Rohit Sharma: ರೋಹಿತ್ ಶರ್ಮಾಗೆ ಗಂಭೀರ ಗಾಯ: ಮೈದಾನದಿಂದ ಹೊರಕ್ಕೆ

India vs Bangladesh 2nd ODI: ವಾಷಿಂಗ್ಟನ್ ಸುಂದರ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿ ಮಿಂಚಿದರು. ಮೊದಲಿಗೆ ಶಕೀಬ್ ಅಲ್ ಹಸನ್ (8) ವಿಕೆಟ್ ಪಡೆದ ಸುಂದರ್, ಆ ಬಳಿಕ ಮುಶ್ಪಿಕುರ್ ರಹೀಮ್ (12) ಹಾಗೂ ಅಫಿಫ್ ಹೊಸೈನ್ (0) ಸ್ಪಿನ್ ಬಲೆಗೆ ಬೀಳಿಸಿದರು.

Rohit Sharma: ರೋಹಿತ್ ಶರ್ಮಾಗೆ ಗಂಭೀರ ಗಾಯ: ಮೈದಾನದಿಂದ ಹೊರಕ್ಕೆ
Rohit Sharma
Follow us
| Updated By: ಝಾಹಿರ್ ಯೂಸುಫ್

Updated on: Dec 07, 2022 | 1:32 PM

India vs Bangladesh 2nd ODI:  ಢಾಕಾದ ಶೇರೆ ಬಾಂಗ್ಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಗಾಯಗೊಂಡಿದ್ದಾರೆ. ಮೊಹಮ್ಮದ್ ಸಿರಾಜ್ ಎಸೆದ 2ನೇ ಓವರ್​ನ 4ನೇ ಎಸೆತದಲ್ಲಿ ಚೆಂಡು ಅನಾಮುಲ್ ಹಕ್ ಅವರ ಬ್ಯಾಟ್ ಸವರಿ ಸ್ಲಿಪ್​ನತ್ತ ಚಿಮ್ಮಿತ್ತು. ಅಲ್ಲೇ ಫೀಲ್ಡಿಂಗ್​ನಲ್ಲಿದ್ದ ರೋಹಿತ್ ಶರ್ಮಾ ಕ್ಯಾಚ್ ಹಿಡಿಯುವ ಯತ್ನ ಮಾಡಿದ್ದರು. ಆದರೆ ಚೆಂಡು ನೇರವಾಗಿ ಹಿಟ್​ಮ್ಯಾನ್ ಅವರ ಹೆಬ್ಬೆರಳಿಗೆ ತಾಗಿ ಕೆಳಗೆ ಬಿದ್ದಿದೆ. ಇದರಿಂದ ಹೆಬ್ಬೆರಳಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ರೋಹಿತ್ ಶರ್ಮಾ ಮೈದಾನ ತೊರೆದರು. ಇದೀಗ ಗಾಯವನ್ನು ಪರಿಶೀಲಿಸಿರುವ ಫಿಸಿಯೋ ಸ್ಕ್ಯಾನಿಂಗ್ ಮಾಡಲು ಸೂಚಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಬ್ಯಾಟಿಂಗ್​ಗೆ ಇಳಿಯುವುದು ಅನುಮಾನ.  ಸದ್ಯ ಟೀಮ್ ಇಂಡಿಯಾವನ್ನು ಉಪ ನಾಯಕ ಕೆಎಲ್ ರಾಹುಲ್ ಮುನ್ನಡೆಸಿದ್ದಾರೆ.

ಇದಕ್ಕೂ ಮುನ್ನ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿ ಮುಂದೆ ರನ್​ಗಳಿಸಲು ಬಾಂಗ್ಲಾ ಬ್ಯಾಟರ್​ಗಳು ಪರದಾಡಿದರು. 2ನೇ ಓವರ್​ನ 5ನೇ ಎಸೆತದಲ್ಲಿ ಅನಾಮುಲ್ ಹಕ್ (11) ಅವರ ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು.

ಇದಾದ ಬಳಿಕ 10ನೇ ಓವರ್​​ನಲ್ಲಿ ಮತ್ತೆ ದಾಳಿಗಿಳಿದ ಸಿರಾಜ್ ಲಿಟನ್ ದಾಸ್ (7) ಕ್ಲೀನ್ ಬೌಲ್ಡ್ ಮಾಡಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಜ್ಮುಲ್ ಹೊಸೈನ್​ರನ್ನು ಕಣ್ಣು ಮಿಟುಕಿಸುವಷ್ಟರಲ್ಲಿ ಕ್ಲೀನ್ ಬೌಲ್ಡ್ ಮಾಡಿ ಉಮ್ರಾನ್ ಮಲಿಕ್ ಪೆವಿಲಿಯನ್​ಗೆ ಕಳುಹಿಸಿದರು.

ಇದರ ನಡುವೆ ದಾಳಿಗಿಳಿದ ವಾಷಿಂಗ್ಟನ್ ಸುಂದರ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿ ಮಿಂಚಿದರು. ಮೊದಲಿಗೆ ಶಕೀಬ್ ಅಲ್ ಹಸನ್ (8) ವಿಕೆಟ್ ಪಡೆದ ಸುಂದರ್, ಆ ಬಳಿಕ ಮುಶ್ಪಿಕುರ್ ರಹೀಮ್ (12) ಹಾಗೂ ಅಫಿಫ್ ಹೊಸೈನ್ (0) ಸ್ಪಿನ್ ಬಲೆಗೆ ಬೀಳಿಸಿದರು. ಪರಿಣಾಮ 20 ಓವರ್ ಮುಕ್ತಾಯದ ವೇಳೆಗೆ ಬಾಂಗ್ಲಾದೇಶ್ ತಂಡವು 6 ವಿಕೆಟ್ ಕಳೆದುಕೊಂಡಿತು. ಅಲ್ಲದೆ ಕಲೆಹಾಕಿದ್ದು ಕೇವಲ 71 ರನ್​ಗಳು ಮಾತ್ರ.

ಭಾರತ (ಪ್ಲೇಯಿಂಗ್ ಇಲೆವೆನ್): ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

ಬಾಂಗ್ಲಾದೇಶ (ಪ್ಲೇಯಿಂಗ್ ಇಲೆವೆನ್): ನಜ್ಮುಲ್ ಹೊಸೈನ್ ಶಾಂಟೊ, ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಇಬಾದತ್ ಹೊಸೈನ್, ಮುಸ್ತಫಿಜುರ್ ರೆಹಮಾನ್

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ