AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: 2 ಟೂರ್ನಿಗಳ ಬಳಿಕ ರೋಹಿತ್ ಶರ್ಮಾ ನಿವೃತ್ತಿ?

ವೆಸ್ಟ್ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಏಕದಿನ ಮತ್ತು ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ. ಅದರಂತೆ ಮುಂಬರುವ ಎರಡು ಐಸಿಸಿ ಟೂರ್ನಿಗಳಲ್ಲಿ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.

Rohit Sharma: 2 ಟೂರ್ನಿಗಳ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
Rohit Sharma
ಝಾಹಿರ್ ಯೂಸುಫ್
|

Updated on:Jul 02, 2024 | 1:05 PM

Share

17 ವರ್ಷಗಳ ಬಳಿಕ ಭಾರತ ತಂಡಕ್ಕೆ ಟಿ20 ವಿಶ್ವಕಪ್ ಗೆದ್ದುಕೊಟ್ಟ ನಾಯಕ ರೋಹಿತ್ ಶರ್ಮಾ (Rohit Sharma) ಇನ್ನೊಂದು ವರ್ಷ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಹಿಟ್​ಮ್ಯಾನ್ ಅವರನ್ನು 2025 ರವರೆಗೆ ನಾಯಕನಾಗಿ ಮುಂದುವರೆಸಲು ಬಿಸಿಸಿಐ ಇಚ್ಛಿಸಿದೆ ಎಂದು ತಿಳಿದು ಬಂದಿದೆ. ಅದರಂತೆ ರೋಹಿತ್ ಶರ್ಮಾ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ 2025 ರಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಎರಡು ಟೂರ್ನಿಗಳ ಬಳಿಕ ಅವರು ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

ಟಿ20 ಕ್ರಿಕೆಟ್​ಗೆ ನಿವೃತ್ತಿ:

ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಕಾರಣ ಮುಂಬರುವ ಸರಣಿಗಳಲ್ಲಿ ಭಾರತ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಇಲ್ಲಿ ಟೀಮ್ ಇಂಡಿಯಾ ನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಏಕೆಂದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಈ ಹಿಂದೆ ಭಾರತ ತಂಡವನ್ನು ಪಾಂಡ್ಯ ಮುನ್ನಡೆಸಿದ್ದರು. ಹೀಗಾಗಿ ಟಿ20 ತಂಡಕ್ಕೆ ಹಾರ್ದಿಕ್ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಬಹುದು.

ಚಾಂಪಿಯನ್ಸ್ ಟ್ರೋಫಿ 2025:

ಬಹುನಿರೀಕ್ಷಿತ ಚಾಂಪಿಯನ್ಸ್​ ಟ್ರೋಫಿ ಟೂರ್ನಿಗೆ ತಾತ್ಕಾಲಿಕ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮುಂದಿನ ವರ್ಷ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಏಕದಿನ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತ ತಂಡ ಪಾಲ್ಗೊಳ್ಳಲಿದೆಯಾ ಎಂಬುದೇ ಪ್ರಶ್ನೆ.

ಏಕೆಂದರೆ ಈ ಟೂರ್ನಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆತಿಥ್ಯವಹಿಸುತ್ತಿದ್ದು, ಪಂದ್ಯಾವಳಿಗಾಗಿ ಲಾಹೋರ್, ಕರಾಚಿ ಹಾಗೂ ರಾವಲ್ಪಿಂಡಿ ಸ್ಟೇಡಿಯಂಗಳನ್ನು ಹೆಸರಿಸಿದೆ. ಆದರೆ 2006 ರ ಬಳಿಕ ಭಾರತ ತಂಡವು ಪಾಕಿಸ್ತಾನಕ್ಕೆ ತೆರಳಿಲ್ಲ. ಆದರೆ ಮುಂದಿನ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲಿರುವುದರಿಂದ ಇದೀಗ ಭಾರತ ತಂಡ ಪಾಕ್​ಗೆ ತೆರೆಳಲಿದೆಯಾ ಎಂಬುದೇ ಕುತೂಹಲ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್:

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯವು ಜೂನ್ 1 ರಂದು ಲಾರ್ಡ್ಸ್​ ಮೈದಾನದಲ್ಲಿ ಶುರುವಾಗಲಿದೆ. WTC ಅಂಕ ಪಟ್ಟಿಯಲ್ಲಿ ಶೇ. 68.51 ರಷ್ಟು ಗೆಲುವಿನ ಪರ್ಸೆಂಟೇಜ್​ನೊಂದಿಗೆ ಅಗ್ರಸ್ಥಾನದಲ್ಲಿರುವ ಭಾರತ ತಂಡವು ಫೈನಲ್​ನಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು. ಇನ್ನು ದ್ವಿತೀಯ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದ್ದರೆ, ತೃತೀಯ ಸ್ಥಾನದಲ್ಲಿ ನ್ಯೂಝಿಲೆಂಡ್ ತಂಡವಿದೆ. ಹಾಗೆಯೇ 4ನೇ ಸ್ಥಾನದಲ್ಲಿರುವ ಶ್ರೀಲಂಕಾ ಕೂಡ ಫೈನಲ್ ರೇಸ್​ನಲ್ಲಿದೆ.

ಇದನ್ನೂ ಓದಿ: Shoaib Akhtar: ಭಗವದ್ಗೀತೆ ಶ್ಲೋಕ ಹಂಚಿಕೊಂಡ ಶೊಯೇಬ್ ಅಖ್ತರ್

2 ಟೂರ್ನಿಗಳ ಬಳಿಕ ನಿವೃತ್ತಿ:

ಟೀಮ್ ಇಂಡಿಯಾ ಮುಂದಿರುವ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಗಳ ಬಳಿಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ರೋಹಿತ್ ಶರ್ಮಾ ಅವರ ಪ್ರಸ್ತುತ ವಯಸ್ಸು 37 ವರ್ಷಗಳು. ಇದೀಗ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿರುವ ಕಾರಣ ಅವರನ್ನು ಮುಂದಿನ ವರ್ಷದವರೆಗೆ ನಾಯಕನಾಗಿ ಮುಂದುವರೆಸಬಹುದು. ಅದರಂತೆ 2025ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಬಳಿಕ ರೋಹಿತ್ ಶರ್ಮಾ ಇಂಟರ್​ನ್ಯಾಷನಲ್​ ಕ್ರಿಕೆಟ್​ ಕೆರಿಯರ್​ಗೆ ವಿದಾಯ ಹೇಳುವ ಸಾಧ್ಯತೆ ಹೆಚ್ಚಿದೆ.

Published On - 1:30 pm, Mon, 1 July 24

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!