AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ದೇಹ ದಂಡಿಸಿದ ಹಿಟ್​ಮ್ಯಾನ್: ರೋಹಿತ್ ಶರ್ಮಾ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ

Rohit sharma New Look: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಇದೀಗ ಹಿಟ್​ಮ್ಯಾನ್ ದೇಹ ತೂಕವನ್ನು ಇಳಿಸಲು ಕಸರತ್ತು ನಡೆಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಹೊಸ ಲುಕ್​ನಲ್ಲಿರುವ ಫೋಟೋವೊಂದನ್ನು ಕೂಡ ಹಿಟ್​ಮ್ಯಾನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Rohit Sharma: ದೇಹ ದಂಡಿಸಿದ ಹಿಟ್​ಮ್ಯಾನ್: ರೋಹಿತ್ ಶರ್ಮಾ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ
Rohit Sharma
TV9 Web
| Updated By: ಝಾಹಿರ್ ಯೂಸುಫ್|

Updated on: Jan 17, 2022 | 3:51 PM

Share

ಜನವರಿ 19 ರಿಂದ ದಕ್ಷಿಣ ಆಫ್ರಿಕಾ ವಿರುದ್ದ ಏಕದಿನ ಸರಣಿ ಶುರುವಾಗಲಿದೆ. ವಿಶೇಷ ಎಂದರೆ ಈ ಸರಣಿಯಿಂದ ರೋಹಿತ್ ಶರ್ಮಾ (Rohit Sharma) ಹೊರಗುಳಿದಿದ್ದಾರೆ. ಅಂದರೆ ಟೀಮ್ ಇಂಡಿಯಾ (Team India) ಏಕದಿನ ತಂಡಕ್ಕೆ ನಾಯಕರಾದ ಬಳಿಕ ಹಿಟ್​ಮ್ಯಾನ್​ಗೆ ಇದು ಮೊದಲ ಸರಣಿ ಆಗಿತ್ತು. ಆದರೆ ಗಾಯದ ಸಮಸ್ಯೆಯಿಂದಾಗಿ ಈ ಸರಣಿಯಿಂದಲೂ ರೋಹಿತ್ ಶರ್ಮಾ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಹಿಟ್​ಮ್ಯಾನ್ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಿಂದ ಗಾಯದ ಕಾರಣ ಹೊರಗುಳಿಯಬೇಕಾಯಿತು. ಇದೀಗ ಫಿಟ್​ನೆಸ್​ನತ್ತ ಗಮನ ಹರಿಸಿರುವ ರೋಹಿತ್ ಶರ್ಮಾ ಬ್ಯಾಕ್ ಟು ಬ್ಯಾಕ್ ಎರಡು ಸರಣಿಗಳಿಂದ ಹೊರಗುಳಿದಿದ್ದಾರೆ. ಇನ್ನು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.

ಮತ್ತೊಂದೆಡೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್​ಗಾಗಿ ಕಸರತ್ತು ನಡೆಸುತ್ತಿರುವ ಹಿಟ್​ಮ್ಯಾನ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವುದು ಯಾವಾಗ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಸದ್ಯ ಸಿಗುತ್ತಿರುವ ಉತ್ತರ ಫೆಬ್ರವರಿ ತಿಂಗಳಲ್ಲಿ ಎಂಬುದು. ಹೌದು, ರೋಹಿತ್ ಶರ್ಮಾ ಮುಂಬರುವ ವೆಸ್ಟ್ ಇಂಡೀಸ್ ಸರಣಿ ವೇಳೆಗೆ ಸಂಪೂರ್ಣ ಗುಣಮುಖರಾಗಿ ತಂಡಕ್ಕೆ ಸೇರಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಏಕದಿನ ತಂಡದ ನಾಯಕರಾಗಿ ಪದಾರ್ಪಣೆ ಮಾಡಲಿದ್ದಾರೆ.

ಭಾರತ-ವೆಸ್ಟ್ ಇಂಡೀಸ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 6 ರಂದು ಶುರುವಾಗಲಿದೆ. ಈ ವೇಳೆಗೆ ರೋಹಿತ್ ಶರ್ಮಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅಲ್ಲದೆ ಏಕದಿನ ಹಾಗೂ ಟಿ20 ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಮತ್ತೊಂದೆಡೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಇದೀಗ ಹಿಟ್​ಮ್ಯಾನ್ ದೇಹ ತೂಕವನ್ನು ಇಳಿಸಲು ಕಸರತ್ತು ನಡೆಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಹೊಸ ಲುಕ್​ನಲ್ಲಿರುವ ಫೋಟೋವೊಂದನ್ನು ಕೂಡ ಹಿಟ್​ಮ್ಯಾನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಸಂಪೂರ್ಣ ತಯಾರಿಯೊಂದಿಗೆ ಯಂಗ್ ಅ್ಯಂಡ್ ಎನರ್ಜಿಟಿಕ್ ಆಗಿ ಕಂಬ್ಯಾಕ್ ಮಾಡಲು ರೋಹಿತ್ ಶರ್ಮಾ ಸಿದ್ದತೆಯಲ್ಲಿದ್ದಾರೆ.

ಏಕೆಂದರೆ ಪ್ರಸ್ತುತ ಬಿಸಿಸಿಐ ನಿಯಮದ ಪ್ರಕಾರ, ಫಿಟ್‌ನೆಸ್ ಪ್ರಮಾಣಪತ್ರವನ್ನು ಪಡೆಯಲು ಪ್ರತಿಯೊಬ್ಬ ಆಟಗಾರನು ಎನ್‌ಸಿಎಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಇದಾದ ಬಳಿಕ ಆಯ್ಕೆ ಸಮಿತಿಗೆ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಹೀಗಾಗಿ ಸಂಪೂರ್ಣ ಫಿಟ್​ನೆಸ್​ ಕಡೆಗೆ ರೋಹಿತ್ ಶರ್ಮಾ ಗಮನಹರಿಸಿದ್ದು, ಈ ಮೂಲಕ ಎನ್​ಸಿಎ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕವಷ್ಟೇ ಆಯ್ಕೆಗೆ ತಮ್ಮ ಲಭ್ಯತೆಯನ್ನು ತಿಳಿಸಲು ರೋಹಿತ್ ಶರ್ಮಾ ನಿರ್ಧರಿಸಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯೊಂದಿಗೆ ಹೊಸ ಲುಕ್​ನಲ್ಲಿ ಹಿಟ್​ಮ್ಯಾನ್ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ಯುವ ಬೌಲರ್..!

ಇದನ್ನೂ ಓದಿ:  ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Rohit Sharma likely to be available for home series against West Indies)

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ