AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾಗೆ ಗಂಭೀರ ಗಾಯ: ಮೈದಾನದಿಂದ ಹೊರಕ್ಕೆ

India vs Bangladesh 2nd ODI: ವಾಷಿಂಗ್ಟನ್ ಸುಂದರ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿ ಮಿಂಚಿದರು. ಮೊದಲಿಗೆ ಶಕೀಬ್ ಅಲ್ ಹಸನ್ (8) ವಿಕೆಟ್ ಪಡೆದ ಸುಂದರ್, ಆ ಬಳಿಕ ಮುಶ್ಪಿಕುರ್ ರಹೀಮ್ (12) ಹಾಗೂ ಅಫಿಫ್ ಹೊಸೈನ್ (0) ಸ್ಪಿನ್ ಬಲೆಗೆ ಬೀಳಿಸಿದರು.

Rohit Sharma: ರೋಹಿತ್ ಶರ್ಮಾಗೆ ಗಂಭೀರ ಗಾಯ: ಮೈದಾನದಿಂದ ಹೊರಕ್ಕೆ
Rohit Sharma
TV9 Web
| Edited By: |

Updated on: Dec 07, 2022 | 1:32 PM

Share

India vs Bangladesh 2nd ODI:  ಢಾಕಾದ ಶೇರೆ ಬಾಂಗ್ಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಗಾಯಗೊಂಡಿದ್ದಾರೆ. ಮೊಹಮ್ಮದ್ ಸಿರಾಜ್ ಎಸೆದ 2ನೇ ಓವರ್​ನ 4ನೇ ಎಸೆತದಲ್ಲಿ ಚೆಂಡು ಅನಾಮುಲ್ ಹಕ್ ಅವರ ಬ್ಯಾಟ್ ಸವರಿ ಸ್ಲಿಪ್​ನತ್ತ ಚಿಮ್ಮಿತ್ತು. ಅಲ್ಲೇ ಫೀಲ್ಡಿಂಗ್​ನಲ್ಲಿದ್ದ ರೋಹಿತ್ ಶರ್ಮಾ ಕ್ಯಾಚ್ ಹಿಡಿಯುವ ಯತ್ನ ಮಾಡಿದ್ದರು. ಆದರೆ ಚೆಂಡು ನೇರವಾಗಿ ಹಿಟ್​ಮ್ಯಾನ್ ಅವರ ಹೆಬ್ಬೆರಳಿಗೆ ತಾಗಿ ಕೆಳಗೆ ಬಿದ್ದಿದೆ. ಇದರಿಂದ ಹೆಬ್ಬೆರಳಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ರೋಹಿತ್ ಶರ್ಮಾ ಮೈದಾನ ತೊರೆದರು. ಇದೀಗ ಗಾಯವನ್ನು ಪರಿಶೀಲಿಸಿರುವ ಫಿಸಿಯೋ ಸ್ಕ್ಯಾನಿಂಗ್ ಮಾಡಲು ಸೂಚಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಬ್ಯಾಟಿಂಗ್​ಗೆ ಇಳಿಯುವುದು ಅನುಮಾನ.  ಸದ್ಯ ಟೀಮ್ ಇಂಡಿಯಾವನ್ನು ಉಪ ನಾಯಕ ಕೆಎಲ್ ರಾಹುಲ್ ಮುನ್ನಡೆಸಿದ್ದಾರೆ.

ಇದಕ್ಕೂ ಮುನ್ನ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿ ಮುಂದೆ ರನ್​ಗಳಿಸಲು ಬಾಂಗ್ಲಾ ಬ್ಯಾಟರ್​ಗಳು ಪರದಾಡಿದರು. 2ನೇ ಓವರ್​ನ 5ನೇ ಎಸೆತದಲ್ಲಿ ಅನಾಮುಲ್ ಹಕ್ (11) ಅವರ ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು.

ಇದಾದ ಬಳಿಕ 10ನೇ ಓವರ್​​ನಲ್ಲಿ ಮತ್ತೆ ದಾಳಿಗಿಳಿದ ಸಿರಾಜ್ ಲಿಟನ್ ದಾಸ್ (7) ಕ್ಲೀನ್ ಬೌಲ್ಡ್ ಮಾಡಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಜ್ಮುಲ್ ಹೊಸೈನ್​ರನ್ನು ಕಣ್ಣು ಮಿಟುಕಿಸುವಷ್ಟರಲ್ಲಿ ಕ್ಲೀನ್ ಬೌಲ್ಡ್ ಮಾಡಿ ಉಮ್ರಾನ್ ಮಲಿಕ್ ಪೆವಿಲಿಯನ್​ಗೆ ಕಳುಹಿಸಿದರು.

ಇದರ ನಡುವೆ ದಾಳಿಗಿಳಿದ ವಾಷಿಂಗ್ಟನ್ ಸುಂದರ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿ ಮಿಂಚಿದರು. ಮೊದಲಿಗೆ ಶಕೀಬ್ ಅಲ್ ಹಸನ್ (8) ವಿಕೆಟ್ ಪಡೆದ ಸುಂದರ್, ಆ ಬಳಿಕ ಮುಶ್ಪಿಕುರ್ ರಹೀಮ್ (12) ಹಾಗೂ ಅಫಿಫ್ ಹೊಸೈನ್ (0) ಸ್ಪಿನ್ ಬಲೆಗೆ ಬೀಳಿಸಿದರು. ಪರಿಣಾಮ 20 ಓವರ್ ಮುಕ್ತಾಯದ ವೇಳೆಗೆ ಬಾಂಗ್ಲಾದೇಶ್ ತಂಡವು 6 ವಿಕೆಟ್ ಕಳೆದುಕೊಂಡಿತು. ಅಲ್ಲದೆ ಕಲೆಹಾಕಿದ್ದು ಕೇವಲ 71 ರನ್​ಗಳು ಮಾತ್ರ.

ಭಾರತ (ಪ್ಲೇಯಿಂಗ್ ಇಲೆವೆನ್): ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

ಬಾಂಗ್ಲಾದೇಶ (ಪ್ಲೇಯಿಂಗ್ ಇಲೆವೆನ್): ನಜ್ಮುಲ್ ಹೊಸೈನ್ ಶಾಂಟೊ, ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಇಬಾದತ್ ಹೊಸೈನ್, ಮುಸ್ತಫಿಜುರ್ ರೆಹಮಾನ್

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!