AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾ ಜೊತೆ ಇಬ್ಬರು ಆಟಗಾರರ ರಿ-ಎಂಟ್ರಿ

India vs Sri Lanka 2024: ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಈ ಸರಣಿಯ ಮೂಲಕ ಟೀಮ್ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಕಾರ್ಯಾರಂಭ ಮಾಡಲಿದ್ದಾರೆ. ಹೀಗಾಗಿ ಗೌತಿ ಪಾಲಿಗೆ ಇದು ತುಂಬಾ ಮಹತ್ವದ್ದು ಸರಣಿ. ಇನ್ನು ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನಾಡಲಿದೆ.

Rohit Sharma: ರೋಹಿತ್ ಶರ್ಮಾ ಜೊತೆ ಇಬ್ಬರು ಆಟಗಾರರ ರಿ-ಎಂಟ್ರಿ
Rohit Sharma
ಝಾಹಿರ್ ಯೂಸುಫ್
|

Updated on: Jul 18, 2024 | 9:32 AM

Share

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಹಿಟ್​ಮ್ಯಾನ್ ಈ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲು ಇಚ್ಛಿಸಿದ್ದಾರೆ ಎಂದು ತಿಳಿದು ಬಂದಿದೆ.

ರೋಹಿತ್ ಶರ್ಮಾ ಜೊತೆಗೆ ಈ ಸರಣಿಯ ಮೂಲಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ. ಈ ಇಬ್ಬರು ಆಟಗಾರರನ್ನು ಈ ಬಾರಿಯ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿರಲಿಲ್ಲ.

ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಮತ್ತೆ ಭಾರತ ತಂಡದದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಅನುಮಾನ.

ಇಬ್ಬರಿಗೆ ವಿಶ್ರಾಂತಿ:

ಶ್ರೀಲಂಕಾ ವಿರುದ್ಧದ ಸರಣಿಯಿಂದ ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಜಸ್​ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಈ ಇಬ್ಬರು ಆಟಗಾರರು ಈ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇಲ್ಲಿ ವಿರಾಟ್ ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿದರೆ, ಜಸ್​ಪ್ರೀತ್ ಬುಮ್ರಾ ಏಕದಿನ ಮತ್ತು ಟಿ20 ಸರಣಿಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬುಮ್ರಾ ಸ್ಥಾನದಲ್ಲಿ ಮೊಹಮ್ಮದ್ ಶಮಿ ಅಥವಾ ಖಲೀಲ್ ಅಹ್ಮದ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

ಭಾರತ – ಶ್ರೀಲಂಕಾ ಸರಣಿ ಯಾವಾಗ?

ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 6 ಪಂದ್ಯಗಳನ್ನಾಡಲಾಗುತ್ತದೆ. ಮೊದಲು 3 ಪಂದ್ಯಗಳ ಟಿ20 ಸರಣಿ ನಡೆದರೆ, ಆ ಬಳಿಕ ಏಕದಿನ ಸರಣಿ ಜರುಗಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಭಾರತ ಮತ್ತು ಶ್ರೀಲಂಕಾ ಸರಣಿ ವೇಳಾಪಟ್ಟಿ:

  1. ಮೊದಲ ಟಿ20: ಜುಲೈ 27 (ಪಲ್ಲೆಕೆಲೆ) – 7 PM IST
  2. ಎರಡನೇ ಟಿ20: ಜುಲೈ 28 (ಪಲ್ಲೆಕೆಲೆ) – 7 PM IST
  3. ಮೂರನೇ ಟಿ20: ಜುಲೈ 30 (ಪಲ್ಲೆಕೆಲೆ) – 7 PM IST

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

  1. ಮೊದಲ ಏಕದಿನ: ಆಗಸ್ಟ್ 2 (ಕೊಲಂಬೊ) – 2.30 PM IST
  2. ಎರಡನೇ ಏಕದಿನ: ಆಗಸ್ಟ್ 4 (ಕೊಲಂಬೊ) – 2.30 PM IST
  3. ಮೂರನೇ ಏಕದಿನ: ಆಗಸ್ಟ್ 7 (ಕೊಲಂಬೊ) – 2.30 PM IST
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್