Suryakumar Yadav: ಶಾಕಿಂಗ್: ಸೂರ್ಯಕುಮಾರ್ ಬಗ್ಗೆ 10 ವರ್ಷದ ಹಿಂದೆ ರೋಹಿತ್ ಮಾಡಿದ್ದ ಟ್ವೀಟ್ ವೈರಲ್

ENG vs IND, Rohit Sharma: ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಶತಕ ಸಿಡಿಸಿ ಆರ್ಭಟಿಸುತ್ತಿದ್ದಂತೆ ಇವರ ಬಗ್ಗೆ ರೋಹಿತ್ ಶರ್ಮಾ ಮಾಡಿದ್ದ ಟ್ವೀಟ್ ಒಂದು ಸಖತ್ ವೈರಲ್ ಆಗುತ್ತಿದೆ.

Suryakumar Yadav: ಶಾಕಿಂಗ್: ಸೂರ್ಯಕುಮಾರ್ ಬಗ್ಗೆ 10 ವರ್ಷದ ಹಿಂದೆ ರೋಹಿತ್ ಮಾಡಿದ್ದ ಟ್ವೀಟ್ ವೈರಲ್
Suryakumar Yadav and Rohit Sharma
Follow us
| Updated By: Vinay Bhat

Updated on:Jul 11, 2022 | 10:47 AM

ಇಂಗ್ಲೆಂಡ್ ವಿರುದ್ಧದ ಅಂತಿಮ ಮೂರನೇ ಟಿ20 ಪಂದ್ಯದಲ್ಲಿ ಭಾರತ ಸೋತಿತಾದರೂ ಸೂರ್ಯಕುಮಾರ್ ಯಾದವ್ (Suryakumar Yadav) ಎಲ್ಲರ ಮನ ಗೆದ್ದರು. 216 ರನ್​ಗಳ ಬೆಟ್ಟದಂತಹ ಟಾರ್ಗೆಟ್ ಬೆನ್ನಟ್ಟಲು ಹೊರಟ ಟೀಮ್ ಇಂಡಿಯಾ (Team India) ಪ್ರಮುಖ ಬ್ಯಾಟರ್​ಗಳನ್ನು ಕಳೆದುಕೊಂಡೆ ಸಾಗಿತು. ಆದರೆ, ಸೂರ್ಯ ಕ್ರೀಸ್​ ಕಚ್ಚಿ ನಿಂತು ತಂಡದ ಗೆಲುವಿಗೆ ಏಕಾಂಗಿ ಹೋರಾಟ ನಡೆಸಿದರು. 4ನೇ ವಿಕೆಟ್​ಗೆ ಶ್ರೇಯಸ್ ಅಯ್ಯರ್ (28 ರನ್) ಜೊತೆಗೂಡಿ 119 ರನ್​​ಗಳ ಕಾಣಿಕೆ ನೀಡಿದರು. ಆದರೆ, ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. 19ನೇ ಓವರ್​ನ ಕೊನೆಯ ಎಸೆತದಲ್ಲಿ ಔಟಾದರು. ಸೂರ್ಯಕುಮಾರ್ 55 ಎಸೆತಗಳಲ್ಲಿ 14 ಫೋರ್, 6 ಸಿಕ್ಸರ್ ಸಿಡಿಸಿ 117 ರನ್​ಗೆ ನಿರ್ಗಮಿಸಿದರು. ಶತಕ ಸಿಡಿಸುವ ಮೂಲಕ ವಿಶೇಷ ಸಾಧನೆಯನ್ನು ಕೂಡ ಮಾಡಿದ್ದಾರೆ. ಸೂರ್ಯ ಶತಕ ಸಿಡಿಸಿ ಆರ್ಭಟಿಸುತ್ತಿದ್ದಂತೆ ಇವರ ಬಗ್ಗೆ ರೋಹಿತ್ ಶರ್ಮಾ (Rohit Sharma) ಮಾಡಿದ್ದ ಟ್ವೀಟ್ ಒಂದು ಸಖತ್ ವೈರಲ್ ಆಗುತ್ತಿದೆ.

ಹೌದು, ರೋಹಿತ್ ಶರ್ಮಾ 10 ವರ್ಷಗಳ ಹಿಂದೆ ಸೂರ್ಯಕುಮಾರ್ ಯಾದವ್ ಬಗ್ಗೆ ಮಾಡಿದ ಒಂದು ಟ್ವೀಟ್ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಟ್ವೀಟ್ ಅನ್ನು ರೋಹಿತ್ ಡಿಸೆಂಬರ್ 10, 2011 ರಂದು ಪೋಸ್ಟ್ ಮಾಡಿದ್ದರು. “ಈಗಷ್ಟೆ ಚೆನ್ನೈನಲ್ಲಿ ಬಿಸಿಸಿಐ ಪ್ರಶಸ್ತಿ ಸಮಾರಂಭ ಮುಗಿಯಿತು. ಮುಂಬೈಯ ಸೂರ್ಯಕುಮಾರ್ ಯಾದವ್ ಭವಿಷ್ಯದಲ್ಲಿ ದೊಡ್ಡ ಆಟಗಾರನಾಗುತ್ತಾನೆ,” ಎಂಬ ಅರ್ಥದಲ್ಲಿ ಟ್ವೀಟ್ ಮಾಡಿದ್ದಾರೆ. ಹಿಟ್​ಮ್ಯಾನ್ ಆಗಲೇ ಸೂರ್ಯ ಬಗ್ಗೆ ಭವಿಷ್ಯ ನುಡಿದಿದ್ದ ಟ್ವೀಟ್ ಈಗ ಎಲ್ಲೆಡೆ ಹರಿದಾಡುತ್ತಿದೆ.

ಇದನ್ನೂ ಓದಿ
Image
Rohit Sharma: ಪಂದ್ಯ ಮುಗಿದ ಬಳಿಕ ಕೊಹ್ಲಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ರೋಹಿತ್ ಶರ್ಮಾ: ಏನಂದ್ರು ಗೊತ್ತೇ?
Image
Virat Kohli: 4,6 ಮತ್ತು ಔಟ್: ಮೈ ಜುಮ್ ಎನಿಸುವ ಕೊಹ್ಲಿಯ ಎರಡು ಅದ್ಭುತ ಶಾಟ್​ಗೆ ಫ್ಯಾನ್ಸ್ ಫಿದಾ
Image
Wimbledon 2022: ಸತತ ನಾಲ್ಕನೇ ಬಾರಿಗೆ ಚಾಂಪಿಯನ್; 21 ನೇ ಗ್ರ್ಯಾಂಡ್ ಸ್ಲಾಮ್ ಗೆದ್ದ ನೊವಾಕ್ ಜೊಕೊವಿಕ್..!
Image
IND vs ENG: ಆಂಗ್ಲರ ನಾಡಿನಲ್ಲಿ ಸೂರ್ಯ ಸ್ಫೋಟ! ಅಂತಿಮ ಟಿ20ಯಲ್ಲಿ ಅಬ್ಬರದ ಶತಕ ಸಿಡಿಸಿದ ಯಾದವ್

ಸೂರ್ಯಕುಮಾರ್ ಅವರು ತಮ್ಮ ಚೊಚ್ಚಲ ಶತಕದ ಮೂಲಕ ವಿಶೇಷ ಸಾಧನೆ ಕೂಡ ಮಾಡಿದ್ದಾರೆ. ಟಿ20 ಮಾದರಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮುನ್ನ ಸುರೇಶ್ ರೈನಾ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ದೀಪಕ್ ಹೂಡ ಈ ಸಾಧನೆ ಮಾಡಿದ್ದರು. ಇವರು ಗಳಿಸಿ 117 ರನ್ ಭಾರತೀಯ ಬ್ಯಾಟರ್ ಒಬ್ಬ ಟಿ20 ಕ್ರಿಕೆಟ್​ನಲ್ಲಿ ಗಳಿಸಿದ ಎರಡನೇ ಗರಿಷ್ಠ ಮೊತ್ತವಾಗಿದೆ. ಕಳೆದ ಕೆಲವು ಸಮಯದಿಂದ ಟೀಮ್ ಇಂಡಿಯಾದ ಖಾಯಂ ಸದಸ್ಯನಾಗಿ ಕಾಣಿಸಿಕೊಂಡಿರುವ ಸೂರ್ಯ 19 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ. 537 ರನ್ ಕಲೆಹಾಕಿದ್ದಾರೆ. 38.35 ಸರಾಸರಿ ಜೊತೆ 177.22 ಸ್ಟ್ರೈಕ್​ರೇಟ್ ಹೊಂದಿದ್ದಾರೆ.

IND vs ENG: ಭಾರತ-ಇಂಗ್ಲೆಂಡ್ 3ನೇ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ಉತ್ತಮ ಆರಂಭ ಪಡೆದುಕೊಂಡಿಲ್ಲ, ಆದರೂ ಮಧ್ಯಮ ಕ್ರಮಾಂಕದ ಬ್ಯಾಟರ್​​ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಡೇವಿಡ್ ಮಲನ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಭರ್ಜರಿ ಜೊತೆಯಾಟ ಆಡಿದರು. ಮಲನ್ ಕೇವಲ 39 ಎಸೆತಗಳಲ್ಲಿ 6 ಫೋರ್, 5 ಸಿಕ್ಸರ್ ಸಿಡಿಸಿ 77 ರನ್ ಚಚ್ಚಿದರೆ, ಲಿಯಾಮ್ 29 ಎಸೆತಗಳಲ್ಲಿ 4 ಸಿಕ್ಸರ್ ಬಾರಿಸಿ ಅಜೇಯ 42 ರನ್ ಕಲೆಹಾಕಿದರು. ಪರಿಣಾಮ ಇಂಗ್ಲೆಂಡ್ 20 ಓವರ್​ನಲ್ಲಿ 7 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತು.

ಟಾರ್ಗೆಟ್ ಬೆನ್ನಟ್ಟಿದ ಭಾರತ 50ಕ್ಕೂ ಮುನ್ನವೇ ಮುಖ್ಯ 3 ವಿಕೆಟ್ ಕಳೆದುಕೊಂಡಿತು. ಆದರೆ, ಸೂರ್ಯಕುಮಾರ್ ಯಾದವ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ ಸೂರ್ಯ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಬಳಿಕ ದಿಢೀರ್ ಕುಸಿತ ಕಂಡೂ ಸೂರ್ಯಕುಮಾರ್ ಶತಕ ಸಿಡಿಸಿ ಏಕಾಂಗಿ ಹೋರಾಟ ನಡೆಸುತ್ತಲೇ ಇದ್ದರು. ಆದರೆ, ಇದು ಫಲ ಸಿಗಲಿಲ್ಲ. ಟೀಮ್ ಇಂಡಿಯಾ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಲಷ್ಟೇ ಶಕ್ತವಾಯಿತು.

Published On - 10:47 am, Mon, 11 July 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ