AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾ ಜೊತೆ ಇಬ್ಬರು ಆಟಗಾರರ ರಿ-ಎಂಟ್ರಿ

India vs Sri Lanka 2024: ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಈ ಸರಣಿಯ ಮೂಲಕ ಟೀಮ್ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಕಾರ್ಯಾರಂಭ ಮಾಡಲಿದ್ದಾರೆ. ಹೀಗಾಗಿ ಗೌತಿ ಪಾಲಿಗೆ ಇದು ತುಂಬಾ ಮಹತ್ವದ್ದು ಸರಣಿ. ಇನ್ನು ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನಾಡಲಿದೆ.

Rohit Sharma: ರೋಹಿತ್ ಶರ್ಮಾ ಜೊತೆ ಇಬ್ಬರು ಆಟಗಾರರ ರಿ-ಎಂಟ್ರಿ
Rohit Sharma
ಝಾಹಿರ್ ಯೂಸುಫ್
|

Updated on: Jul 18, 2024 | 9:32 AM

Share

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಹಿಟ್​ಮ್ಯಾನ್ ಈ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲು ಇಚ್ಛಿಸಿದ್ದಾರೆ ಎಂದು ತಿಳಿದು ಬಂದಿದೆ.

ರೋಹಿತ್ ಶರ್ಮಾ ಜೊತೆಗೆ ಈ ಸರಣಿಯ ಮೂಲಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ. ಈ ಇಬ್ಬರು ಆಟಗಾರರನ್ನು ಈ ಬಾರಿಯ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿರಲಿಲ್ಲ.

ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಮತ್ತೆ ಭಾರತ ತಂಡದದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಅನುಮಾನ.

ಇಬ್ಬರಿಗೆ ವಿಶ್ರಾಂತಿ:

ಶ್ರೀಲಂಕಾ ವಿರುದ್ಧದ ಸರಣಿಯಿಂದ ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಜಸ್​ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಈ ಇಬ್ಬರು ಆಟಗಾರರು ಈ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇಲ್ಲಿ ವಿರಾಟ್ ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿದರೆ, ಜಸ್​ಪ್ರೀತ್ ಬುಮ್ರಾ ಏಕದಿನ ಮತ್ತು ಟಿ20 ಸರಣಿಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬುಮ್ರಾ ಸ್ಥಾನದಲ್ಲಿ ಮೊಹಮ್ಮದ್ ಶಮಿ ಅಥವಾ ಖಲೀಲ್ ಅಹ್ಮದ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

ಭಾರತ – ಶ್ರೀಲಂಕಾ ಸರಣಿ ಯಾವಾಗ?

ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 6 ಪಂದ್ಯಗಳನ್ನಾಡಲಾಗುತ್ತದೆ. ಮೊದಲು 3 ಪಂದ್ಯಗಳ ಟಿ20 ಸರಣಿ ನಡೆದರೆ, ಆ ಬಳಿಕ ಏಕದಿನ ಸರಣಿ ಜರುಗಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಭಾರತ ಮತ್ತು ಶ್ರೀಲಂಕಾ ಸರಣಿ ವೇಳಾಪಟ್ಟಿ:

  1. ಮೊದಲ ಟಿ20: ಜುಲೈ 27 (ಪಲ್ಲೆಕೆಲೆ) – 7 PM IST
  2. ಎರಡನೇ ಟಿ20: ಜುಲೈ 28 (ಪಲ್ಲೆಕೆಲೆ) – 7 PM IST
  3. ಮೂರನೇ ಟಿ20: ಜುಲೈ 30 (ಪಲ್ಲೆಕೆಲೆ) – 7 PM IST

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

  1. ಮೊದಲ ಏಕದಿನ: ಆಗಸ್ಟ್ 2 (ಕೊಲಂಬೊ) – 2.30 PM IST
  2. ಎರಡನೇ ಏಕದಿನ: ಆಗಸ್ಟ್ 4 (ಕೊಲಂಬೊ) – 2.30 PM IST
  3. ಮೂರನೇ ಏಕದಿನ: ಆಗಸ್ಟ್ 7 (ಕೊಲಂಬೊ) – 2.30 PM IST
Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!