡಿ.

ದಿನೇಶ್ ಕಾರ್ತಿಕ್ ತಾನು ಎದುರಿಸಿದ ಮೊದಲ ಎರಡು ಎಸೆದಲ್ಲಿ ಸಿಕ್ಸ್, ಫೋರ್ ಬಾರಿಸಿ ಗೆಲುವು ತಂದುಕೊಟ್ಟ ಸಂದರ್ಭ ನಾನ್ ಸ್ಟ್ರೈಕರ್​ನಲ್ಲಿದ್ದ ರೋಹಿತ್ ಶರ್ಮಾ ಅವರು ಕಾರ್ತಿಕ್ ಬಳಿ ಓಡಿ ಬಂದು ನಗುತ್ತಾ ಖುಷಿಯಲ್ಲಿ ತಬ್ಬಿಕೊಂಡರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಯಾಕೆಂದರೆ ಹಿಂದಿನ ಮೊದಲ ಟಿ20 ಯಲ್ಲಿ ರೋಹಿತ್ ಹಾಗೂ ಕಾರ್ತಿಕ್ ನಡುವಣ ವಿಡಿಯೋ ಕೂಡ ವೈರಲ್ ಆಗಿತ್ತು.

ಇದನ್ನೂ ಓದಿ
Image
Dinesh Karthik: ಆಡಿದ ಎರಡು ಬಾಲ್​ನಲ್ಲಿ ಸಿಕ್ಸ್, ಫೋರ್: ಪಂದ್ಯ ಮುಗಿದ ಬಳಿಕ ದಿನೇಶ್ ಕಾರ್ತಿಕ್ ಏನಂದ್ರು ಗೊತ್ತೇ?
Image
Rohit Sharma: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ: ಹಿಟ್​ಮ್ಯಾನ್ ಮುಡಿಗೆ ವಿಶೇಷ ದಾಖಲೆ
Image
IND vs AUS: ರೋಹಿತ್ ಸಿಡಿಲಬ್ಬರದ ಬ್ಯಾಟಿಂಗ್‌; ನಿರ್ಣಾಯಕ ಪಂದ್ಯದಲ್ಲಿ ಆಸೀಸ್ ಮಣಿಸಿದ ಭಾರತ..!
Image
Ind vs Aus Playing XI: 48 ಎಸೆತಗಳ ಪಂದ್ಯ.. ಟಾಸ್ ಗೆದ್ದ ಭಾರತ; ಉಭಯ ತಂಡಗಳ ಪ್ಲೇಯಿಂಗ್ XI

ಹಿಂದಿನ ಪಂದ್ಯದಲ್ಲಿ ಏನಾಗಿತ್ತು?:

ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಡಿಆರ್​ಎಸ್ ಮನವಿ ವಿಫಲವಾಗಿದ್ದಕ್ಕೆ ರೋಹಿತ್ ಸಿಟ್ಟಾಗಿ ವಿಕೆಟ್ ಕೀಪರ್ ಆಗಿದ್ದ ದಿನೇಶ್ ಕಾರ್ತಿಕ್ ಕುತ್ತಿಗೆ ಹಿಡಿದ ಘಟನೆ ನಡೆದಿತ್ತು. ಆದರೆ ಇದೆಲ್ಲಾ ರೋಹಿತ್ ಮಾಡಿದ್ದು ತಮಾಷೆಯಾಗಿ. ಮೊದಲು ಚಹಲ್ ಬೌಲಿಂಗ್ ನಲ್ಲಿ ಸ್ಟೀವ್ ಸ್ಮಿತ್ ಪ್ಯಾಡ್​ಗೆ ತಗುಲಿದ ಬಾಲ್ ಸ್ಟಂಪ್ ಹಾದು ಹೋಗುತ್ತಿತ್ತು. ಆದರೆ ವಿಕೆಟ್ ಕೀಪರ್ ಆಗಲೀ ಬೌಲರ್ ಆಗಲೀ ಅಪೀಲ್ ಮಾಡಿಲ್ಲ.

ಬಳಿಕ ಉಮೇಶ್ ಯಾದವ್ ಬೌಲಿಂಗ್ ನಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ ಪ್ಯಾಡ್​ಗೆ ಬಾಲ್ ಬಡಿದಿತ್ತು. ಆದರೆ ಕಾರ್ತಿಕ್​ಗೆ ಇದು ಖಚಿತವಿರಲಿಲ್ಲ. ಹೀಗಾಗಿ ರೋಹಿತ್ ಡಿಆರ್​ಎಸ್​ಗೆ ಮನವಿ ಮಾಡಿದರು. ಬಳಿಕ ಕಾರ್ತಿಕ್ ತಮಾಷೆಯಾಗಿ ಬೈದು ಅವರ ಕುತ್ತಿಗೆ ಹಿಡಿದು ರೋಹಿತ್ ಸಿಟ್ಟು ತೀರಿಸಿಕೊಂಡರು. ಇದೀಗ ಮೊನ್ನೆ ಕುತ್ತಿಗೆ ಹಿಡಿದಿದ್ದ ರೋಹಿತ್ ಇಂದು ತಬ್ಬಿಕೊಂಡು ಸಂಭ್ರಮಿಸುತ್ತಿರುವ ವಿಡಿಯೋ ಎರಡೂ ಹೊಂದಾಣಿಕೆ ಮಾಡಿ ಅಭಿಮಾನಿಗಳು ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಪಂದ್ಯ ಮುಗಿದ ಬಳಿಕ ಮಾತನಾಡಿದ ಕಾರ್ತಿಕ್, ”ನನಗೆ ಎರಡು ಬಾಲ್ ಆಡಲು ಸಿಕ್ಕಿತಷ್ಟೆ. ನಾನು ನನ್ನ ಬೆಸ್ಟ್ ಅನ್ನು ಅಲ್ಲಿ ನೀಡಬೇಕಿತ್ತು. ಅದನ್ನು ಪ್ರಯತ್ನಿಸಿದೆ. ಹೊಸ ಚೆಂಡಿನಲ್ಲಿ ವಿಶ್ವದ ಶ್ರೇಷ್ಠ ಬೌಲರ್​ಗಳ ಎದುರು ಆ ಸಂದರ್ಭ ಬ್ಯಾಟಿಂಗ್ ಮಾಡುವುದು ಸುಲಭವಲ್ಲ. ನಾನು ಬ್ಯಾಟಿಂಗ್​ಗೆ ಬಂದಾಗ ಬೌಲರ್ ಏನು ಮಾಡುತ್ತಾರೆ ಎಂದು ರೋಹಿತ್ ನನಗೆ ಹೇಳಿದರು. ನಾನು ನನ್ನ ಯೋಜನೆಯನ್ನು ಕಾರ್ಯರೂಪಕ್ಕೆ ತಂದೆ. ನಾನು ಈ ರೀತಿಯ ಸಂದರ್ಭದಲ್ಲಿ ಆಡಲು ಅನೇಕ ಸಮಯದಿಂದ ಅಭ್ಯಾಸ ನಡೆಸುತ್ತಿದ್ದೇನೆ. ಇದನ್ನು ಆರ್​ಸಿಬಿ ತಂಡದಲ್ಲಿ ಇದ್ದಾಗಲೂ ಮಾಡಿದ್ದೇನೆ. ಈಗ ರಾಷ್ಟ್ರೀಯ ತಂಡಕ್ಕೆ ಕೊಡುಗೆ ನೀಡಲು ಖುಷಿ ಆಗುತ್ತಿದೆ,” ಎಂದು ಹೇಳಿದ್ದಾರೆ.

Published On - 10:44 am, Sat, 24 September 22

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ