AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಆಕ್ರಮಣಕಾರಿ ಆಟಕ್ಕೆ ಬ್ರೇಕ್: ಇದು ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್

Rohit Sharma: ಲೀಗ್ ಹಂತದಲ್ಲಿ ನ್ಯೂಝಿಲೆಂಡ್ ವಿರುದ್ಧ ಹಿಟ್​ಮ್ಯಾನ್ ಅಬ್ಬರಿಸಿರಲಿಲ್ಲ. ಅಂದರೆ ಆ ಪಂದ್ಯದಲ್ಲಿ ರೋಹಿತ್ ಶರ್ಮಾ 40 ಎಸೆತಗಳಲ್ಲಿ ಕೇವಲ 46 ರನ್ ಬಾರಿಸಿ ಔಟಾಗಿದ್ದರು. ಹೀಗಾಗಿ ಈ ಬಾರಿ ಕೂಡ ಆರಂಭದಲ್ಲಿ ನ್ಯೂಝಿಲೆಂಡ್ ಬೌಲರ್​ಗಳನ್ನು ಎಚ್ಚರಿಕೆಯಿಂದ ಎದುರಿಸಬೇಕಾದ ಅನಿವಾರ್ಯತೆ ಹಿಟ್​ಮ್ಯಾನ್ ಮುಂದಿದೆ.

ರೋಹಿತ್ ಶರ್ಮಾ ಆಕ್ರಮಣಕಾರಿ ಆಟಕ್ಕೆ ಬ್ರೇಕ್: ಇದು ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್
Rohit Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 14, 2023 | 3:58 PM

ಈ ಬಾರಿಯ ವಿಶ್ವಕಪ್​ನಲ್ಲಿ ಹಿಟ್​ಮ್ಯಾನ್ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಲೀಗ್ ಹಂತದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿರುವ ಹಿಟ್​ಮ್ಯಾನ್ 9 ಪಂದ್ಯಗಳಿಂದ ಕಲೆಹಾಕಿದ್ದು ಬರೋಬ್ಬರಿ 503 ರನ್​ಗಳು. ರೋಹಿತ್ ಶರ್ಮಾ ಅವರ ಈ ಸಿಡಿಲಬ್ಬರದ ಆರಂಭದಿಂದಾಗಿ ನಂತರ ಬಂದ ಬ್ಯಾಟ್ಸ್​ಮನ್​ಗಳು ಒತ್ತಡಕ್ಕೆ ಸಿಲುಕಿರಲಿಲ್ಲ ಎಂದರೆ ತಪ್ಪಾಗಲಾರದು.

ಆದರೆ ಈ ಸಿಡಿಲಬ್ಬರ ಸೆಮಿಫೈನಲ್​ನಲ್ಲಿ ಕಂಡು ಬರುವುದು ಡೌಟ್. ಏಕೆಂದರೆ ಮುಂಬೈನ ವಾಂಖೆಡೆ ಪಿಚ್​ನಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಅವರ ಪ್ರದರ್ಶನ ಎಉತ್ತಮವಾಗಿಲ್ಲ. ಅಲ್ಲದೆ, ಮುಂಬೈನ ಪಿಚ್ ಮೊದಲ 20 ಓವರ್‌ಗಳಲ್ಲಿ ವೇಗದ ಬೌಲರ್‌ಗಳಿಗೆ ಖಂಡಿತವಾಗಿಯೂ ಸಹಕಾರಿ. ಇಂತಹ ಪರಿಸ್ಥಿತಿಯಲ್ಲಿ ಹಿಟ್​ಮ್ಯಾನ್ ತಮ್ಮ ಆಕ್ರಮಣಶೀಲತೆಯನ್ನು ಸಮತೋಲನದಲ್ಲಿರಿಸಬೇಕಾಗಿರುವುದು ಅನಿವಾರ್ಯ.

ಏಕೆಂದರೆ, ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ನಂತರ ಯಾವುದೇ ತಂಡ ಅತ್ಯುತ್ತಮ ವೇಗದ ದಾಳಿಯನ್ನು ಹೊಂದಿದ್ದರೆ ಅದು ನ್ಯೂಝಿಲೆಂಡ್ ಮಾತ್ರ. ನ್ಯೂಝಿಲೆಂಡ್ ತಂಡದ ಎಡಗೈ ಸ್ವಿಂಗ್ ಬೌಲರ್ ಟ್ರೆಂಟ್ ಬೌಲ್ಟ್ ಅತ್ಯುತ್ತಮ ಆರಂಭ ಒದಗಿಸಿಕೊಡಬಲ್ಲ ಬೌಲರ್. ಇನ್ನು ಟಿಮ್ ಸೌಥಿ ಔಟ್ ಸ್ವಿಂಗರ್ ಎಸೆತಗಳ ಮೂಲಕ ಮೋಡಿ ಮಾಡಿದರೆ, ವೇಗದೊಂದಿಗೆ ವಿಕೆಟ್ ಎಗರಿಸುವಲ್ಲಿ ಲಾಕಿ ಫರ್ಗುಸನ್ ನಿಸ್ಸೀಮರು.

ಇದೇ ಕಾರಣದಿಂದಾಗಿ ಲೀಗ್ ಹಂತದಲ್ಲಿ ನ್ಯೂಝಿಲೆಂಡ್ ವಿರುದ್ಧ ಹಿಟ್​ಮ್ಯಾನ್ ಅಬ್ಬರಿಸಿರಲಿಲ್ಲ. ಅಂದರೆ ಆ ಪಂದ್ಯದಲ್ಲಿ ರೋಹಿತ್ ಶರ್ಮಾ 40 ಎಸೆತಗಳಲ್ಲಿ ಕೇವಲ 46 ರನ್ ಬಾರಿಸಿ ಔಟಾಗಿದ್ದರು. ಹೀಗಾಗಿ ಈ ಬಾರಿ ಕೂಡ ಆರಂಭದಲ್ಲಿ ನ್ಯೂಝಿಲೆಂಡ್ ಬೌಲರ್​ಗಳನ್ನು ಎಚ್ಚರಿಕೆಯಿಂದ ಎದುರಿಸಬೇಕಾದ ಅನಿವಾರ್ಯತೆ ಹಿಟ್​ಮ್ಯಾನ್ ಮುಂದಿದೆ.

ಅಷ್ಟೇ ಅಲ್ಲದೆ ಮುಂಬೈ ಪಿಚ್​ನಲ್ಲಿ ಬೃಹತ್ ಮೊತ್ತ ಪೇರಿಸಲು ಇದೊಂದೇ ಅತ್ಯುತ್ತಮ ಮಾರ್ಗ. ಹೀಗಾಗಿ ರೋಹಿತ್ ಶರ್ಮಾ ಮೊದಲ 20 ಓವರ್​ಗಳ ಕಾಲ ಎಚ್ಚರಿಕೆಯಿಂದ ಕ್ರೀಸ್ ಕಚ್ಚಿ ನಿಂತರೆ ಅತ್ತ ರನ್ ಕೂಡ ಹರಿದು ಬರುತ್ತದೆ. ಇತ್ತ ನಂತರ ಬರುವ ಬ್ಯಾಟ್ಸ್​ಮನ್​ಗಳು ಬೃಹತ್ ಮೊತ್ತ ಪೇರಿಸಲು ಸಾಧ್ಯವಾಗುತ್ತದೆ.

ಈ ಕಾರಣದಿಂದಲೇ ರೋಹಿತ್ ಶರ್ಮಾ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ತಯಾರಿ ನಡೆಸಿದ್ದರು. ಏಕೆಂದರೆ ಬೆಂಗಳೂರಿನಲ್ಲಿ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ರೋಹಿತ್ ಶರ್ಮಾ 54 ಎಸೆತಗಳಲ್ಲಿ 61 ರನ್ ಗಳಿಸಿದ್ದರು. ಅಂದರೆ ಇಲ್ಲಿ ಹಿಟ್​ಮ್ಯಾನ್ ತಮ್ಮ ಅರ್ಧಶತಕಕ್ಕಾಗಿ 44 ಎಸೆತಗಳನ್ನು ಆಡಿದ್ದರು. ಇದು ಅವರ ಹಿಂದಿನ ಎಲ್ಲಾ ಪಂದ್ಯಗಳಿಗೆ ಹೋಲಿಸಿದರೆ ನಿಧಾನಗತಿಯ ಬ್ಯಾಟಿಂಗ್‌ ಆಗಿತ್ತು.

ಇದನ್ನೂ ಓದಿ: ಹಳೆಯ ದಾಖಲೆಗಳು ಧೂಳೀಪಟ: ಹಿಟ್​ಮ್ಯಾನ್ ಹೊಸ ಸಿಕ್ಸರ್ ಕಿಂಗ್

ಹೀಗಾಗಿಯೇ ನ್ಯೂಝಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರಿಂದ ಆಕ್ರಮಣಕಾರಿ ಆರಂಭವನ್ನು ನಿರೀಕ್ಷಿಸುವಂತಿಲ್ಲ. ಒಂದು ವೇಳೆ ಹಿಟ್​ಮ್ಯಾನ್ ಕ್ರೀಸ್ ಕಚ್ಚಿ ನಿಂತರೆ ಈ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸುವುದಂತು ನಿಶ್ಚಿತ.

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ