AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd ODI: ನಾಳೆ ತೃತೀಯ ಏಕದಿನ: ಇನ್ನೂ ತಂಡ ಸೇರಿಕೊಳ್ಳದ ರೋಹಿತ್ ಶರ್ಮಾ?

Rohit Sharma likely to join Today Team India: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 27 ರಂದು ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ರಾಜ್ಕೋಟ್​ಗೆ ತಲುಪಿದ್ದಾರೆ. ಆದರೆ, ರೋಹಿತ್ ಶರ್ಮಾ ಮಾತ್ರ ಇನ್ನೂ ಬಂದಿಲ್ಲ.

IND vs AUS 3rd ODI: ನಾಳೆ ತೃತೀಯ ಏಕದಿನ: ಇನ್ನೂ ತಂಡ ಸೇರಿಕೊಳ್ಳದ ರೋಹಿತ್ ಶರ್ಮಾ?
Rohit Sharma
Vinay Bhat
|

Updated on: Sep 26, 2023 | 7:04 AM

Share

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ (India vs Australia) 2-0 ಅಂತರದಿಂದ ಸರಣಿ ವಶಪಡಿಸಿಕೊಂಡಾಗಿದೆ. ಭಾನುವಾರ ಇಂದೋರ್​ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಶುಭ್​ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಮನಮೋಹಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿ ಜಯ ಸಾಧಿಸಿತು. ಇದೀಗ ಭಾರತ ಸರಣಿ ಕ್ಲೀನ್​ಸ್ವೀಪ್ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ರಾಜ್ಕೋಟ್​ಗೆ ತಲುಪಿದೆ. ಆದರೆ, ರೋಹಿತ್ ಶರ್ಮಾ ಮಾತ್ರ ಇನ್ನೂ ಬಂದಿಲ್ಲ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 27 ರಂದು ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ರಾಜ್ಕೋಟ್​ಗೆ ತಲುಪಿದ್ದಾರೆ.

ಇದನ್ನೂ ಓದಿ
Image
ವಿಶ್ವಕಪ್​ನಲ್ಲಿ ಸೆಮಿಫೈನಲ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್
Image
ಈ ಸಲ ವಿಶ್ವಕಪ್ ನಮ್ದೆ​: ಟೀಮ್ ಇಂಡಿಯಾ ಅಭಿಮಾನಿಗಳ​ ಹೀಗೊಂದು ಲೆಕ್ಕಾಚಾರ
Image
ಧೋನಿ ದಾಖಲೆ ಮುರಿದ ಇಮ್ರಾನ್ ತಾಹಿರ್
Image
VIDEO: ಕಪಿಲ್ ದೇವ್ ಕಿಡ್ನಾಪ್ ವಿಡಿಯೋ? ಕಳವಳ ವ್ಯಕ್ತಪಡಿಸಿದ ಗಂಭೀರ್

ರಾಜ್ಕೋಟ್​ಗೆ ತಲುಪಿದ ಟೀಮ್ ಇಂಡಿಯಾ ಆಟಗಾರರ ವಿಡಿಯೋ:

ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಹಾಗೂ ಇನ್ನೂ ಕೆಲ ಆಟಗಾರರು ಮೊದಲೆರಡು ಏಕದಿನ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದರು. ಇವರು ಮೂರನೇ ಪಂದ್ಯದಲ್ಲಿ ಆಡಲಿದ್ದಾರೆ. ಕೊಹ್ಲಿ, ಪಾಂಡ್ಯ ಸೇರಿದಂತೆ ಉಳಿದ ಆಟಗಾರರೆಲ್ಲ ತಂಡ ಸೇರಿದ್ದಾರೆ. ಹಿಟ್​ಮ್ಯಾನ್ ಇನ್ನೂ ಬಂದಿಲ್ಲ ಎನ್ನಲಾಗಿದೆ. ಮೂಲಗಳ ಪ್ರಕಾರ ರೋಹಿತ್ ಇಂದು ತಂಡ ಸೇರಿಕೊಳ್ಳುತ್ತಾರಂತೆ.

ಶಾರ್ದೂಲ್ ಠಾಕೂರ್ ಅರ್ಧಂಬರ್ಧ ಆಟಗಾರ: ಮಾಜಿ ಕ್ರಿಕೆಟಿಗ ಟೀಕೆ

ಭಾರತೀಯ ಆಟಗಾರರು ಎರಡನೇ ಏಕದಿನ ಮುಗಿದ ಬಳಿಕ ಇಂದೋರ್​ನಲ್ಲಿ ಹೆಚ್ಚು ವಿಶ್ರಾಂತಿಯನ್ನು ತೆಗೆದುಕೊಳ್ಳದೆ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಆರ್. ಅಶ್ವಿನ್ ಸೇರಿದಂತೆ ಇಬ್ಬರು ಆಟಗಾರರನ್ನು ಹೊರತು ಪಡಿಸಿ ಉಳಿದೆಲ್ಲ ಪ್ಲೇಯರ್ಸ್ ರಾಜ್ಕೋಟ್​ಗೆ ಬಂದಿದ್ದಾರೆ. ಶುಭ್​ಮನ್ ಗಿಲ್ ಹಾಗೂ ಶಾರ್ದೂಲ್ ಠಾಕೂರ್ ಪ್ರಯಾಣ ಬೆಳೆಸಿಲ್ಲ.

ಅಂತಿಮ ಏಕದಿನ ಪಂದ್ಯದಿಂದ ಗಿಲ್ ಹಾಗೂ ಠಾಕೂರ್​ಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ. ಇವರಿಬ್ಬರು ಭಾರತವು ತಮ್ಮ ಐಸಿಸಿ ಏಕದಿನ ವಿಶ್ವಕಪ್ ಪ್ರಯಾಣವನ್ನು ಪ್ರಾರಂಭಿಸುವ ಗುವಾಹಟಿಯಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್, ಕುಲ್ದೀಪ್ ಕೂಡ ಕಮ್​ಬ್ಯಾಕ್ ಮಾಡುತ್ತಾರೆ. ವಿಶ್ರಾಂತಿಯ ಕಾರಣ ಜಸ್ಪ್ರೀತ್ ಬುಮ್ರಾ ಎರಡನೇ ಏಕದಿನ ಪಂದ್ಯದಲ್ಲಿ ಆಡಲಿಲ್ಲ. ತಂಡದ ಮ್ಯಾನೇಜ್‌ಮೆಂಟ್ ಅವರಿಗೆ ಕುಟುಂಬವನ್ನು ನೋಡಲು ಮತ್ತು ಸ್ವಲ್ಪ ವಿರಾಮ ತೆಗೆದುಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಬುಮ್ರಾ 3ನೇ ಏಕದಿನಕ್ಕೆ ಲಭ್ಯರಾಗಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?