AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma Fan: ಪಂದ್ಯದ ಮಧ್ಯೆ ಪ್ರೇಕ್ಷಕ ಗ್ಯಾಲರಿಯಿಂದ ರೋಹಿತ್ ಶರ್ಮಾ ಬಳಿ ಓಡಿ ಬಂದ ಅಭಿಮಾನಿ: ಮುಂದೇನಾಯ್ತು?

India vs New Zealand T20: ರಾಂಚಿಯಲ್ಲಿ ನಡೆದ ಭಾರತ-ನ್ಯೂಜಿಲೆಂಡ್ ಎರಡನೇ ಟಿ20 ಪಂದ್ಯ ವೀಕ್ಷಿಸಲು ಸ್ಟೇಡಿಯಂ ಹೌಸ್ ಫುಲ್ ಆಗಿತ್ತು. ಹೀಗಿರುವಾಗ ಭಾರತ ಫೀಲ್ಡಿಂಗ್ ಮಾಡುತ್ತಿರುವಾಗ ಪ್ರೇಕ್ಷಕ ಗ್ಯಾಲರಿಯಿಂದ ಮೈದಾನದ ಒಳಗೆ ಪ್ರವೇಶಿಸಿದ ವ್ಯಕ್ತಿ ರೋಹಿತ್ ಶರ್ಮಾ ಬಳಿ ಓಡಿ ಬಂದಿದ್ದಾರೆ.

Rohit Sharma Fan: ಪಂದ್ಯದ ಮಧ್ಯೆ ಪ್ರೇಕ್ಷಕ ಗ್ಯಾಲರಿಯಿಂದ ರೋಹಿತ್ ಶರ್ಮಾ ಬಳಿ ಓಡಿ ಬಂದ ಅಭಿಮಾನಿ: ಮುಂದೇನಾಯ್ತು?
Rohit Sharma Fan
TV9 Web
| Edited By: |

Updated on:Nov 20, 2021 | 12:37 PM

Share

ರಾಂಚಿಯ ಜೆಎಸ್‌ಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಎರಡನೇ ಟಿ20 ಪಂದ್ಯದ ವೇಳೆ ಅಚ್ಚರಿಯ ಘಟನೆಯೊಂದು ನಡೆಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 7 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು. ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಉಪ ನಾಯಕ ಕೆಎಲ್ ರಾಹುಲ್ (KL Rahul) ಅವರ ಆಕರ್ಷಕ ಅರ್ಧಶತಕದ ಜೊತೆ ಸಂಘಟಿತ ಬೌಲಿಂಗ್ ಪ್ರದರ್ಶನದಿಂದ ಭಾರತ ಗೆದ್ದು ಬೀಗಿ ಟಿ20 ಸರಣಿಯನ್ನು (T20I Series) ವಶಪಡಿಸಕೊಂಡಿತು. ಇದರ ನಡುವೆ ಭಾರತದ ಫೀಲ್ಡಿಂಗ್ ಇನ್ನಿಂಗ್ಸ್ ವೇಳೆ ಮೈದಾನದ ಒಳಗೆ ಅಪರಿಚಿತ ವ್ಯಕ್ತಿ (Rohit Sharma Fan) ಎಂಟ್ರಿ ಕೊಟ್ಟ ಘಟನೆ ನಡೆದಿದೆ. ಇದರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ (Viral Video) ಆಗುತ್ತಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಟಿ20 ಸರಣಿ ವೀಕ್ಷಿಸಲು ಸ್ಟೇಡಿಯಂನಲ್ಲಿ ಶೇ. 100 ರಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರ ರಾಂಚಿಯಲ್ಲಿ ನಡೆದ ಪಂದ್ಯ ವೀಕ್ಷಿಸಲು ಸ್ಟೇಡಿಯಂ ಅಂತೂ ಹೌಸ್ ಫುಲ್ ಆಗಿತ್ತು. ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿತು. ಹೀಗಿರುವಾಗ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಮಾಡುತ್ತಿರುವಾಗ ಪ್ರೇಕ್ಷಕ ಗ್ಯಾಲರಿಯ ಮೂಲೆಯಿಂದ ಮೈದಾನದ ಒಳಗೆ ಪ್ರವೇಶಿಸಿದ ಅಪರಿಚಿತ ವ್ಯಕ್ತಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಳಿ ಓಡಿ ಬಂದಿದ್ದಾರೆ. ಸೆಕ್ಯೂರಿಟಿ ಸಿಬ್ಬಂದಿ ಅಲ್ಲಿದ್ದರೂ ಅವರ ಕಣ್ಣು ತಪ್ಪಿಸಿ ಅಭಿಮಾನಿ ಓಡಿಕೊಂಡು ಬಂದಿದ್ದಾರೆ.

ರೋಹಿತ್ ಶರ್ಮಾ ಬಳಿ ಬಂದು ಅಲ್ಲೇ ಅಡ್ಡ ಬಿಂದು ಸಮಸ್ಕರಿಸಿದ್ದಾರೆ. ರೋಹಿತ್ ಪಾದಸ್ಪರ್ಶಕ್ಕಾಗಿ ಇವರು ಕಾದುಕುಳಿತಿದ್ದರಂತೆ. ರೋಹಿತ್ ಫೀಲ್ಡಿಂಗ್ ಅಥವಾ ಬ್ಯಾಟಿಂಗ್ ಮಾಡುವಾಗ ಅಭಿಮಾನಿಗಳು ಮೈದಾನದ ಒಳಗೇ ಪ್ರವೇಶಿಸಿ ಅವರ ಬಳಿ ಬಂದಿರುವುದು ಇದೇ ಮೊದಲ ಬಾರಿಯೇನಲ್ಲ. ಈ ಹಿಂದೆ ಅನೇಕ ಬಾರಿ ಈರೀತಿಯ ಘಟನೆಗಳು ಸಂಭವಿಸಿವೆ.

ಎರಡನೇ ಟಿ20 ಪಂದ್ಯದಲ್ಲಿ ಆಲ್‌ರೌಂಡ್‌ ಆಟವಾಡಿದ ಟೀಮ್ ಇಂಡಿಯಾ ಪ್ರವಾಸಿ ನ್ಯೂಜಿಲೆಂಡ್‌ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಮೂಲಕ 3 ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಾಗಲೇ ವಶಪಡಿಸಿಕೊಂಡಿದೆ. ಪಂದ್ಯದಲ್ಲಿ ಗೆಲುವಿಗೆ 154 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ್ದ ಭಾರತ ತಂಡಕ್ಕೆ ಮೊದಲ ವಿಕೆಟ್‌ಗೆ ಆರಂಭಿಕರಾದ ರೋಹಿತ್‌ ಶರ್ಮಾ (55) ಮತ್ತು ಕೆಎಲ್‌ ರಾಹುಲ್‌ 117 ರನ್‌ಗಳ ಭರ್ಜರಿ ಜೊತೆಯಾಟದ ಮೂಲಕ ಅಡಿಪಾಯ ಹಾಕಿಕೊಟ್ಟರು. 18ನೇ ಓವರ್‌ನಲ್ಲಿ ಬ್ಯಾಕ್‌ ಟು ಬ್ಯಾಕ್‌ ಸಿಕ್ಸರ್‌ ಸಿಡಿಸಿದ ರಿಷಭ್‌ ಪಂತ್‌ (12*) ತಂಡವನ್ನು ಜಯದ ದಡ ಮುಟ್ಟಿಸಿದರು.

Rohit Sharma Records: ಒಂದಲ್ಲ ಎರಡಲ್ಲ ಬರೋಬ್ಬರಿ 3 ದಾಖಲೆ ಬರೆದ ರೋಹಿತ್ ಶರ್ಮಾ: ಹಿಟ್​ಮ್ಯಾನ್ ನೂತನ ರೆಕಾರ್ಡ್ ಏನು?

Harshal Patel: ಪದಾರ್ಪಣೆ ಪಂದ್ಯದಲ್ಲೇ ಪಂದ್ಯಶ್ರೇಷ್ಠ ಸ್ವೀಕರಿಸುವಾಗ ಹರ್ಷಲ್ ಪಟೇಲ್ ಹೇಳಿದ್ದೇನು ಗೊತ್ತಾ?

(fan jumped between India and New Zealand and tried to touch Rohit Sharma feet Viral Video)

Published On - 12:36 pm, Sat, 20 November 21

ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ