AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಸತತ ಸೋಲುಗಳ ನಡುವೆ ದಾಖಲೆ ಬರೆದ ಹಿಟ್​ಮ್ಯಾನ್

IPL 2022: ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಆಸ್ಟ್ರೇಲಿಯಾದ ಆರೋನ್ ಫಿಂಚ್, ಪಾಕಿಸ್ತಾನದ ಶೋಯೆಬ್ ಮಲಿಕ್ ಮತ್ತು ವೆಸ್ಟ್ ಇಂಡೀಸ್‌ನ ಕೀರನ್ ಪೊಲಾರ್ಡ್ ಕೂಡ ಈ ಸಾಧನೆ ಮಾಡಿದ್ದಾರೆ.

Rohit Sharma: ಸತತ ಸೋಲುಗಳ ನಡುವೆ ದಾಖಲೆ ಬರೆದ ಹಿಟ್​ಮ್ಯಾನ್
Rohit Sharma
TV9 Web
| Edited By: |

Updated on: Apr 14, 2022 | 3:28 PM

Share

ಐಪಿಎಲ್​​ ಸೀಸನ್​ 15 ನಲ್ಲಿ ಮುಂಬೈ ಇಂಡಿಯನ್ಸ್ ಸತತ ಐದು ಸೋಲನುಭವಿಸಿದೆ. ಅದರಲ್ಲೂ ಪಂಜಾಬ್ ಕಿಂಗ್ಸ್ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ನಿರಾಸೆ ಮೂಡಿಸಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ 17 ಎಸೆತಗಳಲ್ಲಿ 28 ರನ್ ಬಾರಿಸಿದ್ದರು. ಇದರೊಂದಿಗೆ ವಿಶೇಷ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಿದೆ. ಹೌದು, ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ರೋಹಿತ್ ಶರ್ಮಾ 362 ಇನ್ನಿಂಗ್ಸ್‌ಗಳಲ್ಲಿ 10 ಸಾವಿರ ರನ್‌ಗಳನ್ನು ಪೂರೈಸಿದ್ದಾರೆ. ಇದೇ ವೇಳೆ ವಿರಾಟ್ ಕೊಹ್ಲಿ 299 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು. ಅಂದರೆ ಕೊಹ್ಲಿಗಿಂತ ಹಿಟ್​ಮ್ಯಾನ್ 63 ಇನ್ನಿಂಗ್ಸ್ ಹೆಚ್ಚು ತೆಗೆದುಕೊಂಡಿದ್ದರು. ಪಂಜಾಬ್ ಕಿಂಗ್ಸ್ ವೇಗಿ ಕಗಿಸೊ ರಬಾಡ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ರೋಹಿತ್ 10 ಸಾವಿರ ರನ್ ಪೂರೈಸಿದರು. ಆದರೆ, ಮುಂದಿನ ಎಸೆತದಲ್ಲಿ ಔಟಾಗಿ ನಿರಾಸೆ ಮೂಡಿಸಿದರು. ಈ ಬಾರಿಯ ಐಪಿಎಲ್​ನ 5 ಪಂದ್ಯಗಳಲ್ಲಿ ರೋಹಿತ್ ಶರ್ಮಾ ಒಂದೇ ಒಂದು ಅರ್ಧಶತಕ ಗಳಿಸಲು ಸಾಧ್ಯವಾಗಿಲ್ಲ.

ಇನ್ನು ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 10 ಸಾವಿರ ರನ್ ಪೂರೈಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 285 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇನ್ನು ರೋಹಿತ್ ಶರ್ಮಾ ಟಿ20ಯಲ್ಲಿ 10,000 ರನ್ ಗಳಿಸಿದ ವಿಶ್ವದ 7ನೇ ಆಟಗಾರ. ಇದಕ್ಕೂ ಮೊದಲು ಕ್ರಿಸ್ ಗೇಲ್, ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಆಸ್ಟ್ರೇಲಿಯಾದ ಆರೋನ್ ಫಿಂಚ್, ಪಾಕಿಸ್ತಾನದ ಶೋಯೆಬ್ ಮಲಿಕ್ ಮತ್ತು ವೆಸ್ಟ್ ಇಂಡೀಸ್‌ನ ಕೀರನ್ ಪೊಲಾರ್ಡ್ ಕೂಡ ಈ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

(Rohit Sharma Becomes Second Indian to Record 10,000 Runs in T20)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?