AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ನೀತಾ ಅಂಬಾನಿ ಜೊತೆ ರೋಹಿತ್ ಶರ್ಮಾ ಸುದೀರ್ಘ ಮಾತುಕತೆ: ಆರ್​ಸಿಬಿ ಸೇರುವುದು ಬಹುತೇಕ ಖಚಿತ?

Rohit Sharma and Nita Ambani ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತ ನಂತರ ರೋಹಿತ್ ಶರ್ಮಾ ಮತ್ತು ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಮಾತನಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

IPL 2024: ನೀತಾ ಅಂಬಾನಿ ಜೊತೆ ರೋಹಿತ್ ಶರ್ಮಾ ಸುದೀರ್ಘ ಮಾತುಕತೆ: ಆರ್​ಸಿಬಿ ಸೇರುವುದು ಬಹುತೇಕ ಖಚಿತ?
Rohit Sharma and Nita Ambani
Vinay Bhat
|

Updated on: May 20, 2024 | 8:10 AM

Share

ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ (Mumbai Indians) ತಂಡ ಐಪಿಎಲ್ 2024 ರಿಂದ ಹೊರಬಿದ್ದ ಮೊದಲ ತಂಡವಾಯಿತು. 14 ಪಂದ್ಯಗಳ ನಂತರ ತಂಡವು ಕೇವಲ ನಾಲ್ಕು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಕೂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಟೂರ್ನಿ ಆರಂಭಕ್ಕೂ ಮುನ್ನ ಮುಂಬೈ ತಂಡವು ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಅವರನ್ನು ನಾಯಕನನ್ನಾಗಿ ಘೋಷಿಸಿತು. ಇಲ್ಲಿ ರೋಹಿತ್ ನಾಯಕತ್ವವನ್ನು ಬಿಟ್ಟುಕೊಟ್ಟಿರಲಿಲ್ಲ, ಬದಲಾಗಿ ಫ್ರಾಂಚೈಸ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹೊಸ ನಾಯಕ ಹಾರ್ದಿಕ್ ಎಂದು ಘೋಷಿಸಿತು.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತ ನಂತರ ರೋಹಿತ್ ಶರ್ಮಾ ಮತ್ತು ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಮಾತನಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಂದ್ಯ ಮುಗಿದ ನಂತರ ಇಬ್ಬರೂ ವಾಂಖೆಡೆ ಸ್ಟೇಡಿಯಂನಲ್ಲಿಯೇ ಸುದೀರ್ಘ ಚರ್ಚೆ ನಡೆಸಿದ್ದಾರೆ. ಅವರಿಬ್ಬರ ಮಾತಿನ ರೀತಿ ಹಾಗೂ ಮುಖಭಾವದಿಂದ ಗಂಭೀರ ಮಾತುಕತೆ ನಡೆಯುತ್ತಿರುವುದು ತಿಳಿಯುತ್ತಿದೆ.

ಪ್ಲೇ ಆಫ್ ಪಂದ್ಯಗಳಿಗೆ ವೇದಿಕೆ ಸಜ್ಜು: ಎಲಿಮಿನೇಟರ್​ನಲ್ಲಿ ಆರ್​ಸಿಬಿಗೆ ಈ ತಂಡ ಎದುರಾಳಿ

ನೀತಾ ಅಂಬಾನಿ ಮತ್ತು ರೋಹಿತ್ ನಡುವಿನ ಮಾತುಕತೆಯ ವಿಡಿಯೋ:

ಐಪಿಎಲ್ 2024 ಹರಾಜಿನ ಮೊದಲು, ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್‌ನಿಂದ ಹೊರಬಂದು ಮುಂಬೈ ಇಂಡಿಯನ್ಸ್‌ಗೆ ಸೇರಿದರು. ಕೆಲವು ದಿನಗಳ ನಂತರ ಹಾರ್ದಿಕ್ ಅವರನ್ನು ನಾಯಕನನ್ನಾಗಿ ಮಾಡುವುದಾಗಿ ಘೋಷಿಸಲಾಯಿತು. ಫ್ರಾಂಚೈಸಿಯ ಈ ನಿರ್ಧಾರದಿಂದ ರೋಹಿತ್ ಶರ್ಮಾ ತುಂಬಾ ಕೋಪಗೊಂಡಿದ್ದಾರೆ ಎನ್ನಲಾಗಿದೆ. ಅವರ ಪತ್ನಿ ರಿತಿಕಾ ಕೂಡ ಹಲವು ಪೋಸ್ಟ್‌ಗಳಿಗೆ ಕಾಮೆಂಟ್ ಮಾಡಿದ್ದರು. ಈ ನಿರ್ಧಾರದಿಂದ ರೋಹಿತ್ ಸಂತೋಷವಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಆದರೆ, ರೋಹಿತ್ ಒಮ್ಮೆಯೂ ಈ ಬಗ್ಗೆ ಬಹಿರಂಗವಾಗಿ ಮಾತನಾಡಿರಲಿಲ್ಲ.

ಆರ್​ಸಿಬಿ ಪ್ಲೇ ಆಫ್​ಗೇರಲು ಕಾರಣವಾಗಿದ್ದೇ ಧೋನಿ ಸಿಡಿಸಿದ ಆ 110 ಮೀ. ಸಿಕ್ಸ್: ಹೇಗೆ ಗೊತ್ತೇ?

ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಆಟಗಾರರನ್ನು ಉಳಿಸಿಕೊಳ್ಳುವ ನಿಯಮಗಳು ಇನ್ನೂ ಬಂದಿಲ್ಲ. ಆದರೆ ವರದಿಗಳ ಪ್ರಕಾರ, ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್‌ನಲ್ಲಿ ಉಳಿಯಲು ಇಷ್ಟವಿಲ್ಲವಂತೆ. ಹೀಗಾಗಿ ಅಭಿಮಾನಿಗಳು ರೋಹಿತ್ ಅವರು ಆರ್​ಸಿಬಿ ಸೇರಲಿದ್ದಾರೆ ಎಂದು ಹೇಳುತ್ತಿದ್ದಾರೆ. ಐಪಿಎಲ್ ಆರಂಭವಾದ ಮೊದಲ 5 ಸೀಸನ್‌ಗಳಲ್ಲಿ ಮುಂಬೈಗೆ ಒಮ್ಮೆಯೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಬಳಿಕ ರೋಹಿತ್ ನಾಯಕತ್ವದಲ್ಲಿ ತಂಡವು 5 ಬಾರಿ ಚಾಂಪಿಯನ್ ಆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ