AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸಿಡ್ನಿ ಟೆಸ್ಟ್‌ನಿಂದ ರೋಹಿತ್ ಶರ್ಮಾ ಔಟ್; ಬುಮ್ರಾಗೆ ತಂಡದ ನಾಯಕತ್ವ

Rohit Sharma OUT of Sydney Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಕಳಪೆ ಫಾರ್ಮ್‌ನಿಂದಾಗಿ ರೋಹಿತ್ ಸ್ವತಃ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಜಸ್ಪ್ರೀತ್ ಬುಮ್ರಾ ಹೊಸ ನಾಯಕರಾಗಿದ್ದು, ಶುಭ್‌ಮನ್ ಗಿಲ್ ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ. ರೋಹಿತ್‌ರ ಟೆಸ್ಟ್ ವೃತ್ತಿಜೀವನದ ಅಂತ್ಯಕ್ಕೆ ಇದು ಮುನ್ನುಡಿ ಎಂತಲೂ ಹೇಳಲಾಗುತ್ತಿದೆ.

IND vs AUS: ಸಿಡ್ನಿ ಟೆಸ್ಟ್‌ನಿಂದ ರೋಹಿತ್ ಶರ್ಮಾ ಔಟ್; ಬುಮ್ರಾಗೆ ತಂಡದ ನಾಯಕತ್ವ
ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ
ಪೃಥ್ವಿಶಂಕರ
|

Updated on:Jan 02, 2025 | 4:38 PM

Share

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ನಾಳೆಯಿಂದ ಸಿಡ್ನಿಯಲ್ಲಿ ಆರಂಭವಾಗಲಿದೆ. ಈ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಟೀಂ ಇಂಡಿಯಾ ಪಾಳಯದಿಂದ ಸ್ಫೋಟಕ ಸುದ್ದಿಯೊಂದ ಹೊರಬಿದ್ದಿದೆ. ಆ ಪ್ರಕಾರ ತಂಡದ ನಾಯಕ ರೋಹಿತ್ ಶರ್ಮಾರನ್ನು ಈ ಟೆಸ್ಟ್ ಪಂದ್ಯದಿಂದ ಹೊರಗಿಡಲು ನಿರ್ಧರಿಸಲಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ರೋಹಿತ್ ಬದಲಿಗೆ ಜಸ್ಪ್ರೀತ್ ಬುಮ್ರಾ ನಾಯಕರಾಗಲಿದ್ದು, ಶುಭ್​ಮನ್ ಗಿಲ್ ಅವರನ್ನು ಆಡುವ ಹನ್ನೊಂದರ ಬಳಗಕ್ಕೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ವಾಸ್ತವವಾಗಿ ತಂಡದ ನಿಯಮಿತ ನಾಯಕ ರೋಹಿತ್ ಶರ್ಮಾ ಕಳೆದ ಕೆಲವು ದಿನಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಈ ಹಿಂದೆ ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ನಡೆದಿದ್ದ ಟೆಸ್ಟ್ ಸರಣಿ ಮತ್ತು ನ್ಯೂಜಿಲೆಂಡ್ ವಿರುದ್ಧದ ತವರು ಟೆಸ್ಟ್ ಸರಣಿಯಲ್ಲಿಯೂ ರೋಹಿತ್ ಬ್ಯಾಟ್ ಮೌನಕ್ಕೆ ಶರಣಾಗಿತ್ತು. ಅದಲ್ಲದೆ ಇದೀಗ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲೂ ರೋಹಿತ್ ಎರಡಂಕಿ ದಾಟಲು ಕಷ್ಟಪಡುತ್ತಿದ್ದಾರೆ. ಹೀಗಾಗಿ ರೋಹಿತ್​ರನ್ನು ಟೆಸ್ಟ್ ತಂಡದಿಂದ ಕೈಬಿಡುವುದರ ಜೊತೆಗೆ ನಾಯಕತ್ವದಿಂದಲೂ ಕೆಳಗಿಳಿಸಬೇಕು ಎಂಬ ಕೂಗು ಜೋರಾಗಿ ಕೇಳಿಬಂದಿತ್ತು. ಇದೀಗ ವರದಿಯಾಗಿರುವಂತೆ ರೋಹಿತ್​ರನ್ನು ಕೊನೆಯ ಟೆಸ್ಟ್​ನಿಂದ ಹೊರಗಿಡಲಾಗಿದೆ. ಇದರ ಜೊತೆಗೆ ರೋಹಿತ್ ಅವರ ಟೆಸ್ಟ್ ವೃತ್ತಿಜೀವನ ಭಾಗಶಃ ಅಂತ್ಯವಾಗಿದೆ ಎಂತಲೇ ಹೇಳಲಾಗುತ್ತಿದೆ.

ಇದು ರೋಹಿತ್ ನಿರ್ಧಾರ?

ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಸ್ವತಃ ರೋಹಿತ್ ಶರ್ಮಾ ಅವರೇ ಕೊನೆಯ ಟೆಸ್ಟ್​ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ತಮ್ಮ ಕಳಪೆ ಫಾರ್ಮ್ ಅನ್ನು ಗಮನದಲ್ಲಿಟ್ಟುಕೊಂಡು ರೋಹಿತ್ ಶರ್ಮಾ ಅವರು ಸಿಡ್ನಿಯಲ್ಲಿ ಆಡುವುದಿಲ್ಲ ಎಂದು ತಂಡದ ಮ್ಯಾನೇಜ್‌ಮೆಂಟ್‌ಗೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರೋಹಿತ್ ಅವರು ಈ ಬಗ್ಗೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರಿಗೆ ತಿಳಿಸಿದ್ದು, ನಾಯಕನ ಈ ನಿರ್ಧಾರವನ್ನು ಗಂಭೀರ್ ಮತ್ತು ಅಗರ್ಕರ್ ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ವರದಿ ಮಾಡಿದೆ.

ರೋಹಿತ್ ಟೆಸ್ಟ್ ವೃತ್ತಿಜೀವನ ಅಂತ್ಯ?

ಒಂದು ವೇಳೆ ನಾಳಿನ ಟೆಸ್ಟ್​ನಲ್ಲಿ ರೋಹಿತ್ ಶರ್ಮಾ ಆಡದಿದ್ದರೆ, ಅವರ ಟೆಸ್ಟ್ ವೃತ್ತಿಜೀವನ ಭಾಗಶಃ ಅಂತ್ಯವಾಗಲಿದೆ. ಇದಕ್ಕೂ ಮುನ್ನವೇ ಈ ಟೆಸ್ಟ್ ಸರಣಿಯ ನಂತರ ರೋಹಿತ್ ಟೆಸ್ಟ್​ನಿಂದ ನಿವೃತ್ತಿಯಾಗಲಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಆ ಪ್ರಕಾರ ರೋಹಿತ್ ಸಿಡ್ನಿಯಲ್ಲಿ ಕೊನೆಯ ಟೆಸ್ಟ್ ಆಡುವುದರೊಂದಿಗೆ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿತ್ತು. ಆದರೀಗ ಸಿಡ್ನಿ ಟೆಸ್ಟ್‌ನಿಂದ ಹೊರಗುಳಿದಿರುವ ರೋಹಿತ್​ಗೆ ಮೆಲ್ಬೋರ್ನ್ ಟೆಸ್ಟ್ ಅವರ ವೃತ್ತಿಜೀವನದ ಕೊನೆಯ ಟೆಸ್ಟ್ ಆಗುವ ಸಾಧ್ಯತೆಗಳು ಹೆಚ್ಚಿವೆ. ಒಂದು ವೇಳೆ ಟೀಂ ಇಂಡಿಯಾ ಸಿಡ್ನಿ ಟೆಸ್ಟ್‌ನಲ್ಲಿ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ ತಲುಪಿದರೂ, ಆ ಪ್ರಶಸ್ತಿ ಕದನಕ್ಕೆ ರೋಹಿತ್ ಆಯ್ಕೆಯಾಗದಿರುವ ಸಾಧ್ಯತೆಯಿದೆ. ಅಂದರೆ, ತಂಡವು ಫೈನಲ್ ತಲುಪಿದರೆ ಜಸ್ಪ್ರೀತ್ ಬುಮ್ರಾ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Thu, 2 January 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ