
ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದ ರೋಹಿತ್ ಶರ್ಮಾ (Rohit Sharma) ಇನ್ನು ಮುಂದೆ ಏಕದಿನ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಐಪಿಎಲ್ನಲ್ಲಿ (IPL 2025) ಮುಂಬೈ ಇಂಡಿಯನ್ಸ್ ಪರ ಕಳೆದ ಕೆಲವು ಪಂದ್ಯಗಳಿಂದ ಸ್ಥಿರ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ಮುಗಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ, ರೋಹಿತ್ ಕಳೆದ ಐದು ವರ್ಷಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಂತರ ಅವರು ಈ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ರೋಹಿತ್ ಶರ್ಮಾ 2027 ರ ವಿಶ್ವಕಪ್ಗಾಗಿ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಇದು ಸರಿಯಾದ ಸಮಯ ಎಂಬುದು ರೋಹಿತ್ ಅಭಿಪ್ರಾಯ. ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದ ಕಾರಣ ಮತ್ತು ದೊಡ್ಡ ಪಂದ್ಯಾವಳಿಗಳ ಕಾರಣದಿಂದಾಗಿ ಈ ಶಸ್ತ್ರಚಿಕಿತ್ಸೆಯನ್ನು ಬಹಳ ಸಮಯದಿಂದ ಮುಂದೂಡುತ್ತಿದ್ದಾರೆ. ಆದರೆ ಈಗ ಅವರು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿದ್ದು, ಈಗ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಚೇತರಿಸಿಕೊಳ್ಳಲು ಅವರಿಗೆ ಸಾಕಷ್ಟು ಸಮಯವಿದೆ.
ರೋಹಿತ್ ಶರ್ಮಾ ಇನ್ನು ಮುಂದೆ ಟೆಸ್ಟ್ ಕ್ರಿಕೆಟ್ ಆಡುತ್ತಿಲ್ಲ. ಮುಂದಿನ 3 ತಿಂಗಳು ಯಾವುದೇ ಏಕದಿನ ಸರಣಿ ಇರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ರೋಹಿತ್ಗೆ ಚೇತರಿಸಿಕೊಳ್ಳಲು ಸಾಕಷ್ಟು ಸಮಯವಿದೆ. ರೋಹಿತ್ ಶರ್ಮಾ 2016 ರಲ್ಲಿ ಕ್ವಾಡ್ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಆ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳಲು ಅವರಿಗೆ 3 ತಿಂಗಳು ಬೇಕಾಯಿತು. ಮಂಡಿರಜ್ಜು ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳಲು ಅವರಿಗೆ 3-4 ತಿಂಗಳುಗಳು ಬೇಕಾಗಬಹುದು.
ರೋಹಿತ್- ಕೊಹ್ಲಿಗೆ ಎ+ ಗ್ರೇಡ್ನಿಂದ ಹಿಂಬಡ್ತಿ? ಬಿಸಿಸಿಐ ಕಾರ್ಯದರ್ಶಿ ಹೇಳಿದ್ದೇನು?
ಭಾರತ ತನ್ನ ಮುಂದಿನ ಏಕದಿನ ಸರಣಿಯನ್ನು ಬಾಂಗ್ಲಾದೇಶ ವಿರುದ್ಧ ಆಡಬೇಕಾಗಿದೆ. ಬಾಂಗ್ಲಾದೇಶ ಮತ್ತು ಭಾರತ ನಡುವಿನ ಸಂಬಂಧಗಳು ಕೂಡ ಹದಗೆಟ್ಟಿರುವುದರಿಂದ ಈ ಪ್ರವಾಸ ಇನ್ನೂ ದೃಢಪಟ್ಟಿಲ್ಲ. ಇದರರ್ಥ ರೋಹಿತ್ಗೆ ಶಸ್ತ್ರಚಿಕಿತ್ಸೆಗೆ ಒಳಗಾಗುವುದಕ್ಕೆ ಇದು ಸರಿಯಾದ ಸಮಯ. ರೋಹಿತ್ 2027 ರ ವಿಶ್ವಕಪ್ ಗೆಲ್ಲಲು ಬಯಸಿದರೆ, ಅವರು ಸಂಪೂರ್ಣವಾಗಿ ಫಿಟ್ ಆಗಿರಬೇಕು. ಹೀಗಾಗಿ ಅವರಿಗೆ ಈ ಶಸ್ತ್ರಚಿಕಿತ್ಸೆ ಬಹಳ ಅಗತ್ಯವಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:31 pm, Wed, 21 May 25