AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ಭರ್ತಿ 15 ವರ್ಷ; ಭಾವನಾತ್ಮಕ ಸಂದೇಶ ಪೋಸ್ಟ್ ಮಾಡಿದ ಹಿಟ್‌ಮ್ಯಾನ್

Rohit sharma: ಐಸಿಸಿ ವಿಶ್ವಕಪ್ 2011ರ ತಂಡದಲ್ಲಿ ರೋಹಿತ್ ಶರ್ಮಾ ಆಯ್ಕೆಯಾಗಿರಲಿಲ್ಲ. ರೋಹಿತ್ ಶರ್ಮಾ ಇದು ತಮ್ಮ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ ಎಂದು ಹೇಳಿಕೊಂಡಿದ್ದರು.

ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ಭರ್ತಿ 15 ವರ್ಷ; ಭಾವನಾತ್ಮಕ ಸಂದೇಶ ಪೋಸ್ಟ್ ಮಾಡಿದ ಹಿಟ್‌ಮ್ಯಾನ್
Rohit Sharma
TV9 Web
| Updated By: ಪೃಥ್ವಿಶಂಕರ|

Updated on:Jun 23, 2022 | 3:17 PM

Share

ಜೂನ್ 23, 2007…ಈ ದಿನಾಂಕ ರೋಹಿತ್ ಶರ್ಮಾ (Rohit Sharma) ಅವರ ಜೀವನದಲ್ಲಿ ಬಹಳಷ್ಟು ಪ್ರಾಮುಖ್ಯತೆಯನ್ನು ಹೊಂದಿದೆ. ಈ ದಿನ ರೋಹಿತ್ ಶರ್ಮಾ ಅವರ ಕನಸು ನನಸಾಗಿರುವುದು ವಿಶೇಷ. ರೋಹಿತ್ ಶರ್ಮಾ ಟೀಂ ಇಂಡಿಯಾ (Team India) ಪರ ಮೊದಲ ಪಂದ್ಯ ಆಡಿದ್ದು ಇದೇ ದಿನ. ಹಾಗಾಗಿ ಈ ದಿನ ರೋಹಿತ್ ಬದುಕಿನ ಅವಿಸ್ಮರಣೀಯ ದಿನವಾಗಿದೆ. ರೋಹಿತ್ ಶರ್ಮಾ ಈ ದಿನಾಂಕದಂದು ಬೆಲ್‌ಫಾಸ್ಟ್‌ನಲ್ಲಿ ಐರ್ಲೆಂಡ್ ವಿರುದ್ಧ ಮೊದಲ ಬಾರಿಗೆ ಟೀಮ್ ಇಂಡಿಯಾ ಜೆರ್ಸಿ ತೊಟ್ಟಿದ್ದರು. ಆದರೂ ಅವರಿಗೆ ಈ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇಂದಿಗೆ 15 ವರ್ಷಗಳನ್ನು ಪೂರೈಸಿದ್ದು, ಈ ಸಂದರ್ಭದಲ್ಲಿ ಈ ಹಿರಿಯ ಆಟಗಾರ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಈ ವಿಶೇಷ ದಿನದಂದು ರೋಹಿತ್ ಶರ್ಮಾ ತಮ್ಮ ಅಭಿಮಾನಿಗಳಿಗೆ ಹಾಗೂ ತನಗೆ ಸಹಾಯ ಮಾಡಿದ ಪ್ರತಿಯೊಬ್ಬ ವ್ಯಕ್ತಿಗೆ ಧನ್ಯವಾದ ಅರ್ಪಿಸಿದ್ದಾರೆ.

ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ, ನನ್ನ ನೆಚ್ಚಿನ ಜೆರ್ಸಿಯಲ್ಲಿ ನಾನು ಕ್ರಿಕೆಟ್ ಆಡಲು ಆರಂಭಿಸಿ ಇಂದಿಗೆ 15 ವರ್ಷ. ಇಂದು ನಾನು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನನ್ನ 15 ವರ್ಷಗಳನ್ನು ಪೂರೈಸಿದೆ. ಇದೇ ದಿನ ನಾನು ಭಾರತಕ್ಕೆ ಪಾದಾರ್ಪಣೆ ಮಾಡಿದೆ. ಎಂತಹ ಅದ್ಭುತವಾದ ಪ್ರಯಾಣವನ್ನು ನಾನು ನನ್ನ ಜೀವನದಲ್ಲಿ ಯಾವಾಗಲೂ ಪಾಲಿಸುತ್ತೇನೆ. ಈ ಪ್ರಯಾಣದ ಭಾಗವಾಗಿರುವ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಜೊತೆಗೆ ನಾನು ಉತ್ತಮ ಆಟಗಾರನಾಗಲು ಸಹಾಯ ಮಾಡಿದ ಎಲ್ಲರಿಗೂ ವಿಶೇಷ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
IND vs IRE: ಪಾಂಡ್ಯ ನಾಯಕತ್ವದಲ್ಲಿ ಐರ್ಲೆಂಡ್​ಗೆ ಹಾರಿದ ಭಾರತ; ಪ್ರವಾಸದ ಸಂಪೂರ್ಣ ವೇಳಾಪಟ್ಟಿ, ತಂಡಗಳು ಹೀಗಿವೆ
Image
IND vs ENG: ಆಂಗ್ಲರನ್ನು ಮಣಿಸಲು ಭಾರತ ಸಿದ್ಧ; ಜೂನ್ 23 ರಿಂದ ಅಭ್ಯಾಸ ಪಂದ್ಯ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

ಇದನ್ನೂ ಓದಿ:RR vs MI Highlights, IPL 2022: ರೋಹಿತ್ ಶರ್ಮಾಗೆ ಗೆಲುವಿನ ಗಿಫ್ಟ್; ಕೊನೆಗೂ ಗೆದ್ದ ಮುಂಬೈ..!

ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ವೃತ್ತಿಜೀವನ

ರೋಹಿತ್ ಶರ್ಮಾ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 230 ODI, 125 T20 ಮತ್ತು 45 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ರೋಹಿತ್ ಶರ್ಮಾ ಏಕದಿನದಲ್ಲಿ 29, ಟೆಸ್ಟ್‌ನಲ್ಲಿ 8 ಮತ್ತು ಟಿ20 ಕ್ರಿಕೆಟ್‌ನಲ್ಲಿ 4 ಶತಕಗಳನ್ನು ಗಳಿಸಿದ್ದಾರೆ.

ರೋಹಿತ್ ಶರ್ಮಾ ದಾಖಲೆಗಳು

ರೋಹಿತ್ ಶರ್ಮಾ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಮಾಡಿದ್ದಾರೆ. ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕಗಳನ್ನು ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆ ಹೊಂದಿದ್ದಾರೆ. 2014ರಲ್ಲಿ ಶ್ರೀಲಂಕಾ ವಿರುದ್ಧ ರೋಹಿತ್ 264 ರನ್‌ಗಳ ಇನಿಂಗ್ಸ್‌ ಆಡಿದ್ದರು. ಇದಲ್ಲದೇ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4 ಶತಕ ಸಿಡಿಸಿದ ಏಕೈಕ ಬ್ಯಾಟ್ಸ್‌ಮನ್. 2019ರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಐದು ಶತಕ ಸಿಡಿಸಿದ್ದರು. ಒಂದೇ ವಿಶ್ವಕಪ್‌ನಲ್ಲಿ ಐದು ಶತಕಗಳನ್ನು ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ರೋಹಿತ್. 2019 ರಲ್ಲಿ, ರೋಹಿತ್ ಶರ್ಮಾ ಆರಂಭಿಕರಾಗಿ ತಮ್ಮ ಮೊದಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದರು. ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ರೋಹಿತ್.

ರೋಹಿತ್ ಶರ್ಮಾ ವೃತ್ತಿಜೀವನದ ದೊಡ್ಡ ಆಘಾತ

ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಸಾಧಿಸಿದ್ದಾರೆ ಆದರೆ 2011 ವರ್ಷವು ಅವರಿಗೆ ಕೆಟ್ಟ ವರ್ಷವಾಗಿತ್ತು. ಐಸಿಸಿ ವಿಶ್ವಕಪ್ 2011ರ ತಂಡದಲ್ಲಿ ರೋಹಿತ್ ಶರ್ಮಾ ಆಯ್ಕೆಯಾಗಿರಲಿಲ್ಲ. ರೋಹಿತ್ ಶರ್ಮಾ ಇದು ತಮ್ಮ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ ಎಂದು ಹೇಳಿಕೊಂಡಿದ್ದರು. 2011ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗುವ ಹೆಗ್ಗಳಿಕೆಯನ್ನು ಸಾಧಿಸಿತ್ತು.

Published On - 3:17 pm, Thu, 23 June 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ