AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಶಾಕಿಂಗ್ ನ್ಯೂಸ್: ಇನ್ನೆರಡು ದಿನಗಳಲ್ಲಿ ಟೀಮ್ ಇಂಡಿಯಾ ಏಕದಿನ-ಟಿ20ಗೆ ಹೊಸ ನಾಯಕನ ಘೋಷಣೆ

India’s White-Ball Captain: ಬಿಸಿಸಿಐ ಇನ್ನೆರಡು ದಿನಗಳಲ್ಲಿ ಸಭೆ ಸೇರಲಿದೆಯಂತೆ. ಈ ಸಂದರ್ಭ ಟೀಮ್ ಇಂಡಿಯಾ ಏಕದಿನ ಮತ್ತು ಟಿ20 ಕ್ರಿಕೆಟ್​ಗೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ಆಯ್ಕೆ ಮಾಡಲಿದ್ದು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Rohit Sharma: ಶಾಕಿಂಗ್ ನ್ಯೂಸ್: ಇನ್ನೆರಡು ದಿನಗಳಲ್ಲಿ ಟೀಮ್ ಇಂಡಿಯಾ ಏಕದಿನ-ಟಿ20ಗೆ ಹೊಸ ನಾಯಕನ ಘೋಷಣೆ
India’s T20 ODI New Captain
TV9 Web
| Edited By: |

Updated on: Nov 02, 2021 | 11:07 AM

Share

ಕ್ರಿಕೆಟ್ (Cricket) ವಲಯದಲ್ಲಿ ಅಚ್ಚರಿ ಎಂಬಂತ ಬೆಳವಣಿಗೆ ನಡೆಯುತ್ತಿದ್ದು ಇನ್ನು ಎರಡು ದಿನಗಳ ಒಳಗೆ ಭಾರತೀಯ ಕ್ರಿಕೆಟ್​ನ (Indian Cricket Team) ಏಕದಿನ ಮತ್ತು ಟಿ20 ತಂಡಕ್ಕೆ ಹೊಸ ನಾಯಕನ ಘೋಷಣೆ ಆಗಲಿದೆಯಂತೆ (India’s T20 AND ODI Captain). ಈ ಬಗ್ಗೆ ಬಿಸಿಸಿಐ (BCCI) ಮೂಲಗಳು ಮಾಹಿತಿ ನೀಡಿವೆ. ಚುಟುಕು ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ (Virat Kohli) ನಾಯಕತ್ವದ ಅವಧಿ ಟಿ20 ವಿಶ್ವಕಪ್ (T20 World Cup)​ ಮುಗಿದ ಬೆನ್ನಲ್ಲೇ ಅಂತ್ಯಗೊಳ್ಳಲಿದೆ. ಏಕದಿನ ಕ್ರಿಕೆಟ್​ಗೆ ಕೊಹ್ಲಿಯೇ ನಾಯಕನಾಗಿ ಇರುತ್ತಾರೆ ಎನ್ನಲಾಗಿತ್ತು. ಆದರೆ, ಸದ್ಯದ ಮಾಹಿತಿಯ ಪ್ರಕಾರ ಕೊಹ್ಲಿ ಏಕದಿನ ಕ್ರಿಕೆಟ್​ ನಾಯಕತ್ವದಿಂದಲೂ ಹಿಂದೆ ಸರಿಯಲಿದ್ದಾರಂತೆ. ರೋಹಿತ್ ಶರ್ಮಾ (Rohit Sharma) ಅವರು ಏಕದಿನ ಮತ್ತು ಟಿ20 ಎರಡೂ ಮಾದರಿಯ ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಟಿ20 ವಿಶ್ವಕಪ್ ಮುಗಿದ ಬಳಿಕ ನ. 17 ರಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಈ ಸರಣಿಗೆ ಆಟಗಾರರ ಆಯ್ಕೆಗಾಗಿ ಬಿಸಿಸಿಐ ಇನ್ನೆರಡು ದಿನಗಳಲ್ಲಿ ಸಭೆ ಕರೆದಿದೆ. ಈ ಸಂದರ್ಭ ಟೀಮ್ ಇಂಡಿಯಾ ಏಕದಿನ ಮತ್ತು ಟಿ20 ಕ್ರಿಕೆಟ್​ಗೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಲಿದೆಯಂತೆ.

‘ಏಕದಿನ ಮತ್ತು ಟಿ20 ಕ್ರಿಕೆಟ್​ಗೆ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿಸುವ ಸಾಧ್ಯತೆ ಇದೆ. ತಂಡದ ಒಟ್ಟಾರೆ ಬೆಳವಣಿಗೆಗೂ ಇದು ಸಹಕಾರಿಯಾಗಲಿದೆ. ಮುಂದಿನ ದಿನದಲ್ಲಿ ಸಭೆ ನಡೆಯಲಿದ್ದು ಈ ವಿಚಾರದ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಬಹಿರಂಗ ಪಡಿಸಿದ್ದಾರೆ.

‘ಮೂರು ಮಾದರಿಯ ಕ್ರಿಕೆಟ್​ಗೆ ಮೂರು ನಾಯಕರಿದ್ದರೆ ಗೊಂದಲಗಳು ಉಂಟಾಗುತ್ತಿದೆ. ಟಿ20 ಮತ್ತು ಏಕದಿನ ದಿನಕ್ಕೆ ಒಬ್ಬರೆ ನಾಯಕನಾಗಬೇಕು, ಇದಕ್ಕೆ ರೋಹಿತ್ ಶರ್ಮಾ ಉತ್ತಮ ಆಯ್ಕೆ. ಅಂತಿಮ ನಿರ್ಧಾರವನ್ನು ಮುಂದಿನ ಸಭೆಯಲ್ಲಿ ತೆಗೆದುಕೊಳ್ಳುತ್ತೇವೆ. ನಾವು ಏನೆ ನಿರ್ಧಾರ ತೆಗೆದುಕೊಂಡರು ಅದು ಭಾರತ ತಂಡದ ಭವಿಷ್ಯಕ್ಕಾಗಿ, ಒಳಿತಿಗಾಗಿ’ ಎಂದು ಹೇಳಿದ್ದಾರೆ.

ಚುಟುಕು ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಅವರು, ಭಾರತ ಟಿ-20 ಕ್ರಿಕೆಟ್​ನಿಂದ ಟಿ-20 ವಿಶ್ವಕಪ್ ಬಳಿಕ ನಾಯಕತ್ವ ತ್ಯಜಿಸುವುದಾಗಿ ಘೋಷಣೆ ಮಾಡಿದ್ದರು. ನಾಯಕತ್ವ ಬಿಟ್ಟುಕೊಟ್ಟು ಬ್ಯಾಟ್ಸ್​ಮನ್​ ಆಗಿ ಮುಂದುವರೆಯುತ್ತೇನೆ. ಭಾರತೀಯ ಕ್ರಿಕೆಟ್ ತಂಡದ ನಾಯಕನಾಗಿ ನನ್ನ ಪಯಣದಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದು ಕೊಹ್ಲಿ ಹೇಳಿದ್ದರು.

ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಕೊಹ್ಲಿಯ ನಂತರ ಭಾರತ ಟಿ-20 ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಲಿದ್ದಾರೆ. ಇದರ ಜೊತೆಗೆ ಏಕದಿನಕ್ಕೂ ನಾಯಕನಾಗಲಿದ್ದಾರೆ. ಸದ್ಯ ವೈಟ್ ಬಾಲ್ ಕ್ರಿಕೆಟ್​ನ ಉಪ ನಾಯಕನಾಗಿರುವ ಹಿಟ್​ಮ್ಯಾನ್ ನಾಯಕತ್ವದ ಜವಾಬ್ದಾರಿ ಹೊರಲಿದ್ದಾರೆ. ಉಪ ನಾಯಕನ ಪಟ್ಟ ಕೆ. ಎಲ್ ರಾಹುಲ್​ಗೆ ನೀಡಲಿದ್ದಾರೆ ಎಂಬ ಮಾತುಗಳು ಕೂಡ ಇದೆ.

MS Dhoni: ಎಂ ಎಸ್ ಧೋನಿ ಹಾಗೂ ರವಿ ಶಾಸ್ತ್ರಿ ನಡುವೆ ಬಿರುಕು?: ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

SA vs BAN, T20 WC: ಟಿ20 ವಿಶ್ವಕಪ್​ನಲ್ಲಿಂದು ಎರಡು ಪಂದ್ಯ: ಸೆಮೀಸ್​ನತ್ತ ಪಾಕ್ ಚಿತ್ತ: ದಕ್ಷಿಣ ಆಫ್ರಿಕಾಕ್ಕೆ ಗೆದ್ದರಷ್ಟೇ ಉಳಿಗಾಲ

(Rohit Sharma frontrunner as BCCI expected to announce Team India T20 and ODI skipper in two days)

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್