AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಪಂದ್ಯ ಮುಗಿದ ಬಳಿಕ ಕೊಹ್ಲಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ರೋಹಿತ್ ಶರ್ಮಾ: ಏನಂದ್ರು ಗೊತ್ತೇ?

ENG vs IND T20I: ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟಿ20 ಪಂದ್ಯ ಮುಗಿದ ಬಳಿಕ ನಾಯಕ ರೋಹಿತ್ ಶರ್ಮಾ ಮಾತನಾಡಿದ್ದು ವಿರಾಟ್ ಕೊಹ್ಲಿ ಆಟದ ಬಗ್ಗೆ ಟೀಕೆ ಮಾಡುತ್ತಿದ್ದವರಿಗೆ ಸರಿಯಾಗಿ ತಿರುಗೇಟು ನೀಡಿದ್ದಾರೆ. ಇಲ್ಲಿದೆ ನೋಡಿ ರೋಹಿತ್ ನೀಡಿದ ಸಂಪೂರ್ಣ ಹೇಳಿಕೆ.

Rohit Sharma: ಪಂದ್ಯ ಮುಗಿದ ಬಳಿಕ ಕೊಹ್ಲಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ರೋಹಿತ್ ಶರ್ಮಾ: ಏನಂದ್ರು ಗೊತ್ತೇ?
Rohit Sharma on Virat Kohli
TV9 Web
| Updated By: Vinay Bhat|

Updated on:Jul 11, 2022 | 9:14 AM

Share

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಟಿ20 ಸರಣಿ ಮುಕ್ತಾಯಗೊಂಡಿದೆ. ಟೀಮ್ ಇಂಡಿಯಾ 2-1 ಅಂತರದಿಂದ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಿದೆ. ಆದರೆ, ಭಾನುವಾರ ರಾತ್ರಿ ನಡೆದ ಅಂತಿಮ ಮೂರನೇ ಟಿ20 ಕದನದಲ್ಲಿ ರೋಹಿತ್ ಪಡೆ ಸೋಲು ಕಂಡಿತು. ಡೇವಿಡ್ ಮಲನ್ ಅವರ 77 ರನ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಅಜೇಯ 42 ರನ್​ಗಳ ನೆರವಿನಿಂದ ಇಂಗ್ಲೆಂಡ್ ತಂಡ ಭಾರತಕ್ಕೆ ಗೆಲ್ಲಲು 216 ರನ್​ಗಳ ಬೆಟ್ಟದಂತಹ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ (Suryakumar Yadav) ಆಕರ್ಷಕ ಶತಕ ಸಿಡಿಸಿ ಗೆಲುವಿಗೆ ಹೋರಾಟ ನಡೆಸಿದರೂ ಇತರೆ ಬ್ಯಾಟರ್​ಗಳು ಸಾಥ್ ನೀಡಲಿಲ್ಲ. ಪರಿಣಾಮ ಭಾರತ 20 ಓವರ್​ಗಳಲ್ಲಿ 198 ರನ್ ಗಳಿಸಲಷ್ಟೇ ಶಕ್ತವಾಯಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ (Rohit Sharma) ಏನಂದ್ರು ಕೇಳಿ.

“ನಮ್ಮದು ಅದ್ಭುತ ಚೇಸಿಂಗ್ ಆಗಿತ್ತು. ಟಾರ್ಗೆಟ್​ಗೆ ತಲುಪಲು ಕೊಂಚ ರನ್ ಕಡಿಮೆ ಇದ್ದರೂ ನಾವು ಹೋರಾಟ ನೀಡಿದ ಬಗ್ಗೆ ಹೆಮ್ಮೆಯಿದೆ. ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ನೋಡಲು ಖುಷಿಯಾಗಿತ್ತು. ಅವರು ಈ ಮಾದರಿಯ ಆಟವನ್ನು ತುಂಬಾ ಇಷ್ಟಪಡುತ್ತಾರೆ. ಪಂದ್ಯದಿಂದ ಪಂದ್ಯಕ್ಕೆ ಅವರು ಉತ್ತಮರಾಗುತ್ತಿದ್ದಾರೆ. ತಂಡದಲ್ಲಿ ಸೂರ್ಯ ಇರುವುದು ನಮ್ಮ ಅದೃಷ್ಟ. ಇಂಗ್ಲೆಂಡ್ ತಂಡ ಬ್ಯಾಟರ್​ಗಳು ನಮ್ಮ ಮೇಲೆ ಸಾಕಷ್ಟು ಒತ್ತಡ ಹಾಕಿದರು. ಈ ಸ್ಕೋರ್ ಅನ್ನು ಚೇಸ್ ಮಾಡಬೇಕಾದರೆ ನಿಮ್ಮ ಮೇಲೆ ನೀವು ನಂಬಿಕೆ ಇಡಬೇಕು. ನಾವು ಪ್ರತಿ ಪಂದ್ಯದ ಬಳಿಕ ಬಲಿಷ್ಠರಾಗುತ್ತೇವೆ. ಇಂದಿನ ಪಂದ್ಯ ನಮಗೊಂದು ಪಾಠ. ಈರೀತಿಯ ಪಂದ್ಯಗಳು ನಮಗೆ ಪಾಠ ಕಲಿಸುತ್ತದೆ,” ಎಂದು ರೋಹಿತ್ ಹೇಳಿದ್ದಾರೆ.

Virat Kohli: 4,6 ಮತ್ತು ಔಟ್: ಮೈ ಜುಮ್ ಎನಿಸುವ ಕೊಹ್ಲಿಯ ಎರಡು ಅದ್ಭುತ ಶಾಟ್​ಗೆ ಫ್ಯಾನ್ಸ್ ಫಿದಾ

ಇದನ್ನೂ ಓದಿ
Image
Wimbledon 2022: ಸತತ ನಾಲ್ಕನೇ ಬಾರಿಗೆ ಚಾಂಪಿಯನ್; 21 ನೇ ಗ್ರ್ಯಾಂಡ್ ಸ್ಲಾಮ್ ಗೆದ್ದ ನೊವಾಕ್ ಜೊಕೊವಿಕ್..!
Image
IND vs ENG: ಆಂಗ್ಲರ ನಾಡಿನಲ್ಲಿ ಸೂರ್ಯ ಸ್ಫೋಟ! ಅಂತಿಮ ಟಿ20ಯಲ್ಲಿ ಅಬ್ಬರದ ಶತಕ ಸಿಡಿಸಿದ ಯಾದವ್
Image
India vs England, 3rd T20, Highlights: ಸೂರ್ಯನಿಗೆ ಸಾಥ್ ಸಿಗಲಿಲ್ಲ; ಶತಕ ವ್ಯರ್ಥ, ಭಾರತಕ್ಕೆ ಟಿ20 ಸರಣಿ
Image
IND vs ENG: ಪಾಂಟಿಂಗ್ ದಾಖಲೆ ಮೇಲೆ ಕಣ್ಣಿಟ್ಟ ರೆಕಾರ್ಡ್ ಮೆಷಿನ್ ರೋಹಿತ್! ಲಂಕಾ ದಾಖಲೆಯೂ ಉಡೀಸ್

ಇನ್ನು ಇದೇ ಸಂದರ್ಭ ವಿರಾಟ್ ಕೊಹ್ಲಿ ಆಟದ ಬಗ್ಗೆ ಮಾತನಾಡಿದ ರೋಹಿತ್ ಟೀಕೆ ಮಾಡುತ್ತಿದ್ದವರಿಗೆ ಸರಿಯಾಗಿ ತಿರುಗೇಟು ನೀಡಿದ್ದಾರೆ. “ಕೆಲವರು ಕೊಹ್ಲಿಯ ಆಟವನ್ನು ಹೊರಗಡೆಯಿಂದ ನೋಡುತ್ತಿದ್ದಾರೆ. ಆದರೆ, ಇಲ್ಲಿ ಒಳಗಡೆ ಏನಾಗುತ್ತಿದೆ ಎಂದು ಅವರಿಗೆ ತಿಳಿದಿಲ್ಲ. ನಮಗೆ ನಮ್ಮದೆ ಆದ ಕೆಲ ಆಲೋಚನೆಗಳಿವೆ. ನಾವು ತಂಡ ಕಟ್ಟುತ್ತಿದ್ದೇವೆ. ಇದರ ಹಿಂದೆ ಯೋಜನೆಗಳಿವೆ. ಈ ವಿಚಾರವೆಲ್ಲ ಹೊರಗಡೆ ತಿಳಿಯುವುದಿಲ್ಲ. ಹೀಗಾಗಿ ಹೊರಗಡೆ ಏನಾಗುತ್ತದೆ ಅದು ಮುಖ್ಯವಲ್ಲ. ನಮಗೆ ಇಲ್ಲಿ ಒಳಗಡೆ ಏನು ನಡೆಯುತ್ತದೆ ಎಂಬುದಷ್ಟೆ ಮುಖ್ಯ,” ಎಂಬುದು ಹಿಟ್​ಮ್ಯಾನ್ ಮಾತು.

“ನೀವು ಫಾರ್ಮ್ ವಿಚಾರವಾಗಿ ಮಾತನಾಡುತ್ತಿದ್ದರೆ ಏಳು-ಬೀಳು ಪ್ರತಿಯೊಬ್ಬ ಆಟಗಾರನಲ್ಲೂ ಇರುತ್ತದೆ. ಅದು ಆಟಗಾರನ ಗುಣಮಟ್ಟದ ಮೇಲೆ ಯಾವುದೇ ಪರಿಣಾಮ ಬೀಳುವುದಿಲ್ಲ. ಇದನ್ನು ನಾವು ತಲೆಯಲ್ಲಿ ಒಟ್ಟುಕೊಳ್ಳಬೇಕು. ಒಬ್ಬ ಆಟಗಾರನು ಇಷ್ಟು ವರ್ಷಗಳ ಕಾಲ ಉತ್ತಮವಾಗಿ ಆಡುತ್ತಿದ್ದಾಗ ಕೆಲ ಕೆಟ್ಟ ಸರಣಿಗಳು ಅವರನ್ನು ಕಳಪೆ ಆಟಗಾರನನ್ನಾಗಿ ಮಾಡುವುದಿಲ್ಲ. ಅವರ ಹಿಂದಿನ ಪ್ರದರ್ಶನಗಳನ್ನು ನಾವು ಕಡೆಗಣಿಸಬಾರದು. ತಂಡದಲ್ಲಿರುವ ನಮಗೆ ಆಟಗಾರನ ಮಹತ್ವ ಗೊತ್ತಿದೆ,” ಎಂದು ಖಡಕ್ ಆಗಿ ಹೇಳಿದ್ದಾರೆ.

ಕಪಿಲ್ ದೇವ್ ಹೇಳಿಕೆಯಲ್ಲಿ ಏನಿತ್ತು?:

ಇತ್ತೀಚೆಗಷ್ಟೆ ಕಪಿಲ್ ದೇವ್ ಅವರು ಕೊಹ್ಲಿ ಬಗ್ಗೆ ನೀಡಿದ ಹೇಳಿಕೆಗೆ ರೋಹಿತ್ ಉತ್ತರಿಸಿದ ರೀತಿ ಇದಾಗಿದೆ. ಕಪಿಲ್ ಅವರು, “ವಿರಾಟ್ ಕೊಹ್ಲಿ ಸುಮಾರು 3 ವರ್ಷಗಳಿಂದ ದೊಡ್ಡ ಇನ್ನಿಂಗ್ಸ್ ಆಡಲು ಹೋರಾಡುತ್ತಿದ್ದಾರೆ. ಭಾರತೀಯ ತಂಡದ ಆಡಳಿತವು ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಉತ್ತಮ ಲಯದಲ್ಲಿರುವ ಆಟಗಾರರಿಗೆ ಸಾಕಷ್ಟು ಅವಕಾಶಗಳನ್ನು ನೀಡದಿದ್ದರೆ, ಅದು ಅವರಿಗೆ ಮಾಡುವ ಅನ್ಯಾಯವಾಗುತ್ತದೆ. ಹೀಗಾಗಿ ಫಾರ್ಮ್​ನಲ್ಲಿ ಇಲ್ಲದವರನ್ನು ಕೈ ಬಿಟ್ಟು ಫಾರ್ಮ್​ನಲ್ಲಿ ಇರುವವರಿಗೆ ಅವಕಾಶ ನೀಡಿ. ದೀರ್ಘಕಾಲದಿಂದ ಲಯಕ್ಕೆ ಮರಳಲು ಹೋರಾಡುತ್ತಿರುವ ವಿರಾಟ್ ಕೊಹ್ಲಿ ಟಿ20 ತಂಡದಿಂದ ಹೊರಗುಳಿಯಬೇಕು,” ಎಂದು ಹೇಳಿದ್ದರು.

Published On - 9:13 am, Mon, 11 July 22

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಮತ್ತೆ ಒಂದಾದ ಜೋಡೆತ್ತು: 40 ವರ್ಷಗಳ ಸ್ನೇಹ ಮುಂದುವರಿಕೆ!
ಮತ್ತೆ ಒಂದಾದ ಜೋಡೆತ್ತು: 40 ವರ್ಷಗಳ ಸ್ನೇಹ ಮುಂದುವರಿಕೆ!