Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ನೀತಾ ಅಂಬಾನಿ ಜೊತೆ ರೋಹಿತ್ ಶರ್ಮಾ ಸುದೀರ್ಘ ಮಾತುಕತೆ: ಆರ್​ಸಿಬಿ ಸೇರುವುದು ಬಹುತೇಕ ಖಚಿತ?

Rohit Sharma and Nita Ambani ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತ ನಂತರ ರೋಹಿತ್ ಶರ್ಮಾ ಮತ್ತು ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಮಾತನಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

IPL 2024: ನೀತಾ ಅಂಬಾನಿ ಜೊತೆ ರೋಹಿತ್ ಶರ್ಮಾ ಸುದೀರ್ಘ ಮಾತುಕತೆ: ಆರ್​ಸಿಬಿ ಸೇರುವುದು ಬಹುತೇಕ ಖಚಿತ?
Rohit Sharma and Nita Ambani
Follow us
Vinay Bhat
|

Updated on: May 20, 2024 | 8:10 AM

ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ (Mumbai Indians) ತಂಡ ಐಪಿಎಲ್ 2024 ರಿಂದ ಹೊರಬಿದ್ದ ಮೊದಲ ತಂಡವಾಯಿತು. 14 ಪಂದ್ಯಗಳ ನಂತರ ತಂಡವು ಕೇವಲ ನಾಲ್ಕು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಕೂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಟೂರ್ನಿ ಆರಂಭಕ್ಕೂ ಮುನ್ನ ಮುಂಬೈ ತಂಡವು ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಅವರನ್ನು ನಾಯಕನನ್ನಾಗಿ ಘೋಷಿಸಿತು. ಇಲ್ಲಿ ರೋಹಿತ್ ನಾಯಕತ್ವವನ್ನು ಬಿಟ್ಟುಕೊಟ್ಟಿರಲಿಲ್ಲ, ಬದಲಾಗಿ ಫ್ರಾಂಚೈಸ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹೊಸ ನಾಯಕ ಹಾರ್ದಿಕ್ ಎಂದು ಘೋಷಿಸಿತು.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತ ನಂತರ ರೋಹಿತ್ ಶರ್ಮಾ ಮತ್ತು ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಮಾತನಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಂದ್ಯ ಮುಗಿದ ನಂತರ ಇಬ್ಬರೂ ವಾಂಖೆಡೆ ಸ್ಟೇಡಿಯಂನಲ್ಲಿಯೇ ಸುದೀರ್ಘ ಚರ್ಚೆ ನಡೆಸಿದ್ದಾರೆ. ಅವರಿಬ್ಬರ ಮಾತಿನ ರೀತಿ ಹಾಗೂ ಮುಖಭಾವದಿಂದ ಗಂಭೀರ ಮಾತುಕತೆ ನಡೆಯುತ್ತಿರುವುದು ತಿಳಿಯುತ್ತಿದೆ.

ಪ್ಲೇ ಆಫ್ ಪಂದ್ಯಗಳಿಗೆ ವೇದಿಕೆ ಸಜ್ಜು: ಎಲಿಮಿನೇಟರ್​ನಲ್ಲಿ ಆರ್​ಸಿಬಿಗೆ ಈ ತಂಡ ಎದುರಾಳಿ

ನೀತಾ ಅಂಬಾನಿ ಮತ್ತು ರೋಹಿತ್ ನಡುವಿನ ಮಾತುಕತೆಯ ವಿಡಿಯೋ:

ಐಪಿಎಲ್ 2024 ಹರಾಜಿನ ಮೊದಲು, ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್‌ನಿಂದ ಹೊರಬಂದು ಮುಂಬೈ ಇಂಡಿಯನ್ಸ್‌ಗೆ ಸೇರಿದರು. ಕೆಲವು ದಿನಗಳ ನಂತರ ಹಾರ್ದಿಕ್ ಅವರನ್ನು ನಾಯಕನನ್ನಾಗಿ ಮಾಡುವುದಾಗಿ ಘೋಷಿಸಲಾಯಿತು. ಫ್ರಾಂಚೈಸಿಯ ಈ ನಿರ್ಧಾರದಿಂದ ರೋಹಿತ್ ಶರ್ಮಾ ತುಂಬಾ ಕೋಪಗೊಂಡಿದ್ದಾರೆ ಎನ್ನಲಾಗಿದೆ. ಅವರ ಪತ್ನಿ ರಿತಿಕಾ ಕೂಡ ಹಲವು ಪೋಸ್ಟ್‌ಗಳಿಗೆ ಕಾಮೆಂಟ್ ಮಾಡಿದ್ದರು. ಈ ನಿರ್ಧಾರದಿಂದ ರೋಹಿತ್ ಸಂತೋಷವಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಆದರೆ, ರೋಹಿತ್ ಒಮ್ಮೆಯೂ ಈ ಬಗ್ಗೆ ಬಹಿರಂಗವಾಗಿ ಮಾತನಾಡಿರಲಿಲ್ಲ.

ಆರ್​ಸಿಬಿ ಪ್ಲೇ ಆಫ್​ಗೇರಲು ಕಾರಣವಾಗಿದ್ದೇ ಧೋನಿ ಸಿಡಿಸಿದ ಆ 110 ಮೀ. ಸಿಕ್ಸ್: ಹೇಗೆ ಗೊತ್ತೇ?

ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಆಟಗಾರರನ್ನು ಉಳಿಸಿಕೊಳ್ಳುವ ನಿಯಮಗಳು ಇನ್ನೂ ಬಂದಿಲ್ಲ. ಆದರೆ ವರದಿಗಳ ಪ್ರಕಾರ, ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್‌ನಲ್ಲಿ ಉಳಿಯಲು ಇಷ್ಟವಿಲ್ಲವಂತೆ. ಹೀಗಾಗಿ ಅಭಿಮಾನಿಗಳು ರೋಹಿತ್ ಅವರು ಆರ್​ಸಿಬಿ ಸೇರಲಿದ್ದಾರೆ ಎಂದು ಹೇಳುತ್ತಿದ್ದಾರೆ. ಐಪಿಎಲ್ ಆರಂಭವಾದ ಮೊದಲ 5 ಸೀಸನ್‌ಗಳಲ್ಲಿ ಮುಂಬೈಗೆ ಒಮ್ಮೆಯೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಬಳಿಕ ರೋಹಿತ್ ನಾಯಕತ್ವದಲ್ಲಿ ತಂಡವು 5 ಬಾರಿ ಚಾಂಪಿಯನ್ ಆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ