Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup: ಕ್ಯಾಪ್ಟನ್ಸಿ ಡೇಯಲ್ಲಿ ಗರಂ ಆದ ರೋಹಿತ್: ವರದಿಗಾರರ ಪ್ರಶ್ನೆಗೆ ಹಿಟ್​ಮ್ಯಾನ್ ಖಡಕ್ ಉತ್ತರ

Rohit Sharma in captain's day roundtable program: ಕ್ಯಾಪ್ಟನ್ಸಿ ಡೇ ಎಂಬ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾ ಅವರಿಗೆ, ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ 2019 ರ ವಿಶ್ವಕಪ್ ಫೈನಲ್‌ನ ಕುರಿತು ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಹಿಟ್​ಮ್ಯಾನ ಖಡಕ್ ಆಗಿ ಉತ್ತರವನ್ನು ನೀಡಿದರು. 2019ರ ವಿಶ್ವಕಪ್ ಫೈನಲ್​ನಲ್ಲಿ ಗೆಲುವು ಕಾಣದಿದ್ದಾಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಬೇಕೇ? ಎಂದು ವರದಿಗಾರರು ಪ್ರಶ್ನಿಸಿದ್ದರು.

ICC World Cup: ಕ್ಯಾಪ್ಟನ್ಸಿ ಡೇಯಲ್ಲಿ ಗರಂ ಆದ ರೋಹಿತ್: ವರದಿಗಾರರ ಪ್ರಶ್ನೆಗೆ ಹಿಟ್​ಮ್ಯಾನ್ ಖಡಕ್ ಉತ್ತರ
Rohit Sharma captain's day
Follow us
Vinay Bhat
|

Updated on: Oct 05, 2023 | 9:47 AM

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ (ICC World Cup) ಇಂದು ಚಾಲನೆ ಸಿಗಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 2019 ವಿಶ್ವಕಪ್ ಫೈನಲಿಸ್ಟ್​ಗಳಾದ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ಮುಖಾಮುಖಿ ಆಗಲಿದೆ. ಇದಕ್ಕೂ ಮುನ್ನ ನಿನ್ನೆ (ಅ. 4) ಎಲ್ಲ ನಾಯಕರನ್ನು ಒಟ್ಟುಗೂಡಿಸಿ ಕ್ಯಾಪ್ಟನ್ಸಿ ಡೇ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪತ್ರಕರ್ತರು ಕೂಡ ಹಾಜರಿದ್ದು, ಎಲ್ಲ ತಂಡಗಳ ನಾಯಕರಿಗೆ ಪ್ರಶ್ನೆಗಳನ್ನು ಕೇಳಲಾಯಿತು. ಈ ಸಂದರ್ಭ ಒಂದು ಪ್ರಶ್ನೆಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನೀಡಿದ ಉತ್ತರ ಎಲ್ಲಡೆ ವೈರಲ್ ಆಗುತ್ತಿದೆ.

ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ 2019 ರ ವಿಶ್ವಕಪ್ ಫೈನಲ್‌ನ ಕುರಿತು ಕೇಳಿದ ಪ್ರಶ್ನೆಗೆ ರೋಹಿತ್ ಶರ್ಮಾ ಅವರು ಪತ್ರಕರ್ತರಿಗೆ ಖಡಕ್ ಆಗಿ ಉತ್ತರವನ್ನು ನೀಡಿದರು. 2019ರ ವಿಶ್ವಕಪ್ ಫೈನಲ್​ನಲ್ಲಿ ಗೆಲುವು ಕಾಣದಿದ್ದಾಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಬೇಕೇ? ಎಂದು ವರದಿಗಾರರು ರೋಹಿತ್ ಅವರನ್ನು ಇಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
Image
World Cup: ಇಂಗ್ಲೆಂಡ್-ನ್ಯೂಝಿಲೆಂಡ್ ಆಟಗಾರರಿಂದ ಭರ್ಜರಿ ಅಭ್ಯಾಸ
Image
ವಿಶ್ವಕಪ್ ಉದ್ಘಾಟನಾ ಪಂದ್ಯಕ್ಕಿದೆಯಾ ಮಳೆಯ ಆತಂಕ?
Image
ವಿಶ್ವಕಪ್ ಅನ್ನು ಟಿವಿ- ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?
Image
ಇಂಗ್ಲೆಂಡ್-ನ್ಯೂಜಿಲೆಂಡ್ ವಿಶ್ವಕಪ್‌ ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್; ಸ್ಟಾರ್ ಆಲ್​ರೌಂಡರ್​ಗೆ ಇಂಜುರಿ! ಉದ್ಘಾಟನಾ ಪಂದ್ಯಕ್ಕೆ ಅಲಭ್ಯ?

2019 ರಲ್ಲಿ ಲಾರ್ಡ್ಸ್‌ನಲ್ಲಿ ನಡೆದ ವಿಶ್ವಕಪ್ ಫೈನಲ್​ನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಪಂದ್ಯ ಟೈ ಆದ ಕಾರಣ ಸೂಪರ್‌ ಓವರ್ ಆಡಿಸಲಾಯಿತು. ಆದರೆ, ಸೂಪರ್ ಓವರ್ ಕೂಡ ಟೈನಲ್ಲಿ ಕೊನೆಗೊಂಡಿತು. ಫೈನಲ್ ಪಂದ್ಯ ಎರಡು ಬಾರಿ ಟೈ ಆಗಿದ್ದರಿಂದ ಐಸಿಸಿ ನಿಯಮದ ಪ್ರಕಾರ ಗೆಲುವನ್ನು ಬೌಂಡರಿಗಳ ಲೆಕ್ಕಾಚಾರದಲ್ಲಿ ನಿರ್ಣಯಿಸಲಾಯಿತು. ಯಾವ ತಂಡ ಹೆಚ್ಚು ಬೌಂಡರಿ (ಫೋರ್+ಸಿಕ್ಸ್) ಬಾರಿಸಿದೆಯೋ ಆ ತಂಡವನ್ನು ವಿಜೇತರೆಂದು ಘೋಷಿಸಲಾಯಿತು. ಹೀಗಾಗಿ ಇಯಾನ್ ಮಾರ್ಗನ್ ನಾಯಕತ್ವದ ಇಂಗ್ಲೆಂಡ್ ಪ್ರಶಸ್ತಿ ಎತ್ತಿ ಹಿಡಿಯಿತು.

ಕ್ಯಾಪ್ಟನ್ಸಿ ಡೇ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾ:

ಈ ಕುರಿತು ಕ್ಯಾಪ್ಟನ್ಸಿ ಡೇ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾಗೆ ಪ್ರಶ್ನೆ ಕೇಳಲಾಯಿತು. ”2019ರ ವಿಶ್ವಕಪ್ ಫೈನಲ್​ನಲ್ಲಿ ಗೆಲುವು ಕಾಣದಿದ್ದಾಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಬೇಕೇ?” ಎಂದು ವರದಿಗಾರರು ರೋಹಿತ್ ಬಳಿ ಕೇಳಿದ್ದಾರೆ. ರೋಹಿತ್ ಈ ಪ್ರಶ್ನೆಯಿಂದ ಆಶ್ಚರ್ಯಗೊಂಡು ಅಂತಹ ಪ್ರಶ್ನೆಯು ತನ್ನಲ್ಲಿ ಏಕೆ ಕೇಳಿದರು ಎಂದು ಬೇಸರಗೊಂಡರು. ಬಳಿಕ ಇದಕ್ಕೆ ಉತ್ತರಿಸಿದ ಭಾರತೀಯ ನಾಯಕ, ‘ವಿಜೇತರನ್ನು ಘೋಷಿಸುವುದು ನನ್ನ ಕೆಲಸವಲ್ಲ,’ ಎಂದು ರೋಹಿತ್ ಖಡಕ್ ಆಗಿ ಹೇಳಿದ್ದಾರೆ.

2019 ವಿಶ್ವಕಪ್ ಬಳಿಕ ಮತ್ತೊಮ್ಮೆ ಇಂದು ವಿಶ್ವಕಪ್​ನಲ್ಲಿ ಇಂಗ್ಲೆಂಡ್-ನ್ಯೂಝಿಲೆಂಡ್ ಮುಖಾಮುಖಿ ಆಗಲಿದೆ. ರೋಹಿತ್ ನೇತೃತ್ವದ ಭಾರತ ಭಾನುವಾರ (ಅಕ್ಟೋಬರ್ 8) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ. ಅಕ್ಟೋಬರ್ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ತನ್ನ ಮೂರನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ