AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್, ಹಾರ್ದಿಕ್ ಯೋ-ಯೋ ಟೆಸ್ಟ್ ರಿಸಲ್ಟ್ ಔಟ್: ಪರೀಕ್ಷೆಗೆ ಹಾಜರಾಗದ ಕೆಎಲ್ ರಾಹುಲ್

Rohit Sharma And Hardik Pandya Clear ‘Yo Yo’ Test: ಕೊಹ್ಲಿ ಬಳಿಕ ಇದೀಗ ನಾಯಕ ರೋಹಿತ್ ಶರ್ಮಾ ಹಾಗೂ ಉಪ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಯೋ-ಯೋ ಟೆಸ್ಟ್​ನಲ್ಲಿ ಪಾಸ್ ಆಗಿದ್ದಾರೆ. ಕೆಎಸ್‌ಸಿಎ-ಆಲೂರ್ ಮೈದಾನದಲ್ಲಿ ರೋಹಿತ್, ರಾಹುಲ್ ಪರೀಕ್ಷೆಯಲ್ಲಿ ಭಾಗವಹಿಸಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ರೋಹಿತ್, ಹಾರ್ದಿಕ್ ಯೋ-ಯೋ ಟೆಸ್ಟ್ ರಿಸಲ್ಟ್ ಔಟ್: ಪರೀಕ್ಷೆಗೆ ಹಾಜರಾಗದ ಕೆಎಲ್ ರಾಹುಲ್
Hardik Pandya and Rohit Sharma
Vinay Bhat
|

Updated on: Aug 25, 2023 | 9:48 AM

Share

ಬಹುನಿರೀಕ್ಷಿತ ಏಷ್ಯಾಕಪ್ 2023 (Asia Cup 2023) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಆಗಸ್ಟ್ 30 ರಂದು ಈ ಟೂರ್ನಿಗೆ ಚಾಲನೆ ಸಿಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೇಪಾಳ ತಂಡಗಳು ಮುಖಾಮುಖಿ ಆಗಲಿದೆ. ಈ ಬಾರಿಯ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಭಾರತದ ಎಲ್ಲ ಪಂದ್ಯಗಳು ಸಿಂಹಳೀಯರ ನಾಡಲ್ಲಿ ಆಯೋಜಿಸಲಾಗಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸ ಶುರುಮಾಡಿಕೊಂಡಿದ್ದಾರೆ.

ಈಗಾಗಲೇ ಬೆಂಗಳೂರಿನ ಎನ್​ಸಿಎಗೆ ಬಂದಿರುವ ಭಾರತೀಯ ಆಟಗಾರರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಏಷ್ಯಾಕಪ್​ಗೆ ಆಯ್ಕೆ ಆಗಿರುವ ಎಲ್ಲ ಆಟಗಾರರು ಯೋ-ಯೋ ಟೆಸ್ಟ್​ನಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕಿದ್ದು, ಇದರಲ್ಲಿ ತೇರ್ಗಡೆ ಆಗಬೇಕಿದೆ. ವಿರಾಟ್ ಕೊಹ್ಲಿ ಮೊದಲಿಗರಾಗಿ ಯೋ-ಯೋ ಟೆಸ್ಟ್‌ಗೆ ಒಳಗಾಗಿ, ಈ ಟೆಸ್ಟ್‌ನಲ್ಲಿ 17.2 ಅಂಕ ಸಂಪಾದಿಸುವುದರೊಂದಿಗೆ ತೇರ್ಗಡೆಗೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಕೊಹ್ಲಿ ಅವರೇ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು.

PAK vs AFG: ಕೊನೆಯ ಓವರ್ ಡ್ರಾಮಾ; ಅಫ್ಘಾನ್ ವಿರುದ್ಧ ಪಾಕಿಸ್ತಾನಕ್ಕೆ ರೋಚಕ ಜಯ

ಇದನ್ನೂ ಓದಿ
Image
Virat Kohli: ನಿಯಮ ಮುರಿದ ಕಿಂಗ್ ಕೊಹ್ಲಿಗೆ ವಾರ್ನಿಂಗ್ ನೀಡಿದ ಬಿಸಿಸಿಐ! ಅಷ್ಟಕ್ಕೂ ನಡೆದಿದ್ದೇನು?
Image
ಕಷ್ಟದ ದಿನಗಳಲ್ಲಿ ಧೋನಿಯ ಕೈ ಹಿಡಿದಿದ್ರು ನಮ್ಮ ರೆಬೆಲ್​ಸ್ಟಾರ್; ಫೋಟೋ ಮೂಲಕ ಘಟನೆ ಸ್ಮರಿಸಿದ ಸುಮಲತಾ
Image
ಚೆಸ್ ವಿಶ್ವಕಪ್​ನಲ್ಲಿ ರನ್ನರ್​ಅಪ್ ಆದ ಪ್ರಜ್ಞಾನಂದಗೆ ಸಿಕ್ಕ ಒಟ್ಟು ಹಣವೆಷ್ಟು ಗೊತ್ತೇ?
Image
Asian Games 2023: ಏಷ್ಯನ್ ಗೇಮ್ಸ್‌ಗೆ ಪಾಕ್ ತಂಡ ಪ್ರಕಟ; 20 ವರ್ಷದ ಆಲ್‌ರೌಂಡರ್‌ಗೆ ನಾಯಕತ್ವ..!

ಕೊಹ್ಲಿ ಬಳಿಕ ಇದೀಗ ನಾಯಕ ರೋಹಿತ್ ಶರ್ಮಾ ಹಾಗೂ ಉಪ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಯೋ-ಯೋ ಟೆಸ್ಟ್​ನಲ್ಲಿ ಪಾಸ್ ಆಗಿದ್ದಾರೆ. ಕೆಎಸ್‌ಸಿಎ-ಆಲೂರ್ ಮೈದಾನದಲ್ಲಿ ರೋಹಿತ್, ಹಾರ್ದಿಕ್ ಪರೀಕ್ಷೆಯಲ್ಲಿ ಭಾಗವಹಿಸಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. “ಪರೀಕ್ಷೆಗಳು ಯಶಸ್ವಿಯಾಗಿವೆ ಮತ್ತು ವರದಿಗಳನ್ನು ಶೀಘ್ರದಲ್ಲೇ ಬಿಸಿಸಿಐಗೆ ಕಳುಹಿಸಲಾಗುವುದು” ಎಂದು ಮೂಲಗಳು ಪಿಟಿಐಗೆ ತಿಳಿಸಿದೆ. ಆದರೆ, ಫಿಟ್‌ನೆಸ್‌ ಪ್ರಮುಖವಾಗಿರುವ ಕೆಎಲ್‌ ರಾಹುಲ್‌ ಇನ್ನೂ ಈ ಟೆಸ್ಟ್‌ನಲ್ಲಿ ಭಾಗವಹಿಸಿಲ್ಲ ಎಂದು ತಿಳಿದುಬಂದಿದೆ.

ಯೋ-ಯೋ ಟೆಸ್ಟ್ ಮಾತ್ರವಲ್ಲದೆ ಶಿಬಿರದಲ್ಲಿ ಲಿಪಿಡ್ ಪ್ರೊಫೈಲ್, ಬ್ಲಡ್ ಶುಗರ್, ಯೂರಿಕ್ ಆಸಿಡ್, ಕ್ಯಾಲ್ಸಿಯಂ, ವಿಟಮಿನ್ ಬಿ 12 ಮತ್ತು ಡಿ, ಕ್ರಿಯೇಟಿನೈನ್, ಟೆಸ್ಟೋಸ್ಟೆರಾನ್ ಮತ್ತು ಡೆಕ್ಸಾ ಪರೀಕ್ಷೆಗಳು ಸೇರಿದಂತೆ ಆಟಗಾರರನ್ನು ಅನೇಕ ರೀತಿಯಲ್ಲಿ ಪರಿಶೀಲಿಸಲಾಗುತ್ತದೆ. ಫಿಟ್‌ನೆಸ್ ಹೊರತಾಗಿ, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಮತ್ತು ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಮೂಲಕ ಮ್ಯಾಚ್ ಸಿಮ್ಯುಲೇಶನ್ ಸೆಷನ್ ಅನ್ನು ಸಹ ಏರ್ಪಡಿಸಲಾಗಿದೆ.

ಈ ಮೂಲಕ ರಾಹುಲ್ ದ್ರಾವಿಡ್ ಮತ್ತು ಟೀಮ್ ಇಂಡಿಯಾದ ಎಲ್ಲ ಆಟಗಾರರು ಎನ್​ಸಿಎನಲ್ಲಿ ತರಭೇತಿ ಆರಂಭಿಸಿದ್ದಾರೆ. ಏಷ್ಯಾಕಪ್​ಗೆ ಆಯ್ಕೆ ಆದ ಎಲ್ಲ ಆಟಗಾರರು ಇಲ್ಲಿ ಒಟ್ಟುಗೂಡಿದ್ದಾರೆ. ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ ಮತ್ತು ಜಸ್​ಪ್ರಿತ್ ಬುಮ್ರಾ ಐರ್ಲೆಂಡ್​ನಿಂದ ಹೊರಟು ಇಂದು ಅಥವಾ ನಾಳೆ ತಂಡ ಸೇರಿಕೊಳ್ಳಲಿದ್ದಾರೆ. ಏಷ್ಯಾಕಪ್ 2023 ತರಬೇತಿ ಶಿಬಿರವು ಆಗಸ್ಟ್ 29 ರವರೆಗೆ ಇರಲಿದೆ. ಭಾರತ ಆಗಸ್ಟ್ 30 ರಂದು ಕೊಲಂಬೋಕ್ಕೆ ತೆರಳಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ